Webdunia - Bharat's app for daily news and videos

Install App

ಗಡಿಪ್ರದೇಶದಲ್ಲಿ ನಡೆಯುತ್ತಿರುವ ಈ ಚಟುವಟಿಕೆ ಭಾರತಕ್ಕೆ ಒಳ್ಳೆಯದಂತೂ ಅಲ್ಲ!

Webdunia
ಬುಧವಾರ, 3 ಮೇ 2017 (11:19 IST)
ನವದೆಹಲಿ: ಸರ್ಜಿಕಲ್ ಸ್ಟ್ರೈಕ್ ನಡೆದ ಮೇಲೆ ಗಡಿ ನಿಯಂತ್ರಣ ರೇಖೆಯಲ್ಲಿ ಉಗ್ರರ ಕ್ಯಾಂಪ್ ಸಂಖ್ಯೆ ಹೆಚ್ಚಳವಾಗಿದೆ ಎಂದು ತಿಳಿದು ಬಂದಿದೆ. ಮೊನ್ನೆಯಷ್ಟೇ ಭಾರತೀಯ ಯೋಧರಿಬ್ಬರ ಶಿರಚ್ಛೇದ ಮಾಡಿದ ಪಾಕ್ ಯೋಧರು ಉಗ್ರರಿಗೆ ಕುಮ್ಮಕ್ಕು ಕೊಡುತ್ತಿದ್ದಾರೆಂದು ವರದಿಯಾಗಿದೆ.

 
ಪಾಕ್ ಆಕ್ರಮಿತ ಕಾಶ್ಮೀರದಲ್ಲಿ 20 ಉಗ್ರರ ಕ್ಯಾಂಪ್ ಹೊಸದಾಗಿ ಹುಟ್ಟಿಕೊಂಡಿದೆ ಎನ್ನಲಾಗಿದೆ. ಕಳೆದ ವರ್ಷ ಸರ್ಜಿಕಲ್ ದಾಳಿ ನಡೆದ ನಂತರ 35 ರಷ್ಟಿದ್ದ ಉಗ್ರರ ಕ್ಯಾಂಪ್ ಇದೀಗ 55 ಕ್ಕೇರಿದೆ ಎನ್ನಲಾಗಿದೆ.

ಈ ಉಗ್ರರು ಗಡಿ ಪ್ರದೇಶಕ್ಕೆ ಮತ್ತಷ್ಟು ಹತ್ತಿರ ಬಂದಿದ್ದಾರೆ ಎಂಬ ಆತಂಕಕಾರಿ ವಿಷಯ ಬೆಳಕಿಗೆ ಬಂದಿದೆ. ಗುಪ್ತಚರ ವರದಿ ಪ್ರಕಾರ, 160 ಉಗ್ರರು ಕ್ರಿಯಾಶೀಲರಾಗಿದ್ದು, ಇವರಿಗೆ ಪಾಕ್ ಸೇನೆಯ ಅಭಯ ಹಸ್ತವಿದೆ.

ಪಾಕ್ ಸೇನೆಯ ನಿರ್ದೇಶನದಂತೆ ಇವರು ಭಾರತೀಯ ಸೇನೆ ಮೇಲೆ ದಾಳಿ ನಡೆಸುತ್ತಾರೆ ಎಂದು ಗುಪ್ತಚರ ಮೂಲಗಳು ಹೇಳಿವೆ. ಮೊನ್ನೆ ನಡೆದ ಯೋಧರ ಶಿರಚ್ಛೇದ ಪ್ರಕರಣದಲ್ಲೂ ಪಾಕ್ ಸೇನೆ ಜತೆ ಉಗ್ರರು ಕೈ ಜೋಡಿಸಿದ್ದರು ಎನ್ನಲಾಗಿತ್ತು. ಇದು ಭಾರತದ ಪಾಲಿಗೆ ಆತಂಕದ ಸುದ್ದಿಯಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಿಲಿಕುಳ ಜೈವಿಕ ಉದ್ಯಾನವನದಲ್ಲಿ 6 ಪ್ರಾಣಿಗಳು ಸಾವು, ಪ್ರಾಣಿ ಪ್ರಿಯರಲ್ಲಿ ಆತಂಕ

ಮದುವೆಯಾಗುವುದಾಗಿ ಗರ್ಭಿಣಿ ಮಾಡಿ ವಂಚನೆ: ಮಗನ ಪರಾರಿಗೆ ಸಹಾಯ ಮಾಡಿದ ಬಿಜೆಪಿ ಮುಖಂಡ ಅರೆಸ್ಟ್‌

90ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ದಲೈ ಲಾಮಾ: 130 ವರ್ಷಗಳ ಕಾಲ ಬದುಕುವ ವಿಶ್ವಾಸ

ಮರಾಠಿ ಮಾತನಾಡಲ್ಲ ಎಂದ ಉದ್ಯಮಿ ಕಚೇರಿ ಮೇಲೆ ಕಲ್ಲೆಸೆದ ಎಂಎನ್‌ಎಸ್ ಕಾರ್ಯಕರ್ತರು

ಅರಣ್ಯ ಇಲಾಖೆಯ‌ಲ್ಲಿ ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್‌ನ್ಯೂಸ್‌, 6000ಹುದ್ದೆಗಳು ಶೀಘ್ರದಲ್ಲೇ ಭರ್ತಿ

ಮುಂದಿನ ಸುದ್ದಿ
Show comments