Tirupati Stampedes: ತಿರುಪತಿ ಕಾಲ್ತುಳಿತ ದುರಂತಕ್ಕೆ ಮೂಲ ಕಾರಣ ಯಾರು

Krishnaveni K
ಗುರುವಾರ, 9 ಜನವರಿ 2025 (09:38 IST)
Photo Credit: X
ತಿರುಪತಿ: ವೈಕುಂಠ ಏಕಾದಶಿಯ ಟಿಕೆಟ್ ಖರೀದಿಗೆ ನೂಕುನುಗ್ಗಲು ಉಂಟಾಗಿ ತಿರುಪತಿಯಲ್ಲಿ ಸಾವನ್ನಪ್ಪಿದ್ದವರ ಸಂಖ್ಯೆ 7 ಕ್ಕೇರಿದೆ. ಈಗ ಈ ಅನಾಹುತಕ್ಕೆ ಕಾರಣ ಯಾರು ಎಂಬ ಪ್ರಶ್ನೆ ಮೂಡಿದೆ.

ವೈಕುಂಠ ಏಕಾದಶಿ ಸಂದರ್ಭದಲ್ಲಿ ವೈಕುಂಠ ದ್ವಾರ ದರ್ಶನ ಟಿಕೆಟ್ ಖರೀದಿಸಲು ನಿನ್ನೆ ಸೇವಾ ಕೌಂಟರ್ ತೆರೆಯಲಾಗಿದೆ. ಈ ವೇಳೆ ಏಕಾಏಕಿ ಹಲವು ಭಕ್ತರು ನುಗ್ಗಿದ್ದರಿಂದ ನೂಕುನುಗ್ಗಲು ಉಂಟಾಗಿದೆ. ಘಟನೆಯಲ್ಲಿ 7 ಮಂದಿ ಸಾವನ್ನಪ್ಪಿದ್ದರೆ 20 ಮಂದಿ ಸ್ಥಿತಿ ಗಂಭೀರವಾಗಿದೆ.

ದುರಂತಕ್ಕೆ ಯಾರು ಹೊಣೆ?
ವೈಕುಂಠ ಏಕಾದಶಿ ನಿಮಿತ್ತ ಗುರುವಾರ ಬೆಳಿಗ್ಗೆ 5 ಗಂಟೆಯಿಂದ ವೈಕುಂಠ ದ್ವಾರ ದರ್ಶನಕ್ಕೆ ಟಿಕೆಟ್ ವಿತರಿಸಲಾಗುವುದು ಎಂದು ಟಿಟಿಡಿ ಪ್ರಕಟಿಸಿತ್ತು. ಜನವರಿ 10, 11, ಮತ್ತು 12 ರಂದು ವೈಕುಂಠ ದ್ವಾರ ದರ್ಶನವಿರಲಿದೆ. ಒಂದು ದಿನಕ್ಕೆ 40 ಸಾವಿರದಂತೆ 1 ಲಕ್ಷದ 20 ಸಾವಿರ ಟಿಕೆಟ್ ವಿತರಿಸಲು ವ್ಯವಸ್ಥೆ ಮಾಡಲಾಗಿತ್ತು. ಇದಕ್ಕಾಗಿ 9 ಕಡೆಗಳಲ್ಲಿ 90 ಸೇವಾ ಕೌಂಟರ್ ತೆರೆದಿತ್ತು.

ಆದರೆ ಟಿಕೆಟ್ ಖರೀದಿಗಾಗಿ ನಿನ್ನೆ ಸಂಜೆಯಿಂದಲೇ ಭಕ್ತರು ಸಾಲುಗಟ್ಟಿ ನಿಂತಿದ್ದರು. ಹೀಗಾಗಿ ನಿನ್ನೆಯಿಂದಲೇ ಟಿಕೆಟ್ ವಿತರಿಸಲು ಟಿಟಿಡಿ ಮುಂದಾಯಿತು. ಆದರೆ ಭೈರಾಗಿಪಟ್ಟೇಡ ರಾಮ ನಾಯ್ಡು ಶಾಲೆಯ ಬಳಿ ಸರತಿಯಲ್ಲಿ ನಿಂತಿದ್ದ ಓರ್ವರಿಗೆ ಉಸಿರಾಟದ ಸಮಸ್ಯೆ ಎದುರಾಯಿತು.

ಹೀಗಾಗಿ ಆ ವ್ಯಕ್ತಿಯನ್ನು ಆಸ್ಪತ್ರೆಗೆ ಕರೆದೊಯ್ಯಲು ಭದ್ರತಾ ಸಿಬ್ಬಂದಿ ಗೇಟ್ ತೆರೆದಿದ್ದಾರೆ. ಗೇಟ್ ತೆರೆದ ಹಿನ್ನಲೆಯಲ್ಲಿ ಟಿಕೆಟ್ ಖರೀದಿಗೆ ಗೇಟ್ ತೆರೆಯಲಾಗಿದೆ ಎಂದು ತಪ್ಪಾಗಿ ತಿಳಿದು ಜನ ಏಕಾ ಏಕಿ ಮುನ್ನುಗ್ಗಿದ್ದಾರೆ. ಈ ನೂಕುನುಗ್ಗಲಿನಲ್ಲಿ ಕೆಲವರು ಕೆಳಗೆ ಬಿದ್ದಿದ್ದಾರೆ. ಬಿದ್ದವರನ್ನು ತುಳಿದುಕೊಂಡೇ ಹಲವರು ಮುನ್ನಡೆದಿದ್ದಾರೆ. ಇದರಿಂದಾಗಿ ಈ ಸರಣಿ ಸಾವು ಸಂಭವಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾಯಂದಿರ ಎದೆಹಾಲಿನಲ್ಲಿ ಯುರೇನಿಯಂ ಪತ್ತೆ, ಮಕ್ಕಳ ಮೇಲೆ ಪರಿಣಾಮವೇನು ಗೊತ್ತಾ

ದುಬೈ ಏರ್ ಶೋ ದುರಂತ, ತಾಯ್ನಾಡಿಗೆ ಪೈಲೆಟ್ ನಮನ್ಶ್‌ ಸಿಯಾಲ್ ಪಾರ್ಥಿವ ಶರೀರ

ಕರೂರು ಕಾಲ್ತುಳಿತ ಬೆನ್ನಲ್ಲೇ ಪಕ್ಷದ ಮುಖಂಡರ ಸಭೆ ಕರೆದ ನಟ ವಿಜಯ್

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್‌ ನಾಳೆ ಪ್ರಮಾಣ ಸ್ವೀಕಾರ

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮತ್ತಷ್ಟು ಕಳಪೆ ಮಟ್ಟಕ್ಕೆ ಇಳಿದ ವಾಯು ಗುಣಮಟ್ಟ

ಮುಂದಿನ ಸುದ್ದಿ
Show comments