Webdunia - Bharat's app for daily news and videos

Install App

ತಂದೆಯ ದೇಹವನ್ನು ತುಂಡರಿಸಿ ಬಿಸಾಡಿದ್ದ ಹೆಂಡತಿ, ಮಗ!

Webdunia
ಸೋಮವಾರ, 21 ನವೆಂಬರ್ 2022 (08:54 IST)
ಕೋಲ್ಕತ್ತಾ : ತನ್ನ ತಾಯಿಯೊಂದಿಗೆ ಸೇರಿ ನೌಕಾಪಡೆಯ ಮಾಜಿ ಅಧಿಕಾರಿಯನ್ನು ಕೊಂದು ಆತನ ಮೃತದೇಹವನ್ನು 6 ತುಂಡುಗಳಾಗಿ ಕತ್ತರಿಸಿ ಆತನ ಮಗನೇ ನೆರೆಹೊರೆಯಲ್ಲಿ ಬಿಸಾಡಿರುವ ಆಘಾತಕಾರಿ ಘಟನೆ ಪಶ್ಚಿಮ ಬಂಗಾಳದ ಬರುಯಿಪುರದಲ್ಲಿ ನಡೆದಿದೆ.
 
ಮೃತ ಅಧಿಕಾರಿ ಪತ್ನಿ ಹಾಗೂ ಮಗನನ್ನು ಪೊಲೀಸರು ಬಂಧಿಸಿದ್ದಾರೆ. ನೌಕಾಪಡೆಯ ಮಾಜಿ ಅಧಿಕಾರಿ ಉಜ್ವಲ್ ಚಕ್ರವರ್ತಿ (55) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತನ ಪತ್ನಿ ಮತ್ತು ಮಗನನ್ನು ಪೊಲೀಸರು ಬಂಧಿಸಿದ್ದಾರೆ.

ಪೊಲೀಸರ ಪ್ರಕಾರ, ಪಾಲಿಟೆಕ್ನಿಕ್ ವಿದ್ಯಾರ್ಥಿಯಾಗಿದ್ದ ತನ್ನ ಮಗ ಹಾಗೂ ತಂದೆ ಉಜ್ವಲ್ ನಡುವೆ ಜಗಳವಾಗಿತ್ತು. ಈ ವೇಳೆ ಮಗ ತಂದೆಯನ್ನು ತಳ್ಳಿದಾಗ ಅಲ್ಲೇ ಇಟ್ಟಿದ್ದ ಕುಚಿಗೆ ತಲೆ ಹೊಡೆದುಕೊಂಡು ಪ್ರಜ್ಞೆ ತಪ್ಪಿದ್ದಾನೆ.

ಬಳಿಕ ಮಗ ತಂದೆಯ ಕತ್ತು ಹಿಸುಕಿ ಕೊಂದಿದ್ದಾನೆ. ಕೊಂದ ನಂತರ ಹೆಂಡತಿ ಮತ್ತು ಮಗ ಮೃತದೇಹವನ್ನು ಸ್ನಾನದ ಗೃಹಕ್ಕೆ ಕೊಂಡೊಯ್ದಿದ್ದಾರೆ.

ಆಮೇಲೆ ಮಗ ತನ್ನ ಕಾರ್ಪೆಂಟರಿ ಕ್ಲಾಸ್ ಕಿಟ್ಬ್ಯಾಗ್ನಿಂದ ಹೆಕ್ಸಾ (ಮಿನಿ ಗರಗಸ) ಬಳಸಿ ದೇಹವನ್ನು 6 ತುಂಡುಗಳಾಗಿ ಕತ್ತರಿಸಿ, ಮನೆಯಿಂದ ಸುಮಾರು 500 ಮೀ. ದೂರದಲ್ಲಿ ವಿವಿಧೆಡೆ ಎಸೆದು ಬಂದಿದ್ದಾನೆ. ಮಗ ಪ್ಲಾಸ್ಟಿಕ್ನಿಂದ ಸುತ್ತಿದ ದೇಹದ ಭಾಗಗಳನ್ನು 6 ಬಾರಿ ತೆಗೆದುಕೊಂಡು ಹೋಗಿ ಎಸೆದು ಬಂದಿದ್ದಾನೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments