ಮೋದಿಗೆ ಮೊದಲಿನಂತೆ ಸರ್ಕಾರ ನಡೆಸಲಾಗುತ್ತಿಲ್ಲ ಎಂಬುದಕ್ಕೆ ಈ ನಾಲ್ಕು ಘಟನೆಗಳೇ ಸಾಕ್ಷಿ

Krishnaveni K
ಬುಧವಾರ, 21 ಆಗಸ್ಟ್ 2024 (11:08 IST)
ನವದೆಹಲಿ: ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಏಕಾಂಗಿಯಾಗಿ ಅಧಿಕಾರಕ್ಕೇರಲು ಸಾಧ್ಯವಾಗದ ಹಿನ್ನಲೆಯಲ್ಲಿ ಮಿತ್ರ ಪಕ್ಷಗಳ ಸಹಾಯದೊಂದಿಗೆ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ಅಧಿಕಾರಕ್ಕೇರಿತು. ಆದರೆ ಮೋದಿಗೆ ಕಳೆದ ಎರಡು ಬಾರಿಯಂತೆ ಈ ಬಾರಿ ಸರ್ಕಾರ ನಡೆಸಲು ಆಗುತ್ತಿಲ್ಲ ಎನ್ನುವುದಕ್ಕೆ ಈ ನಾಲ್ಕು ಘಟನೆಗಳೇ ಸಾಕ್ಷಿಯಾಗಿವೆ.

ಮಿತ್ರ ಪಕ್ಷಗಳ ಬೆಂಬಲದೊಂದಿಗೆ ಸರ್ಕಾರ ರಚಿಸಿದಾಗ ಎಲ್ಲಾ ವಿಚಾರಕ್ಕೂ ಅವರ ಅಭಿಪ್ರಾಯಗಳೂ ಮುಖ್ಯವಾಗುತ್ತದೆ. ಆದರೆ ಈ ಹಿಂದೆ ಎರಡು ಬಾರಿಯೂ ಬಿಜೆಪಿಗೇ ಬಹುಮತವಿತ್ತು. ಹೀಗಾಗಿ ಮೋದಿ ಸ್ವತಂತ್ರವಾಗಿ ನಿರ್ಧಾರ ತೆಗೆದುಕೊಳ್ಳುತ್ತಿದ್ದರು. ಆದರೆ ಈಗ ಅದು ಸಾಧ್ಯವಾಗುತ್ತಿಲ್ಲ.

ಅದಕ್ಕೆ ಲೇಟೆಸ್ಟ್ ಉದಾಹರಣೆ ಲ್ಯಾಟರಲ್ ಎಂಟ್ರಿ ನಿಯಮ ಹಿಂದೆ ಪಡೆದಿದ್ದು. ಈ ಒಂದೇ ತಿಂಗಳಲ್ಲಿ ನಾಲ್ಕು ಬಾರಿ ಮಸೂದೆ, ನಿಯಮಗಳನ್ನು ಕೇಂದ್ರ ಸರ್ಕಾರ ಹಿಂದೆ ಪಡೆದಿದೆ. ಇದೀಗ ಸರ್ಕಾರದ ಹಿರಿಯ ಹುದ್ದೆಗಳಿಗೆ ಐಎಎಸ್ ಹುದ್ದೆಯ ಅಧಿಕಾರಿಗಳ ಹೊರತಾಗಿ ಆಯಾ ಕ್ಷೇತ್ರಗಳಲ್ಲಿ ನುರಿತರಾಗಿರುವವರಿಗೆ ನೇರವಾಗಿ ನೇಮಕವಾಗಲು ಅವಕಾಶವಾಗುವಂತಹ ಲ್ಯಾಟರಲ್ ಎಂಟ್ರಿ ನಿಯಮ ಹೊರತರಲು ಕೇಂದ್ರ ಮುಂದಾಗಿತ್ತು. ಆದರೆ ಇದೀಗ ಪ್ರತಿಪಕ್ಷಗಳ ಜೊತೆಗೆ ಕೆಲವು ಮಿತ್ರ ಪಕ್ಷಗಳಿಂದಲೂ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಅದನ್ನು ಹಿಂಪಡೆಯಲಾಯಿತು.

