Publish Date: Sat, 06 Jun 2020 (10:26 IST)
Updated Date: Sat, 06 Jun 2020 (10:30 IST)
ಬೆಂಗಳೂರು: ಸರ್ಕಾರ ದೇವಾಲಯಗಳನ್ನು ತೆರೆಯಲು ಅನುಮತಿ ನೀಡಿರುವ ಬೆನ್ನಲ್ಲೇ ಪ್ರಮುಖ ದೇವಾಲಯಗಳಲ್ಲಿ ಭಕ್ತರ ಆಗಮನಕ್ಕೆ ಸಿದ್ಧತೆ ನಡೆದಿದೆ.
ರಾಜ್ಯದ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾದ ಧರ್ಮಸ್ಥಳ ದೇವಾಲಯ ಇದೇ ಸೋಮವಾರದಿಂದ ಭಕ್ತರಿಗಾಗಿ ತೆರೆಯಲಾಗುತ್ತದೆ. ಇದಕ್ಕಾಗಿ ಈಗಾಗಲೇ ಸಕಲ ಸಿದ್ಧತೆ ಮಾಡಲಾಗಿದೆ.
ಇನ್ನು, ಶ್ರೀಮಂತ ದೇವಾಲಯ ಎಂದೇ ಖ್ಯಾತಿ ಪಡೆದಿರುವ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಜೂನ್ 11 ರಿಂದ ಅವಕಾಶ ಸಿಗಲಿದೆ. ಆದರೆ ಪ್ರತಿನಿತ್ಯ 6 ಸಾವಿರ ಮಂದಿಗೆ ಮಾತ್ರ ಪ್ರವೇಶ ಕಲ್ಪಿಸಲಾಗುವುದು ಎಂದು ದೇವಾಲಯ ಆಡಳಿತ ಮಂಡಳಿ ಹೇಳಿದೆ. ಅದೂ ಸಾಕಷ್ಟು ಸುರಕ್ಷಿತಾ ಕ್ರಮಗಳೊಂದಿಗೆ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಒದಗಿಸಲಾಗುತ್ತದೆ.