Select Your Language

Notifications

webdunia
webdunia
webdunia
webdunia

ಕೇರಳದ 12ನೇ ಸಿಎಂ ಆಗಿ ಪಿಣರಾಯ ವಿಜಯನ್ ಪ್ರಮಾಣ ವಚನ ಸ್ವೀಕಾರ

ಕೇರಳದ 12ನೇ ಸಿಎಂ ಆಗಿ ಪಿಣರಾಯ ವಿಜಯನ್ ಪ್ರಮಾಣ ವಚನ ಸ್ವೀಕಾರ
ತಿರುವನಂತಪುರಂ , ಬುಧವಾರ, 25 ಮೇ 2016 (17:14 IST)
ಕೇರಳದ 12ನೇ ಮುಖ್ಯಮಂತ್ರಿಯಾಗಿ ಪಿಣರಾಯ ವಿಜಯನ್ ಇಂದು ಸಂಜೆ ನಾಲ್ಕು ಗಂಟೆಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
 
ಸಿಎಂ ವಿಜಯನ್ ಅವರೊಂದಿಗೆ 18 ಶಾಸಕರು ಕೂಡಾ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
 
ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಹಿರಿಯ ನಾಯಕರಾದ ಪ್ರಕಾಶ್ ಕಾರಟ್, ಸೀತಾರಾಮ್ ಯೆಚೂರಿ, ಮಾಜಿ ಪ್ರಧಾನಿ ದೇವೇಗೌಡ ಸೇರಿದಂತೆ ಅನೇಕ ನಾಯಕರು ಉಪಸ್ಥಿತರಿದ್ದರು.
 
ಕೇರಳದ 140 ಸದಸ್ಯರ ವಿಧಾನಸಭೆ ಚುನಾವಣೆಯಲ್ಲಿ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌ ಪಕ್ಷ  91 ಸ್ಥಾನಗಳಲ್ಲಿ ಜಯಭೇರಿ ಬಾರಿಸಿ ನಿಚ್ಚಳ ಬಹುಮತ ಪಡೆದಿತ್ತು. 
 
ನನ್ನ ನೇತೃತ್ವದ ಸರಕಾರದಲ್ಲಿ ಭ್ರಷ್ಟಾಚಾರ, ಪ್ರಭಾವಸ ಹೊಗಳುಭಟರಿಗೆ ಸ್ಥಾನವಿಲ್ಲ ಎಂದು ಮುಖ್ಯಮಂತ್ರಿ ವಿಜಯನ್ ಘೋಷಿಸಿದರು.
 
ಕಳೆದ 2011ರಲ್ಲಿ ಅಧಿಕಾರದ ಗದ್ದುಗೆ ಅಲಂಕರಿಸಿದ್ದ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಪಕ್ಷ ಹೀನಾಯವಾಗಿ ಸೋಲನುಭವಿಸಿದೆ. 


 
ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

Share this Story:

Follow Webdunia kannada

ಮುಂದಿನ ಸುದ್ದಿ

ಪತಿಯನ್ನು ಹುಡುಕಿ ಕೊಡಿ ಎಂದು ಸಿದ್ದರಾಮಯ್ಯರಿಗೆ ಮನವಿ ಸಲ್ಲಿಸಿದ ಮಹಿಳೆ