Select Your Language

Notifications

webdunia
webdunia
webdunia
webdunia

ಬಾಪು ಕನಸು ನನಸಾಗುವ ಸಮಯ ಬಂದಿದೆ : ಯೋಗಿ ಆದಿತ್ಯನಾಥ್

ಬಾಪು ಕನಸು ನನಸಾಗುವ ಸಮಯ ಬಂದಿದೆ : ಯೋಗಿ ಆದಿತ್ಯನಾಥ್
ಅಹಮದಾಬಾದ್ , ಮಂಗಳವಾರ, 22 ನವೆಂಬರ್ 2022 (14:22 IST)
ಅಹಮದಾಬಾದ್ : ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅನ್ನು ವಿಸರ್ಜಿಸುವ ಮಹಾತ್ಮ ಗಾಂಧಿಯವರ ಕನಸನ್ನು ನನಸಾಗಿಸುವ ಸಮಯ ಬಂದಿದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ಗುಜರಾತ್ನಲ್ಲಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಪೋರಬಂದರ್ನಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಯೋಗಿ, ಕಾಂಗ್ರೆಸ್ ಅಧಿಕಾರದಲ್ಲಿದ್ದರೆ ಕೊರೊನ ಸಾಂಕ್ರಾಮಿಕ ಸಮಯದಲ್ಲಿ ಚಿಕಿತ್ಸೆ ಮತ್ತು ಲಸಿಕೆಗಾಗಿ ಮೀಸಲಾದ ಹಣವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿತ್ತು. ಬಿಕ್ಕಟ್ಟಿನ ಸಂದರ್ಭದಲ್ಲಿ ಕಾಂಗ್ರೆಸ್ ಎಂದಿಗೂ ಜನರೊಂದಿಗೆ ನಿಲ್ಲುವುದಿಲ್ಲ ಎಂದು ಹೇಳಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಸೊಲೊಮನ್ ದ್ವೀಪದಲ್ಲಿ ಭಾರೀ ಭೂಕಂಪ ದಾಖಲು