Webdunia - Bharat's app for daily news and videos

Install App

ಟಿಪ್ಪು ದಕ್ಷಿಣದ ಔರಂಗಜೇಬ್, ಸಿಎಂ ಸಿದ್ದು ಕರ್ನಾಟಕದ ಲಾಲು ಯಾದವ್: ಆರೆಸ್ಸೆಸ್

Webdunia
ಮಂಗಳವಾರ, 24 ನವೆಂಬರ್ 2015 (16:34 IST)
ಅಲ್ಪಸಂಖ್ಯಾತರನ್ನು ಓಲೈಸಲು ರಾಜ್ಯ ಸರಕಾರ ಟಿಪ್ಪು ಜಯಂತಿ ಆಚರಣೆಗೆ ಮುಂದಾಗಿರುವ ಬಗ್ಗೆ ಖಾರವಾಗಿ ಟೀಕಿಸಿರುವ ಪಾಂಚಜನ್ಯ, ಟಿಪ್ಪು ಸುಲ್ತಾನ್ ದಕ್ಷಿಣದ ಔರಂಗಜೇಬ್‌ನಂತೆ ಲಕ್ಷಾಂತರ ಹಿಂದೂಗಳನ್ನು ಒತ್ತಾಯಪೂರ್ವಕವಾಗಿ ಮುಸ್ಲಿಂ ಧರ್ಮಕ್ಕೆ ಮತಾಂತರಗೊಳಿಸಿದ್ದನು. ಟಿಪ್ಪು ಜಯಂತಿ ಆಚರಿಸುತ್ತಿರುವ ಸಿದ್ದರಾಮಯ್ಯ ಕರ್ನಾಟಕದ ಲಾಲುನಂತೆ ಎಂದು ವರ್ಣಿಸಿದೆ. 
 
ರಾಜ್ಯ ಸರಕಾರ ಮುಸ್ಲಿಂ ಸಮುದಾಯದವರಾದ ಮೌಲಾನಾ ಅಬ್ದುಲ್ ಕಲಾಂ ಆಜಾದ್ ಮತ್ತು ಮೈಸೂರು ಪ್ರಾಂತ್ಯದ ದಿವಾನರಾಗಿದ್ದ ಸರ್ ಮಿರ್ಜಾ ಇಸ್ಮಾಯಿಲ್ ಜಯಂತಿಗಳನ್ನು ಆಚರಿಸುವುದು ಬಿಟ್ಟು, ಟಿಪ್ಪು ಸುಲ್ತಾನ್‌ನಂತಹ ಧರ್ಮಾಂಧನ ಜಯಂತಿ ಆಚರಣೆಗೆ ಮುಂದಾಗಿದೆ ಎಂದು ಆರೆಸ್ಸೆಸ್ ಮುಖವಾಣಿಯಾದ ಆರ್ಗನೈಸರ್ ಕಿಡಿಕಾರಿದೆ. 
 
ಟಿಪ್ಪು ಸುಲ್ತಾನ್ ವಿವಾದಾತ್ಮಕ ವ್ಯಕ್ತಿ. ಟಿಪ್ಪು ಸುಲ್ತಾನ್ ಜಯಂತಿ ಆಚರಿಸುತ್ತಿರುವುದು ಕೇವಲ ಮುಸ್ಲಿಮರನ್ನು ಓಲೈಸಲು ಮಾತ್ರ. ಟಿಪ್ಪುಸುಲ್ತಾನ್ ಬೆಂಬಲಿಗರು ಮತ್ತು ಟಿಪ್ಪು ಜಯಂತಿ ವಿರೋಧಿಸುವವರ ಮಧ್ಯೆ ದ್ವೇಷದ ವಾತಾವರಣ ಉಂಟಾಗಿದೆ ಎಂದು ಪ್ರಕಟಿಸಿದೆ.
 
ಹಿಂದುಸಂಘಟನೆಗಳ ಪ್ರಕಾರ, ಟಿಪ್ಪು ಜಾತ್ಯಾತೀತವಾದಿಯಲ್ಲ.  ಭಾರಿ ಸಂಖ್ಯೆಯಲ್ಲಿ ದೇವಾಲಯಗಳನ್ನು ನೆಲಸಮಗೊಳಿಸಿ ಹಿಂದೂಗಳನ್ನು ಒತ್ತಾಯಪೂರ್ವಕವಾಗಿ ಮುಸ್ಲಿಂ ಧರ್ಮಕ್ಕೆ ಮತಾಂತರ ಮಾಡಿದ ಆತನೊಬ್ಬ ದಕ್ಷಿಣ ಭಾರತದ ಔರಂಗಜೇಬ್‌ನಂತೆ ಎಂದು ಆರೆಸ್ಸೆಸ್ ಮುಖವಾಣಿ ಪಾಂಚಜನ್ಯ ಲೇಖನದಲ್ಲಿ ಪ್ರಕಟಿಸಲಾಗಿದೆ.
 
ಅಲ್ಪಸಂಖ್ಯಾತರು, ಹಿಂದುಳಿದವರು ಮತ್ತು ದಲಿತರ ನಾಯಕನಂತೆ ಬಿಂಬಿಸಿಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಕರ್ನಾಟಕದ ಲಾಲು ಯಾದವ್‌ರಂತೆ ಎಂದು ಆರೆಸ್ಸೆಸ್ ಮುಖವಾಣಿ ಪಾಂಚಜನ್ಯದಲ್ಲಿ ಲೇಖನವನ್ನು ಪ್ರಕಟಿಸಲಾಗಿದೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments