Webdunia - Bharat's app for daily news and videos

Install App

ವಿಮಾನವೇರಿ ಬಂದವ 2 ರೂಪಾಯಿ ಚಿಲ್ಲರೆಗಾಗಿ ಪ್ರಾಣ ತೆತ್ತ

Webdunia
ಗುರುವಾರ, 28 ಜುಲೈ 2016 (08:04 IST)
ಕೇವಲ 2 ರೂಪಾಯಿ ಚಿಲ್ಲರೆ ಹಣಕ್ಕಾಗಿ ಯುವಕನೋರ್ವ ಪ್ರಾಣವನ್ನೇ ಕಳೆದುಕೊಂಡ ದಾರುಣ ಘಟನೆ ಮುಂಬೈನಲ್ಲಿ ನಡೆದಿದೆ. ಮೃತನನ್ನು ಚೇತನ್ ಅರ್ಚಿನೇರ್ಕರ್ ಎಂದು ಗುರುತಿಸಲಾಗಿದೆ.

ಗೋವಾದಿಂದ ವಿಮಾನದಲ್ಲಿ ಮುಂಬೈಗೆ ಆಗಮಿಸಿದ ಚೇತನ್ ವಿಮಾನ ನಿಲ್ದಾಣದಿಂದ ಗೋದ್ರೆಜ್ ಕಾಲೋನಿಯಲ್ಲಿನ ತನ್ನ ಮನೆಗೆ ಆಟೋ ಬಾಡಿಗೆ ಪಡೆದ. ಚೇತನ್ ಮನೆ ಮುಂದೆ ಆಟೋ ನಿಲ್ಲಿಸಿದ ಚಾಲಕ ಕಮಲೇಶ್ ಗುಪ್ತಾ 172 ರೂಪಾಯಿ ಚಾರ್ಜ್ ಮಾಡಿದ. 200 ರೂಪಾಯಿ ಕೊಟ್ಟ ಚೇತನ್‌ಗೆ ಚಾಲಕ ಕೇವಲ 20 ರೂಪಾಯಿ ನೀಡಿ 8 ರೂಪಾಯಿ ಚಿಲ್ಲರೆ ಇಲ್ಲವೆಂದ. 2 ರೂಪಾಯಿ ತರುತ್ತೇನೆ ಎಂದು ಚೇತನ್ ಮನೆಯೊಳಗೆ ಹೋಗಿದ್ದಾನೆ. ಆಗ ಚೇತನ್ ತಂದೆ ಕೂಡ ಆಟೋ ಚಾಲಕನ ಬಳಿ ಹಣ ಕೇಳಿದ್ದಾನೆ. ಆದರೆ ಆತನಿಗೆ ಬೈದ ಗುಪ್ತಾ ಆಟೋ ಚಾಲನೆ ಮಾಡಿಕೊಂಡು ಹೋಗಿದ್ದಾನೆ.

ಇದರಿಂದ ಕೋಪಗೊಂಡ ಚೇತನ್‌, ಆಟೋ ಬೆನ್ನಟ್ಟಿ ಅದನ್ನು ಹಿಡಿಯಲು ಯತ್ನಿಸಿದ್ದಾನೆ. ದುರದೃಷ್ಟಾವಶಾತ್ ಆಯ ತಪ್ಪಿ ಕೆಳಕ್ಕೆ ಬಿದ್ದ ಪರಿಣಾಮ ಆಟೋ ಆತನ ಮೇಲೆ ಹರಿದು ಹೋಗಿದೆ.

ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಚೇತನ್ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಕೊನೆಯುಸಿರೆಳೆದಿದ್ದಾನೆ.

ತನ್ನ ಕಣ್ಣಮುಂದೆಯೇ ಮಗ ಅಪಘಾತಕ್ಕೆ ಈಡಾಗುತ್ತಿದ್ದರೂ ಏನೂ ಮಾಡಲಾಗದ ತಂದೆ ಘಟನೆಯಿಂದ ಆಘಾತಕ್ಕೊಳಗಾಗಿದ್ದಾರೆ.

ಆರೋಪಿ ಚಾಲಕ ಗುಪ್ತಾನನ್ನು ಪೊಲೀಸರು ಬಂಧಿಸಿದ್ದಾರೆ.

ಇತ್ತೀಚಿಗಷ್ಟೇ ಮ್ಯಾನೇಜ್‌ಮೆಂಟ್ ಪದವಿ ಮುಗಸಿದ್ದ ಚೇತನ್ ಸಂದರ್ಶನಕ್ಕೆ ಗೋವಾಗೆ ಹೋಗಿ ಬಂದಿದ್ದ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ ರಘುವಂಶಿ ಗತಿ ನನಗಾಗಲಿಲ್ಲ.. ದೇವರೇ ಕಾಪಾಡಿದ..

Karnataka Weather: ಈ ಒಂದು ಜಿಲ್ಲೆಗೆ ಮಾತ್ರ ಇಂದು ಭಾರೀ ಮಳೆ

ಏರ್‌ ಇಂಡಿಯಾ ವಿಮಾನ ದುರಂತ: ಪ್ರಾಣ ಉಳಿಸಿಕೊಳ್ಳಲು ಬಿಲ್ಡಿಂಗ್‌ನಿಂದ ವಿದ್ಯಾರ್ಥಿಗಳು ಹಾರುತ್ತಿರುವ ಭೀಕರ ವಿಡಿಯೋ ವೈರಲ್‌

ಶೀಘ್ರದಲ್ಲೇ ನಿವೃತ್ತಿ ಪಡೆಯುವುದಾಗಿ ಹೇಳಿದ್ದ: ಕ್ಯಾಪ್ಟನ್ ಸುಮೀತ್‌ ಸಬರ್ವಾಲ್‌ಗೆ ತಂದೆಯ ಕಣ್ಣೀರ ಅಂತಿಮ ವಿದಾಯ

ರಾತೋರಾತ್ರಿ ಹಿಂದೂ ಕಾರ್ಯಕರ್ತರ ಮನೆಗೆ ಪೊಲೀಸರ ಭೇಟಿ: ತನಿಖೆಗೆ ಆದೇಶ

ಮುಂದಿನ ಸುದ್ದಿ
Show comments