ಇದಕ್ಕೆ ಮೊದಲು ವಕ್ಫ್ ಬೋರ್ಡ್ ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸಿತ್ತು. ಆದರೆ ಕೆಲವೇ ಗಂಟೆಗಳಲ್ಲಿ ಅದನ್ನು ಜಂಟಿ ಸಂಸದೀಯ ಸಮಿತಿಗೆ ಕಳುಹಿಸಲು ನಿರ್ಧರಿಸಿತು. ಇದಕ್ಕೆ ಮೊದಲು ಇಂಡಕ್ಸೇಷನ್ ಪ್ರಯೋಜನ ವಾಪಸ್ ಪಡೆದಿತ್ತು. ಇದೇ ವರ್ಷ ಜುಲೈ 23 ರ ಮೊದಲು ಆಸ್ತಿ ಖರೀದಿಸಿದ ಮಾರಾಟದ ಮೇಲೆ ಸೂಚ್ಯಂಕ ಪ್ರಯೋಜನದೊಂದಿಗೆ ಶೇ.20 ಎಲ್ ಟಿಜಿಸಿ ತೆರಿಗೆ ಪಾವತಿಸುವ ಆಯ್ಕೆಯನ್ನು ತೆರಿಗೆದಾರರಿಗೆ ನೀಡಲು ನಿರ್ಧರಿಸುವ ಮೂಲಕ ಹಿಂದೆ ಸರಿಯಿತು. ಸಾಮಾಜಿಕ ಮತ್ತು ಡಿಜಿಟಲ್ ಮಾಧ್ಯಮದ ಮೇಲಿನ ನಿರ್ಬಂಧ ಕುರಿತು ಕಳವಳ ವ್ಯಕ್ತವಾಗುತ್ತಿರುವ ಹಿನ್ನಲೆಯಲ್ಲಿ ಪ್ರಸಾರ ಮಸೂದೆಯ ತರಲು ಉದ್ದೇಶಿಸಲಾಗಿತ್ತು. ಆದರೆ ಟೀಕೆಗಳು ಬಂದ ಬೆನ್ನಲ್ಲೇ ಹೊಸ ಮಸೂದೆ ತಯಾರಿಸಲು ಸಮಾಲೋಚನೆ ನಡೆಸುವುದಾಗಿ ಹೇಳಿತು. ಈ ಮೂಲಕ ಕಳೆದ ಒಂದೇ ತಿಂಗಳಲ್ಲಿ ನಾಲ್ಕು ಹೊಸ ನಿಯಮ ರೂಪಿಸಲು ಹೋಗಿ ಬಳಿಕ ಅದರಿಂದ ಹಿಂದೆ ಸರಿದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ದರೋಡೆ ಪ್ರಕರಣ: ಪೊಲೀಸರ ಕಣ್ತಪ್ಪಿಸಲು ಕಳ್ಳರ ಖತರ್ನಾಕ್ ಪ್ಲ್ಯಾನ್ ಬಹಿರಂಗ

ಬಾಹ್ಯಾಕಾಶದಿಂದ ಬರೋದು ಸುಲಭ: ಪ್ರಿಯಾಂಕ್ ಖರ್ಗೆ ಎದುರದಲ್ಲೇ ಬೆಂಗಳೂರು ರಸ್ತೆ ಕಿಚಾಯಸಿದ ಶುಭಾಂಶು ಶುಕ್ಲ

ಡಿಕೆ ಶಿವಕುಮಾರ್ ಬೆಂಬಲಿಗರನ್ನು ತಡೆಯಲು ಸಿದ್ದರಾಮಯ್ಯ ಮಾಸ್ಟರ್ ಪ್ಲ್ಯಾನ್

Karnataka Weather: ಇಂದಿನಿಂದ ಹವಾಮಾನದಲ್ಲಿ ಮಹತ್ವದ ಬದಲಾವಣೆ

ಪ್ರಮುಖ ಘಟ್ಟದಲ್ಲಿರುವ ದೆಹಲಿ ಸ್ಫೋಟ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments