Webdunia - Bharat's app for daily news and videos

Install App

ಸಂಸತ್ತಿನಲ್ಲಿ ತುಳುನಾಡ ದೈವಗಳಿಗೆ ಸಂಸದ ಬ್ರಿಜೇಶ್ ಚೌಟ ಗೌರವ ಸಲ್ಲಿಸಿದ್ದು ಹೀಗೆ

Sampriya
ಸೋಮವಾರ, 24 ಜೂನ್ 2024 (19:33 IST)
Photo Courtesy X
ನವದೆಹಲಿ: ದಕ್ಷಿಣ ಕನ್ನಡ ಜಿಲ್ಲೆಯಿಂದ ಸಂಸದರಾಗಿ ಸಂಸತ್‌ಗೆ ಪ್ರವೇಶಿಸಿದ ಬ್ರಿಜೇಶ್ ಚೌಟ ಅವರು ಇಂದು ಪ್ರಮಾಣವಚನ ಸ್ವೀಕರಿಸಿದರು. ದಕ್ಷಿಣ ಕನ್ನಡ ಲೋಕಸಭೆ ಸದಸ್ಯರಾಗಿ ನೂತನವಾಗಿ ಆಯ್ಕೆಯಾಗಿರುವ ಬ್ರಿಜೇಶ್ ಅವರು ಕನ್ನಡದಲ್ಲಿ ಓದಿ, ತುಳುನಾಡಿನ ದೈವ ದೇವರ ಹೆಸರಿನಲ್ಲಿ ಪ್ರಮಾಣವಚನ ಮಾಡಿದರು.

ನೂತನ ಸಂಸತ್‌ ಭವನ ಸೆಂಟ್ರಲ್ ವಿಸ್ಟಾದಲ್ಲಿ ನಡೆಯುತ್ತಿರುವ 18ನೇ ಲೋಕಸಭೆಯ ಮೊದಲ ಅಧಿವೇಶನದ ಆರಂಭದಲ್ಲಿ ರಾಜ್ಯದ ವಿವಿಧ ಕ್ಷೇತ್ರಗಳಿಂದ ಆಯ್ಕೆಯಾದ ನೂತನ ಸಂಸದರಿಗೆ ಹಂಗಾಮಿ ಸ್ಪೀಕರ್ ಭತೃಹರಿ ಮಹತಾಬ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.

'ಕ್ಯಾಪ್ಟನ್ ಬ್ರಿಜೇಶ್ ಚೌಟ ಎಂಬ ಹೆಸರಿನ ನಾನು ಲೋಕಸಭೆ ಸದಸ್ಯನಾಗಿ ಚುನಾಯಿತನಾದವನಾಗಿ ಕಾನೂನ ಮೂಲಕ ಸ್ಥಾಪಿತವಾದ ಭಾರತದ ಸಂವಿಧಾನಕ್ಕೆ ಸತ್ಯ ಶ್ರದ್ಧೆಯನ್ನು ಮತ್ತು ನಿಷ್ಠೆಯನ್ನು ಹೊಂದಿರುತ್ತೇನೆಂದು ಭಾರತದ ಸಾರ್ವಭೌಮತ್ವವನ್ನು  ಮತ್ತು ಅಖಂಡತೆಯನ್ನು ಎತ್ತಿ ಹಿಡಿಯುತ್ತೇನೆಂದು ಮತ್ತು ನಾನು ಕೈಂಗೊಳ್ಳಲಿರುವ ಕರ್ತವ್ಯವನ್ನು ಶ್ರದ್ಧಾ ಪೂರ್ವಕವಾಗಿ ನಿರ್ವಹಿಸುತ್ತೇನೆಂದು ತುಳುನಾಡಿದ ದೈವ ದೇವರಹೆಸರಿನಲ್ಲಿ ಪ್ರಮಾಣ ವಚನ ಮಾಡುತ್ತೇನೆ. ಮಾತೆರೆಗ್ಲ ಸೊಲ್ಮೇಲು' ಎಂದು ನಮಸ್ಕರಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments