ತಿರುಪತಿಯಲ್ಲಿ ಮತ್ತೊಂದು ದುರಂತ: ತಿಮ್ಮಪ್ಪನ ಕೋಪಾಗ್ನಿಯೇ

Krishnaveni K
ಸೋಮವಾರ, 13 ಜನವರಿ 2025 (16:23 IST)
ತಿರುಪತಿ: ಮೊನ್ನೆಯಷ್ಟೇ ವೈಕುಂಠ ಏಕಾದಶಿ ಸಂದರ್ಭದಲ್ಲಿ ಕಾಲ್ತುಳಿತದಿಂದಾಗಿ ತಿರುಪತಿಯಲ್ಲಿ ಸಾವು-ನೋವುಗಳಾಗಿತ್ತು. ಇದರ ಬೆನ್ನಲ್ಲೇ ಈಗ ಮತ್ತೊಂದು ದುರಂತ ಸಂಭವಿಸಿದ್ದು ಭಕ್ತರು ಇದು ತಿಮ್ಮಪ್ಪನ ಕೋಪಾಗ್ನಿಯೇ ಎಂದು ಸಂಶಯ ಪಡುವಂತಾಗಿದೆ.

ಇಂದು ತಿರುಪತಿಯ ಲಡ್ಡು ಕೌಂಟರ್ ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕಾಣಿಸಿಕೊಂಡ ಬೆನ್ನಲ್ಲೇ ಭಕ್ತರು ಭಯದಿಂದ ಓಡಿ ಹೋಗಿದ್ದಾರೆ. ವಿದ್ಯುತ್ ಸರಬರಾಜಿನಲ್ಲಿ ಉಂಟಾದ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಘಟನೆ ನಡೆದಿದೆ ಎನ್ನಲಾಗಿದೆ.

ಕೌಂಟರ್ ಸಂಖ್ಯೆ 47 ರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಲಡ್ಡು ಪ್ರಸಾದಕ್ಕಾಗಿ ಕಾದು ನಿಂತಿದ್ದ ಭಕ್ತರು ಭಯದಿಂದ ಓಡಿ ಹೋಗಿದ್ದಾರೆ. ತಕ್ಷಣವೇ ಬೆಂಕಿ ನಂದಿಸುವ ಕೆಲಸ ಮಾಡಲಾಗಿದೆ. ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ.

ಈ ಹಿಂದೆ ಜಗನ್ ಆಡಳಿತದ ಸಂದರ್ಭದಲ್ಲಿ ತಿರುಪತಿ ಲಡ್ಡಿಗೆ ಪ್ರಾಣಿಗಳ ಕೊಬ್ಬು ಬಳಕೆ ಮಾಡಲಾಗುತ್ತಿತ್ತು ಎಂದು ಲ್ಯಾಬ್ ಪರೀಕ್ಷಾ ವರದಿಗಳು ಹೇಳಿದ್ದವು. ಇದಾದ ಬಳಿಕ ತಿರುಪತಿಯಲ್ಲಿ ಶುದ್ಧೀಕಾರ್ಯಗಳೂ ನಡೆದವು. ಆದರೆ ಈ ಘಟನೆ ಬೆಳಕಿಗೆ ಬಂದ ಬಳಿಕ ತಿರುಪತಿಯಲ್ಲಿ ನಡೆಯುತ್ತಿರುವ ಎರಡನೇ ದುರಂತ ಇದಾಗಿದೆ. ಹೀಗಾಗಿ ಕೆಲವರು ಇದು ತಿಮ್ಮಪ್ಪ ಕೋಪಗೊಂಡಿದ್ದಾನೆ ಎನ್ನುವುದರ ಸೂಚನೆಯಿರಬಹುದು ಎನ್ನುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯನವರೇ ನೀವು ಕರ್ನಾಟಕಕ್ಕೆ ಸಿಎಂ, ವಯನಾಡಿನ ವಕ್ತಾರರಲ್ಲ: ಆರ್ ಅಶೋಕ್ ವಾಗ್ದಾಳಿ

ಸೈಡ್ ಇಫೆಕ್ಟ್ ಇರುವ ಔಷಧಿ ತೆಗೆದುಕೊಳ್ಳಬಾರದೇ, ಡಾ ಸಿಎನ್ ಮಂಜುನಾಥ್ ಟಿಪ್ಸ್

Gold price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಉಡುಪಿ ಕೃಷ್ಣನ ಭೇಟಿಗೆ ಬರಲಿದ್ದಾರೆ ಪ್ರಧಾನಿ ಮೋದಿ

ಮುಂದಿನ ಸುದ್ದಿ
Show comments