ಮುಸ್ಲಿಂ ಹೆಸರಿದ್ದ ಗ್ರಾಮಕ್ಕೆ ಕಬೀರ್‌ಧಾಮ್ ಮರುನಾಮಕರಣ ಮಾಡಿದ ಯೋಗಿ ಸರ್ಕಾರ

Sampriya
ಸೋಮವಾರ, 27 ಅಕ್ಟೋಬರ್ 2025 (17:03 IST)
Photo Credit X
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸೋಮವಾರ ಲಖಿಂಪುರ ಖೇರಿ ಜಿಲ್ಲೆಯ ಮುಸ್ತಫಾಬಾದ್ ಗ್ರಾಮವನ್ನು 'ಕಬೀರ್ಧಾಮ್' ಎಂದು ಮರುನಾಮಕರಣ ಮಾಡಿ ಆದೇಶ ಹೊರಡಿಸಿದ್ದಾರೆ.

ಸಂತ ಕಬೀರ್‌ ಅವರೊಂದಿಗೆ ನಂಟು ಹೊಂದಿರುವ ಪ್ರದೇಶದ ಇತಿಹಾಸ ಮತ್ತು ಸಾಂಸ್ಕೃತಿಕ ಗುರುತನ್ನು ಉಳಿಸುವ ಸಲುವಾಗಿ ಗ್ರಾಮದ ಹೆಸರನ್ನು ಮರುನಾಮಕರಣ ಮಾಡಿರುವುದಾಗಿ ಅವರು ಹೇಳಿದರು.

"ಸ್ಮೃತಿ ಮಹೋತ್ಸವ ಮೇಳ 2025" ರ ಸಂದರ್ಭದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಆದಿತ್ಯನಾಥ್ ಅವರು, ಧಾರ್ಮಿಕ ಪ್ರಾಮುಖ್ಯತೆ ಹೊಂದಿರುವ ಸೈಟ್‌ಗಳನ್ನು ಪುನರುಜ್ಜೀವನಗೊಳಿಸಲು ಸರ್ಕಾರ ಈಗ ಹಣವನ್ನು ಖರ್ಚು ಮಾಡುತ್ತಿದೆ ಎಂದರು.

ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಜಾತ್ಯತೀತತೆಯ ಹೆಸರಿನಲ್ಲಿ ಸ್ಥಳದ ಗುರುತನ್ನು ಬದಲಾಯಿಸುವುದು ಬೂಟಾಟಿಕೆ ಮತ್ತು ಜಾತ್ಯತೀತತೆಯ ನೆಪದಲ್ಲಿ ಪರಂಪರೆಯನ್ನು ಅಳಿಸುವ ಯುಗ ಕೊನೆಗೊಂಡಿದೆ ಎಂದು ಹೇಳಿದರು.

ಈ ವೇಳೆ ಮಾತನಾಡಿದ ಮುಖ್ಯಮಂತ್ರಿಗಳು, ಮುಸ್ಲಿಂ ಜನಸಂಖ್ಯೆ ಇಲ್ಲದಿದ್ದರೂ ಗ್ರಾಮಕ್ಕೆ ಮುಸ್ತಫಾಬಾದ್ ಎಂದು ಹೆಸರಿಟ್ಟಿರುವುದು ಅಚ್ಚರಿ ಮೂಡಿಸಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುರಂಗ ಮಾರ್ಗ ರಚಿಸಿದರೆ ಬೆಂಗಳೂರಿಗೆ ಆಪತ್ತು: ಛಲವಾದಿ ನಾರಾಯಣಸ್ವಾಮಿ

ಲಾಡ್ಜ್‌ನಲ್ಲಿ ಆತ್ಮಹತ್ಯೆಗೆ ಶರಣಾದ ಗುತ್ತಿಗೆದಾರ ಆನಂದ ಹೆಗಡೆ

ಕೆಆರ್‌ಎಸ್‌ ಮೂರನೇ ಬಾರಿ ಭರ್ತಿ, ನಮ್ಮ ಸರ್ಕಾರದ ಮೇಲೆ ವರುಣನ ಕೃಪೆಯಿದೆ ಎಂದ ಡಿಕೆಶಿ

ಕಬ್ಬನ್ ಪಾರ್ಕ್‌ಗೆ ₹5 ಕೋಟಿ ನೀಡುವ ಬದಲು ಮೊದಲು ರಸ್ತೆ ಗುಂಡಿ ಮುಚ್ಚಿ: ಡಿಕೆಶಿಗೆ ನೆಟ್ಟಿಗರು ತರಾಟೆ

ಬುಡಕಟ್ಟು ಜನರಿಗೆ ಕಳಪೆ ಆಹಾರ, ಏನಾದ್ರೂ ಆದ್ರೆ ಯಾರು ಹೊಣೆ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments