Select Your Language

Notifications

webdunia
webdunia
webdunia
webdunia

ಕೇಂದ್ರ ಬಜೆಟ್ ಮೇಲೆ ಜಗತ್ತು ಕಣ್ಣಿಟ್ಟಿದೆ : ನರೇಂದ್ರ ಮೋದಿ

ಕೇಂದ್ರ ಬಜೆಟ್ ಮೇಲೆ ಜಗತ್ತು ಕಣ್ಣಿಟ್ಟಿದೆ : ನರೇಂದ್ರ ಮೋದಿ
ನವದೆಹಲಿ , ಮಂಗಳವಾರ, 31 ಜನವರಿ 2023 (12:38 IST)
ನವದೆಹಲಿ : ಜಾಗತಿಕ ಅನಿಶ್ಚಿತತೆಯ ನಡುವೆ ಭಾರತದ ಬಜೆಟ್ ಮೇಲೆ ಜಗತ್ತು ಕಣ್ಣಿಟ್ಟಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಈ ಬಾರಿಯ ಬಜೆಟ್ ಅಧಿವೇಶನಕ್ಕೂ ಮುನ್ನ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಅವರು, ನಾಳೆ (ಬುಧವಾರ) ಕೇಂದ್ರ ಬಜೆಟ್ ಮಂಡಿಸಲಿರುವ ವಿತ್ತ ಸಚಿವರು ಮಹಿಳೆಯಾಗಿದ್ದು, ಭಾರತ ಮಾತ್ರವಲ್ಲ, ಇಡೀ ವಿಶ್ವವೇ ನಮ್ಮ ಬಜೆಟ್ ಮೇಲೆ ಕಣ್ಣಿಟ್ಟಿದೆ.

ನಿರ್ಮಲಾ ಸೀತಾರಾಮನ್ ಅವರು ಎಲ್ಲಾ ನಿರೀಕ್ಷೆಗಳನ್ನು ಪೂರೈಸುತ್ತಾರೆ ಎಂದು ಖಾತ್ರಿಯಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಸಂಸತ್ತಿನಲ್ಲಿ ಮೊದಲ ಬಾರಿಗೆ ಹೊಸ ಸಂಸದರು ಮಾತನಾಡುವಾಗ ಇಡೀ ಸಂಸತ್ತು ಅವರಿಗೆ ಗೌರವವನ್ನು ನೀಡಿ ವಿಶ್ವಾಸವನ್ನು ನೀಡುವ ವಾತಾವರಣವನ್ನು ಸೃಷ್ಟಿಸುವುದು ಸಂಸತ್ತಿನಲ್ಲಿ ಸಂಪ್ರದಾಯವಾಗಿದೆ.

ಅದೇ ರೀತಿ ಇಂದಿನ ಭಾಷಣವು ರಾಷ್ಟ್ರಪತಿಯವರ ಮೊದಲ ಭಾಷಣವಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೊದಲ ಬಾರಿಗೆ ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಮನೆಗೆ ತಡವಾಗಿ ಬಂದಿದ್ದಕ್ಕೆ ಪತ್ನಿ ಮಾಡಿದ್ದಾದ್ರು ಏನು!