Webdunia - Bharat's app for daily news and videos

Install App

ವಿದ್ಯಾರ್ಥಿಗಳಿಗೆ ರಕ್ಷಣೆ ನೀಡಬೇಕಾದ ಶಿಕ್ಷಕರಿಂದಲೇ ನಡೆದಿದೆ ಇಂತಹ ನೀಚ ಕೃತ್ಯ

Webdunia
ಬುಧವಾರ, 23 ಜನವರಿ 2019 (09:05 IST)
ರಾಯಗಢ : ವಿದ್ಯಾರ್ಥಿಗಳಿಗೆ ರಕ್ಷಣೆ ನೀಡಬೇಕಾದ ಶಿಕ್ಷಕರೇ ದಲಿತ ವಿದ್ಯಾರ್ಥಿನಿಯೊಬ್ಬಳನ್ನು ಕಾಮುಕನಿಗೆ ಒಪ್ಪಿಸಿ ಆಕೆಯ ಮೇಲೆ ಅತ್ಯಾಚಾರ ಮಾಡಿಸಿದ ಘಟನೆ ಮಧ್ಯಪ್ರದೇಶದ ರಾಯಗಢ ಜಿಲ್ಲೆಯ ಗ್ರಾಮವೊಂದರ ಖಾಸಗಿ ಶಾಲೆಯಲ್ಲಿ ನಡೆದಿದೆ.

ಅಜೀಂ ಖಾನ್‌ (21) ಅತ್ಯಾಚಾರ ಮಾಡಿದ ಆರೋಪಿಯಾಗಿದ್ದು, ರಿತಿಕ್‌ ಕುಶ್ವಾಹಾ (21) ಮತ್ತು ಶ್ಯಾಮ್‌ ಪ್ರಜಾಪತಿ (22)  ಅತ್ಯಾಚಾರಿಗೆ ನೆರವಾದ ಶಿಕ್ಷಕರು. ಸಂತ್ರಸ್ತ ಬಾಲಕಿ 9ನೇ ತರಗತಿ ಓದುತ್ತಿದ್ದು,  ಶಾಲೆ ಮುಗಿದ ಬಳಿಕ ಸಂದವಾತಾ ಗ್ರಾಮದ ಬಸ್‌ ಸ್ಟಾಪಿನಲ್ಲಿ ಬಸ್ಸಿಗಾಗಿ ಕಾಯುತ್ತಿದ್ದಾಗ ಆರೋಪಿ ಅತ್ಯಾಚಾರಿ ಖಾನ್‌ ಆಕೆಗೆ ಆಮಿಷ ಒಡ್ಡಿ ಶಾಲೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಲು ಮುಂದಾಗಿದ್ದಾನೆ. ಆಗ ಈ ಇಬ್ಬರು ಶಿಕ್ಷಕರು ದಲಿತ ಬಾಲಕಿ ಮತ್ತು ಖಾನ್‌ ನನ್ನು ಶಾಲಾ ಕೋಣೆಯೊಂದರಲ್ಲಿ ಕೂಡಿ ಹಾಕಿ ಹೊರಗಿನಿಂದ ಬೀಗ ಜಡಿದು ಅತ್ಯಾಚಾರಿಗೆ ನೆರವಾಗಿದ್ದರು.

 

ಈ ಘಟನೆಗೆ ಸಂಬಂಧಿಸಿದಂತೆ ಸಂತ್ರಸ್ತ ಬಾಲಕಿಯ ಹೆತ್ತವರು ಪೊಲೀಸರಲ್ಲಿ ದೂರು ದಾಖಲಿಸಿದ್ದಾರೆ. ಈ  ದೂರಿನ್ವಯ ಅತ್ಯಾಚಾರಗೈದಿರುವ ಆರೋಪಿ ಅಜೀಂ ಖಾನ್‌ ಜೊತೆಗೆ ಈತನಿಗೆ ನೆರವಾದ ಇಬ್ಬರು ಶಾಲಾ ಶಿಕ್ಷಕರನ್ನು ಪೊಲೀಸರು ಬಂಧಿಸಿದ್ದಾರೆ. 

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments