Webdunia - Bharat's app for daily news and videos

Install App

ರಾಹುಲ್ ಗಾಂಧಿ ಬಲಹೀನತೆಯೇ ಇದು!

Webdunia
ಮಂಗಳವಾರ, 6 ಮಾರ್ಚ್ 2018 (08:38 IST)
ನವದೆಹಲಿ: ರಾಜಕೀಯಕ್ಕಿಳಿದ ಮೇಲೆ ಸದಾ ರಾಜಕಾರಣಿಯಾಗಿಯೇ ಇರಬೇಕು. ಒಂದು ದೊಡ್ಡ ಪಕ್ಷದ ಚುಕ್ಕಾಣಿ ಹಿಡಿದ ಮೇಲೆ ತನ್ನ ಪಕ್ಷಕ್ಕೆ ತಂದೆ ಸಮಾನನಾಗಿರಬೇಕು.

ಕುಟುಂಬದ ಯಜಮಾನನೆಸಿಕೊಂಡವನು ಸಂಕಷ್ಟದ ಬಂದಾಗ ಜತೆಗಿಲ್ಲದೇ ಹೋದರೆ ಆ ಕುಟುಂಬದ ಪರಿಸ್ಥಿತಿ ಹೇಗಾಗುತ್ತದೆ? ಅದೇ ಕಾಂಗ್ರೆಸ್ ಪಕ್ಷಕ್ಕೆ ಇತ್ತೀಚೆಗೆ ಆಗುತ್ತಿರುವುದು.

ಮೇಘಾಲಯ, ಗೋವಾದಲ್ಲಿ ಅಧಿಕಾರ ಹಿಡಿಯಲು ಎಲ್ಲಾ ಅವಕಾಶಗಳಿದ್ದಾಗಲೂ ಪಕ್ಷದ ಯಜಮಾನ ಎನಿಸಿಕೊಂಡ ರಾಹುಲ್ ಗಾಂಧಿ ತಲೆಯೇ ಕೆಡಿಸಿಕೊಳ್ಳಲಿಲ್ಲ. ಅವರು ತಮ್ಮ ನಿಷ್ಠಾವಂತ ನಾಯಕರಿಗೆ ಹೊಣೆ ಒಪ್ಪಿಸಿ ತಾವು ತಮ್ಮ ವೈಯಕ್ತಿಕ ಕೆಲಸಗಳಲ್ಲಿ ಬ್ಯುಸಿಯಾದರು. ಇದು ಒಬ್ಬ ರಾಷ್ಟ್ರೀಯ ಪಕ್ಷದ ಅದರಲ್ಲೂ ನೂರಾರು ವರ್ಷದ ಇತಿಹಾಸವಿರುವ ಪಕ್ಷವೊಂದರ ನಾಯಕನ ಲಕ್ಷಣವಲ್ಲ.

ಪಕ್ಷ ಪ್ರಮುಖ ನಿರ್ಧಾರ ತೆಗೆದುಕೊಳ್ಳಬೇಕಾದ ಸಂದರ್ಭದಲ್ಲಿ, ಸಂಕಷ್ಟದ ಪರಿಸ್ಥಿತಿಯಲ್ಲಿ ರಾಹುಲ್ ತಾವೇ ಖುದ್ದಾಗಿ ನಿಂತು ಸಮಸ್ಯೆ ಬಗೆಹರಿಸುವುದಿಲ್ಲ. ಇದೇ ಕಾರಣಕ್ಕೆ ಅವರ ಮೇಲೆ ಕೆಲವು ಪಕ್ಕಾ ಕಾಂಗ್ರೆಸಿಗರಿಗೆ ಅಸಮಾಧಾನವಿದೆ. ವಿರೋಧಿಗಳಿಗೆ ಇದೇ ಟೀಕೆಗೆ ಅಸ್ತ್ರವಾಗಿದೆ. ಅವರನ್ನು ಗಂಭೀರ ರಾಜಕಾರಣಿ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ವಿರೋಧಿಗಳು ಟೀಕಿಸುವುದೂ ಇದೇ ಕಾರಣಕ್ಕೆ. ಇದೇ ರೀತಿ ಮುಂದುವರಿದರೆ ಒಂದು ಕಾಲದಲ್ಲಿ ಇಡೀ ಭಾರತವನ್ನು ಆವರಿಸಿಕೊಂಡಿದ್ದ ಪಕ್ಷ ಮುಂದೊಂದು ದಿನ ಯಾವ ರಾಜ್ಯದಲ್ಲೂ ಅಧಿಕಾರವಿಲ್ಲದೇ ಹಪ ಹಪಿಸಬೇಕಾದೀತು.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಮ್ಮು ಕಾಶ್ಮೀರ ಮೇಘಸ್ಫೋಟದಲ್ಲಿ 33ಮಂದಿ ಸಾವು: ಅತ್ಯಂತ ದುರಂತ ಸುದ್ದಿ, ದ್ರೌಪದಿ ಮುರ್ಮು

79ನೇ ಸ್ವಾತಂತ್ರ್ಯ ದಿನಾಚರಣೆ: ನಾಳೆ ರಾಷ್ಟ್ರ ರಾಜಧಾನಿ ಹವಾಮಾನದಲ್ಲಿ ಭಾರೀ ಬದಲಾವಣೆ

ರಾಹುಲ್ ಗಾಂಧಿ ಸಂವಿಧಾನವನ್ನೇ ಓದಿಲ್ಲ: ಕಿರಣ್‌ ರಿಜಿಜು ಆಕ್ರೋಶ

ಪತಿ ಸಾವಿಗೆ ನ್ಯಾಯ ಸಿಕ್ಕಿದ್ದಕ್ಕೆ ಯೋಗಿಯನ್ನು ಕೊಂಡಾಡಿದ್ದೆ ತಪ್ಪಾಯ್ತು, ಎಸ್‌ಪಿ ಶಾಸಕಿ ಪಕ್ಷದಿಂದಲೇ ಹೊರಕ್ಕೆ

ಆಪರೇಷನ್ ಸಿಂಧೂರ್‌ ಕಾರ್ಯಚರಣೆಯ ಕೆಚ್ಚೆದೆಯ 9 ವೀರರಿಗೆ ವೀರ ಚಕ್ರ ಪ್ರಶಸ್ತಿ

ಮುಂದಿನ ಸುದ್ದಿ
Show comments