Select Your Language

Notifications

webdunia
webdunia
webdunia
webdunia

ವಂಚಿಸಿದ ಪ್ರಿಯಕರನ ಮೇಲೆ ಕುದಿಯುವ ಎಣ್ಣೆ ಸುರಿದ ಯುವತಿ!

ಚೆನ್ನೈ
ಚೆನ್ನೈ , ಮಂಗಳವಾರ, 14 ಮಾರ್ಚ್ 2023 (08:19 IST)
ಚೆನ್ನೈ : ವಂಚಿಸಿದ ಪ್ರಿಯಕರನ ಮೇಲೆ ಯುವತಿಯೊಬ್ಬಳು ಕುದಿಯುವ ಎಣ್ಣೆ ಸುರಿದ ಘಟನೆ ತಮಿಳುನಾಡಿನ ಈರೋಡ್ನಲ್ಲಿ ನಡೆದಿದೆ.

ಕಾರ್ತಿ (27) ತಮಿಳುನಾಡಿನ ಭವಾನಿಯ ವರ್ಣಪುರಂ ನಿವಾಸಿಯಾಗಿದ್ದು, ಪೆರುಂದುರೈನ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ. ಈತ ತನ್ನ ಸಂಬಂಧಿ ಮೀನಾ ದೇವಿಯೊಂದಿಗೆ ಸಂಬಂಧ ಹೊಂದಿದ್ದ. ಜೊತೆಗೆ ಮದುವೆಯಾಗುವುದಾಗಿಯೂ ಭರವಸೆ ನೀಡಿದ್ದ.

ಆದರೆ ಕಾರ್ತಿ ಬೇರೊಬ್ಬ ಮಹಿಳೆಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿರುವ ವಿಷಯವನ್ನು ಮೀನಾದೇವಿ ತಿಳಿದಿದ್ದಾಳೆ. ಅದಾದ ಬಳಿಕ ಈ ವಿಚಾರವಾಗಿ ಇಬ್ಬರ ನಡುವೆ ಆಗಾಗ ಜಗಳ ನಡೆಯುತ್ತಿತ್ತು.

ಅದಾದ ಬಳಿಕ ಮೀನಾದೇವಿಯನ್ನು ಕಾರ್ತಿ ಭೇಟಿಯಾಗಲು ಹೋದಾಗ ಮತ್ತೆ ಜಗಳ ನಡೆದಿದೆ. ಇದರಿಂದ ಕೋಪಗೊಂಡ ಮೀನಾ ದೇವಿ ಆತನ ಮೇಲೆ ಕುದಿಯುವ ಎಣ್ಣೆಯನ್ನು ಸುರಿದಿದ್ದಾಳೆ. 

Share this Story:

Follow Webdunia kannada

ಮುಂದಿನ ಸುದ್ದಿ

ನನಗೆ ಅಸಮಾಧಾನ ಇದೆ ಅಂತಾ ನಾನು ಹೇಳಿಲ್ಲ: ಸಚಿವ ಸೋಮಣ್ಣ