ತಿರುಪತಿ ಹೋಗುವವರು ಕೈಯಲ್ಲಿ ಕೋಲು ಹಿಡಿದುಕೊಳ್ಳಿ!?

Webdunia
ಬುಧವಾರ, 16 ಆಗಸ್ಟ್ 2023 (09:56 IST)
ಹೈದರಾಬಾದ್ : ಇನ್ಮುಂದೆ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೋಗುವವರು ಕೈಯಲ್ಲಿ ಕೋಲು ಹಿಡಿದುಕೊಂಡು ಹೋಗಬಹುದೆಂದು ತಿರುಮಲ ತಿರುಪತಿ ದೇವಸ್ಥಾನ ಹೇಳಿದೆ.
 
ಹೌದು. ಇತ್ತೀಚೆಗೆ 6 ವರ್ಷದ ಬಾಲಕಿ ತಿಮ್ಮಪ್ಪನ ದರ್ಶನ ಮಾಡಲು ತೆರಳುತ್ತಿದ್ದ ಸಂದರ್ಭದಲ್ಲಿ ಚಿರತೆ ದಾಳಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಇನ್ಮುಂದೆ ಇಂತಹ ಘಟನೆ ಮರುಕಳಿಸದಂತೆ ಟಿಟಿಡಿ ಮುಂಜಾಗ್ರತಾ ಕ್ರಮ ವಹಿಸುತ್ತಿದ್ದು, ಭಕ್ತರು ಕೈಯಲ್ಲಿ ಕೋಲು ಹಿಡಿದುಕೊಂಡು ಹೋಗುವಂತೆ ತಿಳಿಸಿದೆ.

ಪಾದಾಚಾರಿ ಮಾರ್ಗವಾಗಿ ದೇವಾಸ್ಥಾನಕ್ಕೆ ಹೋಗುವಾಗ ಯಾತ್ರಾರ್ಥಿಗಳು ಬ್ಯಾಚ್ ಬ್ಯಾಚ್ ಆಗಿ ಹೋಗಬೇಕು. ಅಲ್ಲದೆ ಈ ಬ್ಯಾಚ್ಗೆ ಓರ್ವ ಸೆಕ್ಯುರಿಟಿ ಗಾರ್ಡ್ ಇರಲಿದ್ದಾರೆ ಎಂದು ಕೂಡ ತಿಳಿಸಿದೆ.

ನಡೆದುಕೊಂಡು ಹೋಗುವ ಸಂದರ್ಭದಲ್ಲಿ ಕಾಡುಪ್ರಾಣಿಗಳು ದಾಳಿ ಮಾಡಿದರೆ ಅವುಗಳಿಂದ ರಕ್ಷಿಸಿಕೊಳ್ಳುವ ಸಲುವಾಗಿ ಸಾಧ್ಯವಾದಷ್ಟು ಪ್ರತಿಯೊಬ್ಬ ಯಾತ್ರಿಗೂ ಕೋಲನ್ನು ನೀಡಲಾಗುತ್ತದೆ. ಇನ್ನು ದಾರಿಯಲ್ಲಿ ಹೋಗುವಾಗ ಕೋತಿ ಮುಂತಾದ ಪ್ರಾಣಿಗಳಿಗೆ ಆಹಾರ ನೀಡದಂತೆ ಹಾಗೂ ಕಸ ಹಾಕದಂತೆ ಸೂಚಿಸಲಾಗಿದೆ. ಈ ಮೂಲಕ ಪ್ರಾಣಿಗಳನ್ನು ಆಕರ್ಷಿಸದಂತೆ  ಟಿಟಿಡಿ ಅಧ್ಯಕ್ಷ ಬಿ ಕರುಣಾಕರ್ ರೆಡ್ಡಿ ಹೇಳಿದ್ದಾರೆ.

ದೇವಾಲಯವು ಅರಣ್ಯ ಪ್ರದೇಶದಲ್ಲಿ ಇರುವುದರಿಂದ ಪಾದಚಾರಿ ಪ್ರದೇಶಕ್ಕೆ ಬೇಲಿ ಹಾಕುವ ಪ್ರಸ್ತಾವನೆಯನ್ನು ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯಕ್ಕೆ ಕಳುಹಿಸಲಾಗಿದೆ. ಕೆಲವೊಮ್ಮೆ ದೇಗುಲದಲ್ಲಿ ನೂಕುನುಗ್ಗಲು ಕಂಡುಬಂದರೂ ಕೆಲವು ಕ್ರಮಗಳು ಭಕ್ತರಲ್ಲಿ ಅಸಮಾಧಾನ ಮೂಡಿಸಿದೆ ಎಂದು ಅಧಿಕಾರಿ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಡ್ನಿಯಲ್ಲಿ ನಡೆದ ಮಾರಣಾಂತಿಕ ದಾಳಿ ಬಗ್ಗೆ ಯುಕೆ ಪ್ರಧಾನಿ ಮೊದಲ ರಿಯಾಕ್ಷನ್

2 ವರ್ಷದ ಬಾಲಕಿ ರೇಪ್ ಎಸಗಿ, ಹತ್ಯೆ ಮಾಡಿದವನಿಗೆ ಕ್ಷಮದಾನಕ್ಕೆ ನಿರಾಕರಿಸಿದ ರಾಷ್ಟ್ರಪತಿ

ಆರ್‌ಎಸ್‌ಎಸ್‌, ಬಿಜೆಪಿ ಸಿದ್ಧಾಂತ ದೇಶವನ್ನು ನಾಶಪಡಿಸುತ್ತದೆ: ಮಲ್ಲಿಕಾರ್ಜುನ ಖರ್ಗೆ

ಬಿಜೆಪಿ ಸಾರ್ವಜನಿಕರ ನಂಬಿಕೆಯನ್ನು ಕಳೆದುಕೊಂಡಿದೆ: ಪ್ರಿಯಾಂಕಾ ಗಾಂಧಿ

ಮತ್ತಷ್ಟು ದಾಖಲೆ ಸಮೇತ ಎದುರು ಬರುತ್ತೇವೆ: ಗುಡುಗಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments