Webdunia - Bharat's app for daily news and videos

Install App

ಸರ್ಕಾರಿ ನೌಕರರ ಮೇಲಿನ ದಾಳಿ ಮಾಡುವವರನ್ನು ಸುಮ್ಮನೇ ಬಿಡಲ್ಲ: ಪವನ್ ಕಲ್ಯಾಣ್ ಎಚ್ಚರಿಕೆ

Sampriya
ಶನಿವಾರ, 28 ಡಿಸೆಂಬರ್ 2024 (16:30 IST)
Photo Courtesy X
ಆಂಧ್ರಪ್ರದೇಶ: ವೈಎಸ್‌ಆರ್‌ಸಿಪಿ ಸ್ಥಳೀಯ ನಾಯಕ ಸಿ.ಸುದರ್ಶನ್ ರೆಡ್ಡಿ ಅವರಿಂದ ಹಲ್ಲೆಗೊಳಗಾದ ದಲಿತ ಅಧಿಕಾರಿಯನ್ನು ಭೇಟಿಯಾದ ಪವನ್ ಕಲ್ಯಾಣ್ ಅವರು  ಸರ್ಕಾರಿ ನೌಕರರ ಮೇಲೆ ದಾಳಿ ಮಾಡುವ ರಾಜಕೀಯ ನಾಯಕರನ್ನು ಬಿಡಲ್ಲ ಎಂದು ಎಚ್ಚರಿಕೆ ನೀಡಿದರು.

ಏನಿದು ಪ್ರಕರಣ: ಸುದರ್ಶನ್ ರೆಡ್ಡಿ ಇತರರೊಂದಿಗೆ ಸೇರಿ ಗಾಳಿವೀಡು ಮಂಡಲ ಪರಿಷತ್ ಅಭಿವೃದ್ಧಿ ಅಧಿಕಾರಿ (ಎಂಪಿಡಿಒ) ಜವಾಹರ್ ಬಾಬು ಮೇಲೆ ಹಲ್ಲೆ ನಡೆಸಿ ನಿಂದಿಸಿದ್ದಾರೆ.

ಕರ್ತವ್ಯದಲ್ಲಿರುವ ಸರ್ಕಾರಿ ಅಧಿಕಾರಿಯ ಮೇಲೆ ಯಾವುದೇ ರಾಜಕೀಯ ನಾಯಕ "ದಾಳಿ" ಅಥವಾ "ಅಡಚಣೆ" ಮಾಡಿದರೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಶನಿವಾರ ಎಚ್ಚರಿಕೆ ನೀಡಿದ್ದಾರೆ.

ಸ್ಥಳೀಯ ವೈಎಸ್‌ಆರ್‌ಸಿಪಿ ನಾಯಕ ಸಿ ಸುದರ್ಶನ ರೆಡ್ಡಿಯಿಂದ ಹಲ್ಲೆಗೊಳಗಾದ ದಲಿತ ಸರ್ಕಾರಿ ಅಧಿಕಾರಿಯನ್ನು ಭೇಟಿ ಮಾಡಿದ ನಂತರ ಅವರು ಈ ಎಚ್ಚರಿಕೆ ನೀಡಿದರು.

"ನೀವು (ರಾಜಕೀಯ ನಾಯಕರು) ದುರಹಂಕಾರದಿಂದ ಅಧಿಕಾರಿಗಳ ಮೇಲೆ ದಾಳಿ ಮಾಡಿದರೆ, ನಿಮಗೆ ತಕ್ಕ ಶಿಕ್ಷೆಯನ್ನು ನಾವು ಖಚಿತಪಡಿಸುತ್ತೇವೆ" ಎಂದು ಕಲ್ಯಾಣ್ ಕಡಪಾ ರಿಮ್ಸ್ ಆಸ್ಪತ್ರೆಯ ಹೊರಗೆ ಸುದ್ದಿಗಾರರಿಗೆ ತಿಳಿಸಿದರು.

ಕಲ್ಯಾಣ್ ಪ್ರಕಾರ, ಸುದರ್ಶನ್ ರೆಡ್ಡಿ ಅವರು ಇತರರೊಂದಿಗೆ ಸೇರಿ ಅಣ್ಣಮಯ್ಯ ಜಿಲ್ಲೆಯ ಗಾಳಿವೀಡು ಮಂಡಲ ಪರಿಷತ್ ಅಭಿವೃದ್ಧಿ ಅಧಿಕಾರಿ (ಎಂಪಿಡಿಒ) ಜವಾಹರ್ ಬಾಬು ಅವರ ಮೇಲೆ ಅಧಿಕೃತ ಕೊಠಡಿಯ ಕೀಲಿಗಳನ್ನು ನೀಡಲು ನಿರಾಕರಿಸಿದ್ದಕ್ಕಾಗಿ ಹಲ್ಲೆ ಮತ್ತು ನಿಂದನೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Hit And Run Case: ಅಮೆರಿಕದಲ್ಲಿ ಮುಂದಿನ ತಿಂಗಳು ಪದವಿ ಪಡೆಯಬೇಕಿದ್ದ ಗುಂಟೂರು ವಿದ್ಯಾರ್ಥಿನಿ ಸಾವು

ರಸ್ತೆ ಮಧ್ಯೆಯಲ್ಲಿ ಚೇರ್ ಮೇಲೆ ಕುಳಿತು ರೀಲ್ಸ್ ಹುಚ್ಚಾಟ ಮಾಡಿದವ ಅರೆಸ್ಟ್‌

Rahul Gandhi: ರೋಹಿತ್ ವೇಮುಲಾ ಕಾಯಿದೆ ಜಾರಿಗೊಳಿಸಲು ರಾಹುಲ್ ಗಾಂಧಿ ಪತ್ರ: ಯೆಸ್ ಬಾಸ್ ಎಂದ ಸಿದ್ದರಾಮಯ್ಯ

50 ಕೋಟಿ ಅಲ್ಲ ಲಕ್ಷಕ್ಕೂ ಬೆಲೆ ಬಾಳಲ್ಲ ಸತೀಶ್‌ ಖರೀದಿಸಿದ ನಾಯಿ, ED ದಾಳಿಯಲ್ಲಿ ಅಸಲಿಯತ್ತು ಬಯಲು

60ನೇ ವರ್ಷದಲ್ಲಿ ಹಸೆಮಣೆಯೇರಿದ ಪಶ್ಚಿಮ ಬಂಗಾಳದ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ದಿಲೀಪ್‌ ಘೋಷ್‌

ಮುಂದಿನ ಸುದ್ದಿ
Show comments