Webdunia - Bharat's app for daily news and videos

Install App

ವಿಚ್ಛೇದನ ನೀಡಲು ನಿರಾಕರಿಸಿದಕ್ಕೆ ಪತಿಯನ್ನೇ ಕೊಂದ ಪತ್ನಿ

Webdunia
ಶುಕ್ರವಾರ, 3 ಮೇ 2019 (07:05 IST)
ನವದೆಹಲಿ : ವಿಚ್ಛೇದನ ನೀಡಲು ನಿರಾಕರಿಸಿದ್ದಕ್ಕೆ ಮಹಿಳೆಯೊಬ್ಬಳು ತನ್ನ ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಕೊಲೆ ಮಾಡಿಸಿದ ಘಟನೆ ಗ್ರೇಟರ್ ನೋಯ್ಡಾದಲ್ಲಿ ನಡೆದಿದೆ.




ಅಮೃತಾ ಪತಿಯನ್ನೇ ಕೊಲೆ ಮಾಡಿಸಿದ ಪತ್ನಿ, ಓಂವೀರ್ ಕೊಲೆ ಮಾಡಿದ ಆಕೆಯ ಪ್ರಿಯಕರ, ರೂಪೇಶ್ ಸಿಂಗ್ ಚಾಂಡೇಲ್ ಕೊಲೆಯಾದ ಪತಿ. ಅಮೃತಾ ಓಂವೀರ್ ಎಂಬಾತನನ್ನು ಪ್ರೀತಿಸುತ್ತಿದ್ದರಿಂದ ಪತಿಗೆ ವಿಚ್ಛೇದನ ಕೊಡುವಂತೆ ಒತ್ತಾಯಿಸುತ್ತಿದ್ದಳು. ಆದ್ರೆ ಪತಿ ವಿಚ್ಛೇದನ ನೀಡಲು ನಿರಾಕರಿಸಿದ್ದಾನೆ. ಈ ವಿಚಾರಕ್ಕೆ ಕೋಪಗೊಂಡ ಅಮೃತಾ ಪ್ರಿಯಕರನ ಜೊತೆ ಸೇರಿ ಪತಿಯನ್ನು ಕೊಲೆ ಮಾಡಲು ಪ್ಲಾನ್ ಮಾಡಿದ್ದಾಳೆ.


ಅದಕ್ಕಾಗಿ ಪತಿಯನ್ನು ಕೊಲ್ಲಲು ಗೆಳೆಯ ಓಂವೀರ್ ಗೆ ಅಮೃತಾ 3 ಲಕ್ಷ ರೂ. ಹಣ ನೀಡಿದ ಹಿನ್ನಲೆಯಲ್ಲಿ ಓಂವೀರ್ ಹಾಗೂ ಇನ್ನಿಬ್ಬರು ಸೇರಿಕೊಂಡು ನೋಯ್ಡಾದ ಗೌರ್ ಪ್ರದೇಶದ ಬಳಿ ರೂಪೇಶ್‍ನ ಕಾರನ್ನು ಅಡ್ಡಗಟ್ಟಿ ಶೂಟ್ ಮಾಡಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.  ಈ ಪ್ರಕರಣದ ತನಿಖೆ ನಡೆಸಿದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.  ಆದರೆ ಈ ವಿಚಾರ ತಿಳಿದ ಪತ್ನಿ ಅಮೃತಾ ಆಭರಣಗಳ ಜೊತೆ ಪರಾರಿಯಾಗಿದ್ದಾಳೆ ಎಂಬುದಾಗಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments