Webdunia - Bharat's app for daily news and videos

Install App

ತಿರುಪತಿ ದೇಗುಲದಲ್ಲಿ ಕಾಲ್ತುಳಿತ ಪ್ರಕರಣ: ಎರಡು ವಾರಗಳ ಬಳಿಕ ನ್ಯಾಯಾಂಗ ತನಿಖೆಗೆ ಆದೇಶ

Sampriya
ಗುರುವಾರ, 23 ಜನವರಿ 2025 (12:26 IST)
Photo Courtesy X
ಹೈದರಾಬಾದ್: ತಿರುಪತಿ ತಿರುಮಲ ದೇಗುಲದಲ್ಲಿ ಇದೇ 8ರಂದು ಸಂಭವಿಸಿದ್ದ ಕಾಲ್ತುಳಿತ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಆಂಧ್ರ ಪ್ರದೇಶ ಸರ್ಕಾರ ಬುಧವಾರ ಆದೇಶಿಸಿದೆ. ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಂ.ಸತ್ಯನಾರಾಯಣ ಮೂರ್ತಿ ತನಿಖೆಯ ನೇತೃತ್ವ ವಹಿಸಲಿದ್ದಾರೆ.

ತಿರುಪತಿಯ ಎಂಜಿಎಂ ಶಾಲೆ ಬಳಿಯ ಬೈರಾಗಿ ಪಟ್ಟೇಡ ಬಳಿ ಜ.8ರಂದು ನೂರಾರು ಜನರು ವೈಕುಂಠ ದ್ವಾರ ದರ್ಶನಕ್ಕಾಗಿ ಟಿಕೆಟ್‌ ಪಡೆಯಲು ನಿಂತಿದ್ದಾಗ ನೂಕು ನುಗ್ಗಲು ಉಂಟಾಗಿತ್ತು. ಈ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 6 ಮಂದಿ ಮೃತಪಟ್ಟು, 30ಕ್ಕೂ ಹೆಚ್ಚು ಜನ ಗಾಯಗೊಂಡಿದ್ದರು. ಈ ಪ್ರಕರಣ ಸಂಬಂಧ ಆರು ತಿಂಗಳೊಳಗೆ ವರದಿ ಸಲ್ಲಿಸುವಂತೆ ಆಯೋಗಕ್ಕೆ ತಿಳಿಸಲಾಗಿದೆ.

ಟೋಕನ್ ವಿತರಣೆಗೆ ಸರಿಯಾದ ವ್ಯವಸ್ಥೆ ಮಾಡಲಾಗಿದೆಯೇ?, ಆ ವ್ಯವಸ್ಥೆಗಳಲ್ಲಿ ಯಾವುದೇ ನ್ಯೂನತೆಗಳಿವೆಯೇ ಎಂದು ಗುರುತಿಸಿ. ನ್ಯೂನತೆಗಳು ಕಂಡುಬಂದರೆ, ಸಂಬಂಧಿತ ವ್ಯಕ್ತಿಗಳನ್ನು ಹೊಣೆಯಾಗಿಸಿ. ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ತಡೆಯಲು ಕ್ರಮಗಳನ್ನು ಸೂಚಿಸಿ. ವೆಂಕಟೇಶ್ವರನ ದರ್ಶನಕ್ಕಾಗಿ ತಿರುಪತಿಗೆ ಭೇಟಿ ನೀಡುವ ಭಕ್ತರ ಸುರಕ್ಷತೆ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಸಾಂಸ್ಥಿಕ ಕಾರ್ಯವಿಧಾನಗಳ ಕುರಿತು ಸೂಕ್ತ ಶಿಫಾರಸು ಮಾಡುವಂತೆಯೂ ತನಿಖಾ ತಂಡಕ್ಕೆ ಸೂಚಿಸಲಾಗಿದೆ.

ಘಟನೆ ನಡೆದ ಮರುದಿನ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಗಾಯಾಳುಗಳನ್ನು ಭೇಟಿಯಾಗಿದ್ದರು. ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಅವರು, ಕಾಲ್ತುಳಿತ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಆದೇಶಿಸಲಾಗುವುದು ಎಂದೂ ತಿಳಿಸಿದ್ದರು.

ಪ್ರಕರಣ ಸಂಬಂಧ ಡಿಎಸ್‌ಪಿ ಸೇರಿದಂತೆ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿತ್ತು. ಅಲ್ಲದೇ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ (ಎಸ್‌.ಪಿ) ಸೇರಿದಂತೆ ಮೂವರು ಹಿರಿಯ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ತೀವ್ರ ಬೇಸರ ವ್ಯಕ್ತಪಡಿಸಿದ್ದ ಸಿಎಂ ನಾಯ್ಡು, ಮೃತಪಟ್ಟ ಆರು ಜನರ ಕುಟುಂಬಕ್ಕೆ ತಲಾ ₹25 ಲಕ್ಷ ಮತ್ತು ಗಾಯಗೊಂಡವರಿಗೆ ತಲಾ ₹ 2 ಲಕ್ಷ ಪರಿಹಾರವನ್ನು ಘೋಷಿಸಿದ್ದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Siddaramaiah: ಕಾಳಿದಾಸನ ನಾಲಿಗೆ ಮೇಲೆ ಬ್ರಹ್ಮ ಅಕ್ಷರ ಬರೆದ ಅನ್ನೋದನ್ನೆಲ್ಲಾ ನಂಬಬೇಡಿ: ಸಿಎಂ ಸಿದ್ದರಾಮಯ್ಯ

ಕೆನಡಾದಲ್ಲಿ ಬಸ್‌ಗಾಗಿ ಕಾಯುತ್ತಿದ್ದ ಭಾರತದ ವಿದ್ಯಾರ್ಥಿನಿಗೆ ಗುಂಡು ತಗುಲಿ ಸಾವು

ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿ: ಮಿಥುನ್ ಚಕ್ರವರ್ತಿ

India's Project Cheetah: Botswanaನಿಂದ ಮುಂದಿನ ತಿಂಗಳೇ ಬರಲಿದೆ ನಾಲ್ಕು ಚೀತಾ

ಮುತ್ತಪ್ಪ ರೈ ಮಗ ರಿಕ್ಕಿ ಮೇಲೆ ಗುಂಡಿನ ದಾಳಿ: ಇಂಚಿಂಚೂ ಮಾಹಿತಿ ಬಿಚ್ಚಿಟ್ಟ ಪ್ರಕಾಶ್ ರೈ

ಮುಂದಿನ ಸುದ್ದಿ
Show comments