Webdunia - Bharat's app for daily news and videos

Install App

ತರಕಾರಿ ತರ್ತೀನಿ ಅಂತಾ ಮಾರ್ಕೆಟ್‌ಗೆ ಹೋದ ಮಹಿಳೆ ಪ್ರಿಯಕರನೊಂದಿಗೆ ಪರಾರಿ!

Webdunia
ಸೋಮವಾರ, 19 ಜೂನ್ 2023 (10:26 IST)
ಲಕ್ನೋ : ಮಾರ್ಕೆಟ್ಗೆ ಹೋಗಿ ತರಕಾರಿ ತಗೊಂಡು ಬರ್ತೀನಿ ಅಂತಾ ಹೋದ ನವವಿವಾಹಿತೆ ಮದುವೆಯಾದ ಒಂದೇ ವಾರಕ್ಕೆ ಗಂಡನನ್ನ ಬಿಟ್ಟು ಪ್ರಿಯಕರನೊಂದಿಗೆ ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
 
ಮೇ 31 ರಂದು ಮದುವೆಯಾಗಿದ್ದ ಮಹಿಳೆ ಒಂದೇ ವಾರಕ್ಕೆ ಗಂಡನನ್ನ ಬಿಟ್ಟು ಪರಾರಿಯಾಗಿರುವುದು ತಡವಾಗಿ ಬೆಳಕಿಗೆ ಬಂದಿದೆ. ಕುಟುಂಬಸ್ಥರನ್ನು ಭೇಟಿ ಮಾಡಬೇಕೆಂಬ ನೆಪದಲ್ಲಿ ತವರು ಮನೆಗೆ ಬಂದಿದ್ದ ಆಕೆ, ಮನೆಗೆ ಸಾಮಾನು ತರ್ತೀನಿ ಅಂತಾ ಮಾರುಕಟ್ಟೆಗೆ ಹೋದವಳೇ ತನ್ನ ಪ್ರಿಯಕರನೊಂದಿಗೆ ಎಸ್ಕೇಪ್ ಆಗಿದ್ದಾಳೆ. ಜೊತೆಗೆ ತವರು ಮನೆಯಲ್ಲಿದ್ದ ಚಿನ್ನಾಭರಣವನ್ನೆಲ್ಲಾ ದೋಚಿಕೊಂಡು ಹೋಗಿದ್ದಾಳೆ ಎಂಬುದು ತಿಳಿದುಬಂದಿದೆ.

ಮಗಳು ಮನೆಗೆ ಬಾರದೇ ಇದ್ದಾಗ ಆತಂಕಕ್ಕೊಳಗಾದ ಪೋಷಕರು ಫೋನ್ ಮಾಡಿದ್ದಾರೆ. ಫೋನ್ ಸ್ವಿಚ್ ಆಫ್ ಆಗಿರುವುದು ಕಂಡು ಹುಡುಕಾಟ ನಡೆಸಿದ್ದಾರೆ. ನಂತರ ತನ್ನ ಪ್ರಿಯಕರನೊಂದಿಗೆ ಓಡಿ ಹೋಗಿರುವುದು ತಿಳಿದು ಪೊಲೀಸರಿಗೆ ದೂರು ನೀಡಿದ್ದಾರೆ. ಈ ಸಂಬಂಧ ಕೇಸ್ ದಾಖಲಿಸಿಕೊಂಡ ಪೊಲೀಸರು ಮಹಿಳೆ ಹಾಗೂ ಆಕೆಯ ಗೆಳೆಯನಿಗಾಗಿ ತೀವ್ರ ಶೋಧ ಕಾರ್ಯ ಆರಂಭಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments