Webdunia - Bharat's app for daily news and videos

Install App

ದೇಶದಲ್ಲಿ ಅಲ್ಪಪ್ರಮಾಣದಲ್ಲಿ ಅಸಹಿಷ್ಣುತೆಯಿದೆ: ಒಪ್ಪಿಕೊಂಡ ಸಚಿವ ವೆಂಕಯ್ಯನಾಯ್ಡು

Webdunia
ಸೋಮವಾರ, 30 ನವೆಂಬರ್ 2015 (16:16 IST)
ಯಾವುದೇ ಪ್ರತ್ಯೇಕ ಘಟನೆಯ ಬಗ್ಗೆ ಪ್ರಸ್ತಾಪಿಸದ ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಎಂ.ವೆಂಕಯ್ಯನಾಯ್ಡು, ದೇಶದಲ್ಲಿ ಅಲ್ಪಮಟ್ಟಿನ ಅಸಹಿಷ್ಣುತೆ ಇದೆ ಎಂದು ಮೊದಲ ಬಾರಿಗೆ ಒಪ್ಪಿಕೊಂಡಿದ್ದಾರೆ.
 
ಅಸಹಿಷ್ಣುತೆ ಕುರಿತಂತೆ ರಾಜ್ಯಸಭೆಯಲ್ಲಿ ನಡೆದ ಚರ್ಚೆಯಲ್ಲಿ ಪಾಲ್ಗೊಂಡ ನಾಯ್ಡು, ಸಮಾಜದಲ್ಲಿ ಸ್ವಲ್ಪ ಮಟ್ಟಿನ ಅಸಹಿಷ್ಣುತೆ ಎದುರಾಗಿದ್ದು ಅದನ್ನು ಗುರುತಿಸಿ ಸದೆಬಡೆಯಲಾಗುವುದು ಎಂದು ಭರವಸೆ ನೀಡಿದ್ದಾರೆ.
 
ದೇಶದಲ್ಲಿ ಕೆಲವರು ಅಸಹಿಷ್ಣುತೆ ಕುರಿತಂತೆ ಮನಬಂದಂತೆ ತಮಾಷೆ ರೀತಿಯಲ್ಲಿ ಹೇಳಿಕೆ ನೀಡುತ್ತಿರುವುದು ಸರಿಯಲ್ಲ. ಇಂತಹ ಹೇಳಿಕೆಗಳನ್ನು ತೀವ್ರವಾಗಿ ಖಂಡಿಸುವುದು ಅನಿವಾರ್ಯವಾಗಿದೆ ಎಂದರು. 
 
ದೇಶದ ಕೆಲ ಭಾಗಗಳಲ್ಲಿ ದಲಿತರು ಮತ್ತು ಸಾಹಿತಿಗಳ ಹತ್ಯೆ ಘಟನೆಗಳನ್ನು ಪ್ರಸ್ತಾಪಿಸಿದ ನಾಯ್ಡು, ಕೆಲವು ಕಡೆ ಅಸಹಿಷ್ಣುತೆ ಎದುರಾಗಿದ್ದು, ಅಂತಹ ಘಟನೆಗಳನ್ನು ನಿರ್ಧಾಕ್ಷಿಣ್ಯವಾಗಿ ನಿಯಂತ್ರಿಸಲಾಗುವುದು ಎಂದು ಗುಡುಗಿದರು.
 
ನರೇಂದ್ರ ಮೋದಿ ಪ್ರಧಾನಿಯಾದ ಕೂಡಲೇ ಇಂತಹ ಘಟನೆಗಳು ನಡೆಯುತ್ತಿಲ್ಲ. ಮೊದಲಿನಿಂದಲೂ ಇಂತಹ ಘಟನೆಗಳು ನಡೆಯುತ್ತಿವೆ. ಘಟನೆಗಳ ಬಗ್ಗೆ ಕೆಲವರು ತೀವ್ರವಾದ ಹೇಳಿಕೆ ನೀಡುತ್ತಿದ್ದಾರೆ. ಇಂತಹ ಹೇಳಿಕೆಗಳನ್ನು ನಾವು ಖಂಡಿಸಲೇಬೇಕಾಗಿದೆ ಎಂದು ಕಿಡಿಕಾರಿದರು.
 
ಖ್ಯಾತ ಸಾಹಿತಿ ಸಲ್ಮಾನ್ ರಷ್ದಿಯವರ ವಿವಾದಾತ್ಮಕ ಪುಸ್ತಕ ದಿ ಸಟಾನಿಕ್ ವರ್ಸೆಸ್‌ಗೆ ನಿಷೇಧ ಹೇರುವುದು ತಪ್ಪು ಎನ್ನುವ ಮಾಜಿ ಗೃಹ ಸಚಿವ ಪಿ.ಚಿದಂಬರಂ ಹೇಳಿಕೆಯನ್ನು ಸ್ವಾಗತಿಸುವುದಾಗಿ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಎಂ.ವೆಂಕಯ್ಯನಾಯ್ಡು ಹೇಳಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments