ಅಬ್ಬಾ...! ಈಕೆ ಅದೆಂಥಾ ಖತರ್ನಾಕ್ ಲೇಡಿ ಗೊತ್ತಾ?

Webdunia
ಶನಿವಾರ, 1 ಸೆಪ್ಟಂಬರ್ 2018 (08:57 IST)
ನವದೆಹಲಿ: ವರದಕ್ಷಿಣೆ ಕಿರುಕುಳ ಪ್ರಕರಣದ ದುರುಪಯೋಗವಾಗುತ್ತಿದೆ ಎಂದು ಹಲವು ಪುರುಷ ಪರ ಸಂಘಟನೆಗಳು ವಾದಿಸುತ್ತಿರುವುದನ್ನು ನಿಜ ಎನ್ನುವಂತೆ ಮಾಡಿದ್ದಾಳೆ ಈ ಮಹಿಳೆ.

ಇದು ನಡೆದಿರುವುದು ಉತ್ತರ ಪ್ರದೇಶದ ಸಫ್ಜರ್ ಜಂಗ್ ನ ರೂಬಿ ಎಂಬಾಕೆ ಇನ್ನೊಬ್ಬನನ್ನು ಮದುವೆಯಾಗಲು ಪತಿ ತನ್ನನ್ನು ವರದಕ್ಷಿಣೆ ಕಿರುಕುಳ ನೀಡಿ ಸಾಯಿಸಿದ್ದಾನೆಂದು ಸಾಕ್ಷ್ಯ ಸೃಷ್ಟಿಸಿ ಇನ್ನೊಬ್ಬನ ಜತೆ ಮದುವೆಯಾಗಿ ಹಾಯಾಗಿ ಕಾಲ ಕಳೆಯುತ್ತಿದ್ದಳು. ಆದರೆ ಇವರ ನಾಟಕ ಇದೀಗ ಬಯಲಾಗಿದೆ.

ರೂಬಿ ಮತ್ತು ರಾಹುಲ್ ವಿವಾಹ 2016 ರಲ್ಲಿ ನೆರವೇರಿತ್ತು.  ಆದರೆ ಇದೇ ವರ್ಷ ಜೂನ್ ನಲ್ಲಿ ರೂಬಿ ತಂದೆ ಹರಿಪ್ರಸಾದ್ ತನ್ನ ಪುತ್ರಿಯನ್ನು ವರದಕ್ಷಿಣೆ ಆಸೆಗಾಗಿ ಅಳಿಯ ಮತ್ತು ಅವರ ಕುಟುಂಬದವರು ಕೊಲೆ ಮಾಡಿದ್ದಾರೆ ಎಂದು ಸ್ಥಳೀಯ ಪೊಲೀಸರಿಗೆ ದೂರು ನೀಡಿದರು.

ಆದರೆ ಸೂಕ್ತ ಸಾಕ್ಷ್ಯ ಸಿಗದ ಕಾರಣ ಪೊಲೀಸರು ಆರಂಭದಲ್ಲಿ ಪ್ರಕರಣ ದಾಖಲಿಸಲಿಲ್ಲ. ಅಷ್ಟಕ್ಕೇ ಸುಮ್ಮನಾಗದ ರೂಬಿ ತಂದೆ ಸ್ಥಳೀಯ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದಾಗ ನ್ಯಾಯಾಲಯದ ಆದೇಶದಂತೆ ಪೊಲೀಸರು ಪ್ರಕರಣ ಕೈಗೆತ್ತಿಕೊಂಡರು.

ತನಿಖೆ ಸಂದರ್ಭದಲ್ಲಿ ರೂಬಿ ಫೇಸ್ ಬುಕ್ ಖಾತೆ ಆಕ್ಟಿವ್ ಆಗಿರುವುದು ಪೊಲೀಸರಿಗೆ ತಿಳಿಯಿತು. ನಂತರ ಎರಡು ತಿಂಗಳ ಕಾಲ ಆಕೆಯ ಫೇಸ್ ಬುಕ್ ಮತ್ತು ಮೊಬೈಲ್ ಕರೆ ಮೇಲೆ ನಿಗಾವಹಿಸಿದ ಪೊಲೀಸರಿಗೆ ಈಕೆ ದೆಹಲಿಯಲ್ಲಿ ಜೀವಂತವಾಗಿ ಇನ್ನೊಬ್ಬನನ್ನು ಮದುವೆಯಾಗಿ ಕಾಲಕಳೆಯುತ್ತಿರುವ ವಿಚಾರ ತಿಳಿಯಿತು. ಇದೀಗ ಅಪ್ಪ-ಮಗಳು ಇಬ್ಬರ ಮೇಲೂ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವೆಂಬರ್‌ನಲ್ಲಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದಿದ್ದಕ್ಕೆ ಸಿಎಂ ಪ್ರತಿಕ್ರಿಯೆ ಹೀಗಿತ್ತು

ಈ ವಿಚಾರ ಯಾವಾ ಇಲಾಖೆಯಲ್ಲಿ ಗೊತ್ತಾದಲ್ಲಿ ಕಠಿಣ ಕ್ರಮ: ಜಿ ಪರಮೇಶ್ವರ್

ಬರೋಬ್ಬರಿ ನಾಲ್ಕು ಗಂಟೆ ತೆಂಗಿನ ಮರ ಏರಿ ಕುಳಿತ ವ್ಯಕ್ತಿ, ಕಾರಣ ಕೇಳಿದ್ರೆ ಶಾಕ್‌

ಅನಾರೋಗ್ಯ ಕಾರಣಕ್ಕೆ ತಾತ್ಕಾಲಿಕ ಬ್ರೇಕ್ ಪಡೆದ ಸಂಜಯ್ ರಾವುತ್‌ಗೆ ಮೋದಿ ವಿಶ್‌

ನವೆಂಬರ್ 1ರಂದು ಮೈಸೂರು ಝೂಗೆ ಹೋಗುವ 12ವರ್ಷದೊಳಗಿನ ಮಕ್ಕಳಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments