ಸಂಪುಟ ಸೇರುತ್ತಿರುವ ನೂತನ ಸಂಸದರಿಗೆ ಮೋದಿ ಮನೆಯಲ್ಲಿ ಚಹಾ ಕೂಟ

Krishnaveni K
ಭಾನುವಾರ, 9 ಜೂನ್ 2024 (13:23 IST)
ನವದೆಹಲಿ: ಇಂದು ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವ ನರೇಂದ್ರ ಮೋದಿಯವರ ಸಂಪುಟಕ್ಕೆ ಸೇರ್ಪಡೆಯಾಗಲಿರುವ ಸಂಸದರಿಗೆ ಇದೀಗ ಮೋದಿ ಮನೆಯಲ್ಲಿ ಚಹಾ ಕೂಟ ಏರ್ಪಡಿಸಲಾಗಿದೆ.

ಮೋದಿ ಮನೆಯಲ್ಲಿನಡೆಯುತ್ತಿರುವ ಚಹಾ ಕೂಟಕ್ಕೆ ಇಂದು ಸಚಿವರಾಗಿ ಪ್ರಮಾಣ  ವಚನ ಸ್ವೀಕರಿಸುತ್ತಿರುವ ಸಂಸದರಿಗೆ ಆಹ್ವಾನ ನೀಡಲಾಗಿದೆ. ಅದರಂತೆ ಪ್ರಮಾಣ ವಚನ ಸ್ವೀಕರಿಸಲಿರುವ ಸಂಸದರಿಗೆ ವಿಶೇಷ ಕರೆ ಕಳುಹಿಸಲಾಗಿತ್ತು. ಅವರೆಲ್ಲರೂ ಇಂದು ಚಹಾ ಕೂಟದಲ್ಲಿ ಭಾಗಿಯಾಗಿದ್ದಾರೆ.

ಆ ಪೈಕಿ ರಾಜ್ಯದಿಂದ ಎಚ್ ಡಿ ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ ಮತ್ತು ಶೋಭಾ ಕರಂದ್ಲಾಜೆ ಭಾಗಿಯಾಗಿದ್ದಾರೆ. ಹೀಗಾಗಿ ಈ ಮೂವರಿಗೆ ಮಂತ್ರಿಗಿರಿ ಸಿಗುವುದು ಪಕ್ಕಾ ಆಗಿದೆ. ಆದರೆ ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ಜಗದೀಶ್ ಶೆಟ್ಟರ್ ಮತ್ತು ಬಸವರಾಜ ಬೊಮ್ಮಾಯಿಗೆ ನಿರಾಸೆಯಾಗಿದೆ.

ಮೋದಿ ಕ್ಯಾಬಿನೆಟ್ ನಲ್ಲಿ ಎಲ್ಲಾ ಪಕ್ಷಗಳ ಮತ್ತು ಎಲ್ಲಾ ರಾಜ್ಯಗಳ ಸಂಸದರಿಗೂ ಅವಕಾಶ ನೀಡುವ ಪ್ರಯತ್ನ ಮಾಡಲಾಗಿದೆ. ಇದೇ ಮೊದಲ ಬಾರಿಗೆ ಕೇರಳದಲ್ಲಿ ಕಮಲವರಳಿಸಿದ ತ್ರಿಶ್ಶೂರ್ ಸಂಸದ, ನಟ ಸುರೇಶ್ ಗೋಪಿ, ತಮಿಳುನಾಡಿನಲ್ಲಿ ಕೊಯಮತ್ತೂರಿನಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಸೋತಿರುವ ಅಣ್ಣಾಮಲೈ, ಪಿಯೂಶ್ ಗೋಯಲ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಜ್ಯೋತಿರಾಧಿತ್ಯ ಸಿಂಧಿಯಾ, ರಾಜನಾಥ್ ಸಿಂಗ್, ನಿತಿನ್ ಗಡ್ಕರಿ, ಚಿರಾಗ್ ಪಾಸ್ವಾನ್, ರಾಮನಾಥ್ ಠಾಕೂರ್, ಜೀತಂ ರಾಮ್ ಮಾಂಝಿ,ಜಯಂತ್ ಚೌಧರಿ,  ಅನುಪ್ರಿಯಾ ಪಟೇಲ್, ರಾಮಮೋಹನ್ ನಾಯ್ಡು ಮುಂತಾದವರು ಇಂದು ಪ್ರಮಾಣ ವಚನ ಸ್ವೀಕರಿಸಲಿರುವ ಪ್ರಮುಖರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಮನಿಸಿ: MGNREGA ಯೋಜನೆಗೆ ದೊಡ್ಡ ಬದಲಾವಣೆ ತಂದ ಕೇಂದ್ರ ಸರ್ಕಾರ, ಕಾರ್ಮಿಕರಿಗೆ ಗುಡ್ ನ್ಯೂಸ್

ಕಾಂಗ್ರೆಸ್ ನಲ್ಲಿ ಯತೀಂದ್ರನಿಗೊಂದು ನ್ಯಾಯ, ಬೇರೆಯವರಿಗೊಂದು ನ್ಯಾಯನಾ

Karnataka Weather: ವಾರಂತ್ಯಕ್ಕೆ ತಾಪಮಾನದಲ್ಲಿ ಭಾರೀ ಇಳಿಕೆ

ಗೃಹಲಕ್ಷ್ಮಿ ಯೋಜನೆಯಲ್ಲೂ ಹಗರಣವೇ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ತಪ್ಪು ಲೆಕ್ಕ ಕೊಟ್ಟ ಆರೋಪ

ಬಗರ್ ಹುಕುಂ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿದರೆ ಶಿಕ್ಷೆ: ಸಚಿವ ಕೃಷ್ಣಭೈರೇಗೌಡ

ಮುಂದಿನ ಸುದ್ದಿ
Show comments