Webdunia - Bharat's app for daily news and videos

Install App

ಮಹಿಳೆ ಮೇಲೆ ಅತ್ಯಾಚಾರ ಎಸಗಿ ಆಕೆಯ ಜೊತೆಗೆ ಮಗುವನ್ನು ಕೊಲೆ ಮಾಡಿದ ದುಷ್ಕರ್ಮಿಗಳು

Webdunia
ಶನಿವಾರ, 19 ಜನವರಿ 2019 (06:43 IST)
ಚೆನ್ನೈ : 22 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಎಸಗಿಸಿದ ದುಷ್ಕರ್ಮಿಗಳು ಆಕೆ ಹಾಗೂ ಆಕೆಯ ಮೂರುವರೆ ವರ್ಷದ ಮಗುವನ್ನು ಕೊಲೆ ಮಾಡಿದ ಅಮಾನವೀಯ ಘಟನೆ  ಚೆನ್ನೈನ ಅವಡಿ ಭಾಗದಲ್ಲಿ ಬುಧವಾರ ನಡೆದಿದೆ.


ಪತಿ  ಪಾಂಡಿಚೇರಿಗೆ ವ್ಯಾಪಾರಕ್ಕೆಂದು ತೆರಳಿದ್ದ ಹಿನ್ನಲೆಯಲ್ಲಿ ಮಹಿಳೆ ತನ್ನ ತಂದೆ ಮನೆಗೆ ಬಂದಿದ್ದಳು. ಆದರೆ ಪತಿ ಕರೆ ಮಾಡಿ ಕೆಲ ವಸ್ತುಗಳನ್ನು ಪಾಂಡಿಚೇರಿಗೆ ಕಳುಹಿಸುವಂತೆ ಹೇಳಿದ್ದರಿಂದ ಆಕೆ ಮನೆಗೆ ಬಂದು ಆ ವಸ್ತುಗಳನ್ನು ಕಳುಹಿಸಿ ರಾತ್ರಿ ಅಲ್ಲೇ ಮಲಗಿದ್ದಾಳೆ. ಆ ವೇಳೆ ಮನೆಗೆ ನುಗ್ಗಿದ ದುಷ್ಕರ್ಮಿಗಳು ಆಕೆಯ ಮೇಲೆ ಅತ್ಯಾಚಾರ ಎಸಗಿ ಬಳಿಕ ಆಕೆಯ ತಲೆಗೆ ಜಜ್ಜಿ ಕೊಲೆ ಮಾಡಿದ್ದಾರೆ. ಅಷ್ಟೇ ಅಲ್ಲದೇ ಅಲ್ಲೇ ಇದ್ದ ಆಕೆಯ ಮೂರುವರೆ ವರ್ಷದ ಮಗುವನ್ನು ಕೂಡ ಕೊಲೆ ಮಾಡಿದ್ದಾರೆ.


ಮರುದಿನ ಪಕ್ಕದ ಮನೆ ಹುಡುಗಿ ಮಗುವಿನ ಜೊತೆ ಆಟವಾಡಲು ಅಲ್ಲಿಗೆ ಬಂದಾಗ ಕೊಲೆ ನಡೆದಿರುವುದು ತಿಳಿದುಬಂದಿದೆ. ತಕ್ಷಣ ಆಕೆ ಈ ವಿಚಾರ ತನ್ನ ತಂದೆ ತಿಳಿಸಿ ಆನಂತರ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ವಿಚಾರಣೆ ನಡೆಸುತ್ತಿದ್ದ ವೇಳೆ ವೀರ್ ಕುಮಾರ್ ಎಂಬಾತ  ಅನುಮಾನಾಸ್ಪದವಾಗಿ ಓಡಾಡುತ್ತಿರುವುದು ತಿಳಿದು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆನೆ ಜತೆ ಸೆಲ್ಪಿ ವಿಡಿಯೋ ವೈರಲ್, ಇನ್ಮುಂದೆ ಈ ಥರ ಮಾಡುವವರ ವಿರುದ್ಧ ಕ್ರಮಕ್ಕೆ ಈಶ್ವರ್ ಖಂಡ್ರೆ ಸೂಚನೆ

ಪಾಕ್ ವಿರುದ್ಧ ಅದು ಸರಿಯಾದ ಪ್ರತೀಕಾರ: ಆಪರೇಷನ್ ಸಿಂಧೂರ್‌ನ್ನು ಶ್ಲಾಘಿಸಿದ ಜಪಾನಿನ ಕಾರ್ಯತಂತ್ರ ತಜ್ಞ

IPL 2025: ಅನುಚಿತ ವರ್ತನೆಗೆ ಡೆಲ್ಲಿ ವೇಗದ ಬೌಲರ್‌ ಮುಕೇಶ್‌ ಕುಮಾರ್‌ಗೆ ಬಿತ್ತು ದಂಡ

ಜಮ್ಮು ಕಾಶ್ಮೀರದ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ಯೋಧ ಹುತಾತ್ಮ

ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ: ಡಿಸಿಎಂ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments