Webdunia - Bharat's app for daily news and videos

Install App

ಜನತಾ ಪರಿವಾರ ಅಧಿಕಾರಕ್ಕೆ ಬಂದಲ್ಲಿ ಮತ್ತೆ ಜಂಗಲ್ ರಾಜ್: ಜೇಟ್ಲಿ

Webdunia
ಗುರುವಾರ, 1 ಅಕ್ಟೋಬರ್ 2015 (16:48 IST)
ಬಿಹಾರ್ ಸಿಎಂ ನಿತೀಶ್ ಕುಮಾರ್ ನೇತೃತ್ವದ ಜನತಾ ಪರಿವಾರ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬಂದಲ್ಲಿ ಜಂಗಲ್ ರಾಜ್ ಕಾಣಿಸಿಕೊಳ್ಳಲಿದೆ ಎಂದು ಕೇಂದ್ರ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.
 
ಆರ್‌ಜೆಡಿ, ಜೆಡಿಯು ಮತ್ತು ಕಾಂಗ್ರೆಸ್ ಮೈತ್ರಿಕೂಟದ ಜನತಾ ಪರಿವಾರ ಬಿಹಾರ್ ವಿಧಾನಸಭೆ ಚುನಾವಣೆಯಲ್ಲಿ ಸೋಲನುಭವಿಸಲಿದೆ. ಒಂದು ವೇಳೆ ಮತ್ತೆ ಅಧಿಕಾರಕ್ಕೆ ಬಂದಲ್ಲಿ ಬಿಹಾರ್ ರೌಡಿಗಳ ತಾಣವಾಗಲಿದೆ ಎಂದು ಮತದಾರರನ್ನು ಎಚ್ಚರಿಸಿದರು.
 
ಮುಂಬರುವ ಬಿಹಾರ್ ವಿಧಾನಸಭೆ ಚುನಾವಣೆ ಅಂಗವಾಗಿ ಪಕ್ಷದ ವಿಜನ್ ಡಾಕ್ಯುಮೆಂಟ್ ಬಿಡುಗಡೆಗೊಳಿಸಿದ ಜೇಟ್ಲಿ, ಮಧ್ಯಪ್ರದೇಶವನ್ನು ಅಭಿವೃದ್ಧಿಗೊಳಿಸಿದಂತೆ, ಬಿಜೆಪಿ ನೇತೃತ್ವದ ಎನ್‌ಡಿಎ ಸರಕಾರ ಬಿಹಾರ್ ರಾಜ್ಯದ ಅಭಿವೃದ್ಧಿಗೂ ಕಂಕಣಬದ್ಧವಾಗಿದೆ ಎಂದರು. 
 
ಜನತಾ ಪರಿವಾರದಲ್ಲಿರುವ ಪಕ್ಷಗಳು ಅವಕಾಶವಾದಿ ಪಕ್ಷಗಳು. ಬಿಹಾರ್ ರಾಜ್ಯದ ಅಭಿವೃದ್ಧಿಯ ಬಗ್ಗೆ ಕಿಂಚಿತ್ತು ಕಳಕಳಿಯಿಲ್ಲ. ರಾಜ್ಯವನ್ನು ಮತ್ತಷ್ಟು ಹಿಂದುಳಿಯುವಂತೆ ಮಾಡುತ್ತವೆ ಎಂದು ಮತದಾರರನ್ನು ಎಚ್ಚರಿಸಿದರು. 
 
ಮುಂಬರುವ ಬಿಹಾರ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮಿತ್ರಕೂಟ ಜಯಭೇರಿ ಬಾರಿಸಲಿದೆ. ಆರ್‌ಜೆಡಿ, ಜೆಡಿಯು ಮತ್ತು ಕಾಂಗ್ರೆಸ್ ಪಕ್ಷಗಳಿಗೆ ಅಸ್ತಿತ್ವವಿಲ್ಲ. ಒಂದು ವೇಳೆ ಅಸ್ತಿತ್ವವಿದ್ದರೂ ಚುನಾವಣೆಯಲ್ಲಿ ಗೆಲ್ಲುವುದಿಲ್ಲ ಎಂದು ಕೇಂದ್ರ ಸಚಿವ ಅರುಣ್ ಜೇಟ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments