Webdunia - Bharat's app for daily news and videos

Install App

ರಜೆ ಕೇಳಿದ್ದಕ್ಕೆ ಮಾಲೀಕ ಗದರಿದ್ದಕ್ಕೆ ಆತನ ಪತ್ನಿ, ಮಗನನ್ನೇ ಕೊಂದ ಕೆಲಸದಾತ

Sampriya
ಶನಿವಾರ, 5 ಜುಲೈ 2025 (16:05 IST)
Photo Credit X
ದೆಹಲಿಯ ಲಜಪತ್ ನಗರದಲ್ಲಿನ 42 ವರ್ಷದ ಮಹಿಳೆ ಮತ್ತು ಆಕೆಯ ಅಪ್ರಾಪ್ತ ಮಗನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಶನಿವಾರ ದಾಖಲಾಗಿದೆ. 

ಅಪರಾಧ ಎಸಗಿ ಪರಾರಿಯಾಗಲು ಪ್ರಯತ್ನಿಸುತ್ತಿದ್ದ ಅಂಗಡಿಯ ಕೆಲಸಗಾರನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂತ್ರಸ್ತರನ್ನು ರುಚಿಕಾ ಸೇವಾನಿ ಮತ್ತು ಅವರ 14 ವರ್ಷದ ಮಗ ಕ್ರಿಶ್ ಎಂದು ಗುರುತಿಸಲಾಗಿದೆ. ಆರೋಪಿ, 24 ವರ್ಷದ ಮುಖೇಶ್, ರುಚಿಕಾ ಅವರ ಪತಿ ಕುಲದೀಪ್ ಸೆವಾನಿ ಒಡೆತನದ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. 

"ನಾನು ಅವನನ್ನು ಯಾವುದರ ಬಗ್ಗೆಯೂ ಗದರಿಸಿಲ್ಲ. ನಾನು ಯಾವಾಗಲೂ ಅವರ ಜತೆ ಸಭ್ಯನಾಗಿಯೇ ನಡೆದುಕೊಂಡಿದ್ದು, ಯಾಕೆ ಈ ರೀತಿಯ ಕೃತ್ಯ ಎಸಗಿದ್ದಾನೆ ಎಂದು ಗೊತ್ತಾಗ್ತಿಲ್ಲ ಎಂದು ಆಕೆಯ ಪತಿ ಹೇಳಿದ್ದಾರೆ. 

ಪೊಲೀಸ್ ತನಿಖೆಯಲ್ಲಿ ಆಗಾಗ ರಜೆ ಹಾಕಿದ್ದಕ್ಕೆ ಛೀಮಾರಿ ಹಾಕಿದ್ದರಿಂದ ಮನನೊಂದ ಮುಖೇಶ್ ದಾಳಿಗೆ ಯೋಜನೆ ರೂಪಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಹತ್ಯೆಯಾದ ಕೆಲವೇ ಗಂಟೆಗಳ ನಂತರ ಅವರನ್ನು ಗುರುವಾರ ಮುಂಜಾನೆ ಹೊಸದಿಲ್ಲಿ ರೈಲು ನಿಲ್ದಾಣದಲ್ಲಿ ಬಂಧಿಸಲಾಯಿತು.

"ರಾತ್ರಿ 9.30 ರ ಸುಮಾರಿಗೆ, ಮನೆಯೊಳಗೆ ರಕ್ತವಿದೆ ಮತ್ತು ಯಾರೂ ಬಾಗಿಲು ತೆರೆಯುತ್ತಿಲ್ಲ ಎಂದು ನನಗೆ ಉದ್ರಿಕ್ತ ಕರೆ ಬಂತು" ಎಂದು ಕುಲದೀಪ್ ಅವರ ಸೋದರಸಂಬಂಧಿ ಕೇತನ್ ಹೇಳಿದರು. ಕೇತನ್ ಮನೆಗೆ ಧಾವಿಸಿ ನಂತರ ಪೊಲೀಸರ ಸಹಾಯದಿಂದ ಒಳಪ್ರವೇಶಿಸಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮರನಾಥ ಯಾತ್ರೆ 2025: ಐದು ಬಸ್‌ಗಳು ಪರಸ್ಪರ ಡಿಕ್ಕಿ, 36ಯಾತ್ರಾರ್ಥಿಗಳಿಗೆ ಗಾಯ

ಆರ್ ಎಸ್ಎಸ್ ಬಗ್ಗೆ ಹುಚ್ಚುತನದ ಹೇಳಿಕೆ ನೀಡಿದ್ದಕ್ಕೆ ಕ್ಷಮೆ ಕೇಳಿ: ಯಡಿಯೂರಪ್ಪ

ದ.ಕನ್ನಡ, ಮದುವೆಯಾಗುವುದಾಗಿ ನಂಬಿಸಿ, ತಾಯಿಯಾಗುವಂತೆ ಮಾಡಿ ಎಸ್ಕೇಪ್ ಆಗಿದ್ದ ಆರೋಪಿ ವಶಕ್ಕೆ

Arecanut Price: ಅಡಿಕೆ, ಕೊಬ್ಬರಿ ಬೆಲೆ ಇಳಿಕೆ, ಕಾಳುಮೆಣಸು, ಕೊಬ್ಬರಿ ಎಷ್ಟಾಗಿದೆ ನೋಡಿ

ಆಷಾಢ ಶುಕ್ರವಾರ ಮನೆಗೆ ಹೊಸ ಅತಿಥಿ ಬರಮಾಡಿಕೊಂಡ ತೇಜಸ್ವಿ ಸೂರ್ಯ ದಂಪತಿ: ವಿಡಿಯೋ

ಮುಂದಿನ ಸುದ್ದಿ
Show comments