Webdunia - Bharat's app for daily news and videos

Install App

ಭಾರತೀಯ ಯೋಧನನ ರುಂಡ ಕತ್ತರಿಸಿದ ಹೇಡಿ ಪಾಕ್ ಸೈನಿಕರು

Webdunia
ಮಂಗಳವಾರ, 22 ನವೆಂಬರ್ 2016 (17:39 IST)
ಪಾಕಿಸ್ತಾನದ ಸೇನೆ ಹೇಡಿಗಳ ಸೇನೆ ಎನ್ನುವುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ಗಡಿನಿಯಂತ್ರಣ ರೇಖೆಯ ಬಳಿ ಗುಂಡಿನ ದಾಳಿ ನಡೆಸಿದ ಪಾಕಿಸ್ತಾನ, ಮೂವರು ಭಾರತೀಯ ಸೈನಿಕರನ್ನು ಹತ್ಯೆಗೈದು ಒಬ್ಬ ಯೋಧನ ಶಿರಚ್ಚೇದ ಮಾಡಿದ ಹೇಯ ಘಟನೆ ವರದಿಯಾಗಿದೆ.
 
ಜಮ್ಮು ಕಾಶ್ಮಿರದ ಮತ್ತಾಲ್ ಸೆಕ್ಟರ್‌ ಬಳಿಯಿರುವ ಗಡಿನಿಯಂತ್ರಣ ರೇಖೆಯ ಬಳಿ ಒಬ್ಬ ಯೋಧನ ಮೃತದೇಹ ಪತ್ತೆಯಾಗಿದ್ದು, ಪಾಕಿಗಳು ಯೋಧನ ರುಂಡವನ್ನು ಕತ್ತರಿಸಿ ಹಿಂಸೆ ನೀಡಿರುವುದು ಪತ್ತೆಯಾಗಿದೆ.
 
ಉತ್ತರ ಕಮಾಂಡ್‌ನ ಭಾರತೀಯ ಸೇನೆ ಟ್ವೀಟ್ ಮಾಡಿದ್ದು, ಮಚ್ಚಾಲ್ ಕ್ಷೇತ್ರದಲ್ಲಿ ಮೂವರು ಭಾರತೀಯ ಯೋಧರು ಹತರಾಗಿದ್ದು, ಒಬ್ಬ ಸೈನಿಕನ ಶಿರಚ್ಚೇದ ಮಾಡಲಾಗಿದೆ. ಮುಂಬರುವ ದಿನಗಳಲ್ಲಿ ಪಾಕಿಸ್ತಾನ ಭಾರಿ ಬೆಲೆ ತೆರಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ. 
 
ಕಳೆದ ಸೆಪ್ಟೆಂಬರ್ 29 ರಂದು ನಡೆದ ಸೀಮಿತ ದಾಳಿಯ ನಂತರ ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನ 280 ಬಾರಿ ಕದನ ವಿರಾಮ ಉಲ್ಲಂಘಿಸಿದೆ ಎಂದು ಸೇನಾ ಮೂಲಗಳು ತಿಳಿಸಿವೆ.
 
ಏತನ್ಮಧ್ಯೆ, ಹಿರಿಯ ಸೇನಾಧಿಕಾರಿ ಬಿಪಿನ್ ರಾವತ್, ಕೇಂದ್ರ ರಕ್ಷಣಾ ಖಾತೆ ಸಚಿವ ಮನೋಹರ್ ಪರಿಕ್ಕರ್‌ಗೆ ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. 
 
ಇದಕ್ಕಿಂತ ಮೊದಲು ಅಕ್ಟೋಬರ್ 28 ರಂದು ಭಾರತೀಯ ಯೋಧನಿಗೆ ಪಾಕಿಗಳು ಚಿತ್ರಹಿಂಸೆ ನೀಡಿ ಹತ್ಯೆಗೈದಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Pehalgam Attack: ಲೆಫ್ಟಿನೆಂಟ್ ವಿನಯ್ ನರ್ವಾಲ್ ಕೊನೆಯ ವಿಡಿಯೋ ವೈರಲ್: ಪತ್ನಿ ಜೊತೆ ಖುಷಿಯಾಗಿದ್ದ ಕೊನೆಯ ಕ್ಷಣ

Pahalgam Terror Attack:ಮೃತ ಕನ್ನಡಿಗರ ಕುಟುಂಬಕ್ಕೆ ₹10 ಲಕ್ಷ ಪರಿಹಾರ

Terror Attack: ಪ್ರವಾಸಿಗರ ಮೇಲಿನ ದಾಳಿಗೆ ರೊಚ್ಚಿಗೆದ್ದ ಶಾರುಖ್ ಖಾನ್‌, ಪೋಸ್ಟ್ ಮಾಡಿ ಹೀಗಂದ್ರು

Terror Attack, 40ಕ್ಕೂ ಅಧಿಕ ಕನ್ನಡಿಗರನ್ನು ವಿಶೇಷ ವಿಮಾನದಲ್ಲಿ ಕರೆತರುತ್ತೇವೆ: ಸಿಎಂ ಸಿದ್ದರಾಮಯ್ಯ

Terror Attack: ಉಗ್ರರ ವಿರುದ್ಧ ರಾಜಿಯಿಲ್ಲದ ನಿರ್ಧಾರ ಕೈಗೊಳ್ಳುತ್ತೇವೆ, ರಾಜನಾಥ್ ಸಿಂಗ್‌ ತಿರುಗೇಟು

ಮುಂದಿನ ಸುದ್ದಿ
Show comments