ರೈತರ ಮೇಲೆ 'ವ್ಯವಸ್ಥಿತ ದಾಳಿ'ನಡೆದಿದೆ

Webdunia
ಬುಧವಾರ, 6 ಅಕ್ಟೋಬರ್ 2021 (12:52 IST)
ನವದೆಹಲಿ : ನಾಲ್ವರು ರೈತರು ಸೇರಿ 8 ಮಂದಿ ಸಾವಿಗೀಡಾದ ಉತ್ತರ ಪ್ರದೇಶದ ಲಖಿಂಪುರ್ ಖೇರಿ ಹಿಂಸಾಚಾರದಲ್ಲಿ ರೈತರ ಮೇಲೆ 'ವ್ಯವಸ್ಥಿತ ದಾಳಿ'ನಡೆದಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಬಿಜೆಪಿ ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಹಿಂಸಾಚಾರ ನಡೆದ ಲಖಿಂಪುರಕ್ಕೆ ಕಾಂಗ್ರೆಸ್ ನಿಯೋಗದ ಭೇಟಿಗೆ ಯೋಗಿ ಆದಿತ್ಯನಾಥ್ ಸರ್ಕಾರ ನಿರಾಕರಿಸಿದ ಬೆನ್ನಲ್ಲೇ ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ರೈತರನ್ನ ವ್ಯವಸ್ಥಿತವಾಗಿ ಕೊಲೆ ಮಾಡಲಾಗುತ್ತಿದೆ. ಇವತ್ತು ನಾವು ಎರಡು ಮುಖ್ಯಮಂತ್ರಿಗಳೊಂದಿಗೆ ಹಿಂಸಾಚಾರ ನಡೆದ ಸ್ಥಳಕ್ಕೆ ಭೇಟಿ ನೀಡಲು ಪ್ರಯತ್ನಿಸುತ್ತಿದ್ದೇವೆ. ಆದರೆ 144 ಸೆಕ್ಷನ್ ಹೇರಿ ಕೇವಲ ಮೂರು ಜನರಿಗೆ ಮಾತ್ರ ಅವಕಾಶ ನೀಡಿದ್ದಾರೆ. ನಾವೀಗ ಅಲ್ಲಿಗೆ ಹೋಗುತ್ತಿದ್ದೇವೆ. ನಾವು ಅಲ್ಲಿಗೆ ಹೋಗಿ ರೈತರಿಗೆ ಬೆಂಬಲ ಸೂಚಿಸುತ್ತೇವೆ. ಯಾಕೆ ಉತ್ತರ ಪ್ರದೇಶ ಸರ್ಕಾರ, ಕಾಂಗ್ರೆಸ್ ನಿಯೋಗ ಅಲ್ಲಿಗೆ ಹೋಗಲು ಬಿಡುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.
ಇದೇ ವೇಳೆ ಪ್ರಿಯಾಂಕ ಗಾಂಧಿ ಬಂಧಿಸಿರುವ ಕುರಿತು ಮಾತನಾಡಿ..ರೈತರ ಬಗ್ಗೆ ಧ್ವನಿ ಎತ್ತಿದ ಪ್ರಿಯಾಂಕರನ್ನೂ ಬಂಧಿಸಿದ್ದಾರೆ. ಅವರು ರೈತರ ಸಮಸ್ಯೆಯ ಪ್ರಶ್ನೆಗಳಿಗೆ ಮಾತ್ರ ಪ್ರತಿಕ್ರಿಯಿಸುತ್ತಾರೆ. ನಾವು ಮ್ಯಾನ್ ಹ್ಯಾಂಡ್ಲಿಂಗ್ನಿಂದ ಪ್ರಭಾವಿತರಾಗಿಲ್ಲ. ಇಲ್ಲಿ ರೈತರನ್ನು ಕೊಲ್ಲಲಾಗುತ್ತಿದೆ. ದೇಶದಲ್ಲಿ ಸರ್ವಾಧಿಕಾರಿ ಆಡಳಿತ ಇದೆ ಎಂದು ಮೋದಿ ವಿರುದ್ಧ ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಇನ್ಮುಂದೆ ಲಗೇಜ್ ಸಾಗಿಸುವವರು ಈ ಸುದ್ದಿ ಓದಲೇ ಬೇಕು

ಮಹಾಶಿವರಾತ್ರಿ ದಿನ ಪವರ್ ದೇವರ ಮೊರೆ ಹೋದ ಡಿಕೆ ಶಿವಕುಮಾರ್ ಪತ್ನಿ ಉಷಾ

ಪಕ್ಷದ ವಿಚಾರ ಅಂತಾ ಬಂದ್ರೆ ನಾವೆಲ್ಲರೂ ಒಂದೇ: ಪ್ರಿಯಾಂಕ್ ಖರ್ಗೆ

ಮಂಡ್ಯ: ಕೆಮಿಕಲ್ ಟ್ಯಾಂಕ್ ಸ್ಫೋಟಕ್ಕೆ ಇಬ್ಬರು ಕಾರ್ಮಿಕರು ಸಾವು

ಮಾರ್ಚ್ 9 ರಂದು ಸ್ಪೀಕರ್ ಓಂ ಬಿರ್ಲಾಗೆ ಅಗ್ನಿ‍ಪರೀಕ್ಷೆ: ಅವಿಶ್ವಾಸ ನಿರ್ಣಯದ ಚರ್ಚೆಗೆ ವೇದಿಕೆ ಸಜ್ಜು

ಮುಂದಿನ ಸುದ್ದಿ
Show comments