Webdunia - Bharat's app for daily news and videos

Install App

ಸಾಕುನಾಯಿ ದೂರ ಮಾಡಿದ್ದಕ್ಕೆ ಆತ್ಮಹತ್ಯೆ ಯತ್ನ

Webdunia
ಶುಕ್ರವಾರ, 8 ಜುಲೈ 2016 (14:22 IST)
ಕೇವಲ ಮೋಜಿಗಾಗಿ ತಮಿಳುನಾಡಿನಲ್ಲಿ ವೈದ್ಯಕೀಯ ವಿದ್ಯಾರ್ಥಿಗಳು ಮಹಡಿ ಮೇಲಿಂದ ನಾಯಿಯನ್ನು ಕೆಳಕ್ಕೆ ಎಸೆದ

ಅಮಾನವೀಯ ಘಟನೆಯ ಬಗ್ಗೆ ಕೇಳಿರುತ್ತೀರಿ. ಅದಕ್ಕೆ ತದ್ವಿರುದ್ಧವಾದ ಘಟನೆ ಅದೇ ರಾಜ್ಯದಲ್ಲಿ ವರದಿಯಾಗಿದೆ. ಸಾಕು ನಾಯಿ ಮತ್ತು ಅದರ ನವಜಾತ ಮರಿಗಳನ್ನು ತನ್ನಿಂದ ದೂರ ಮಾಡಿದರೆಂದು ಮಹಿಳೆಯೋರ್ವಳು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಪರಮಥಿವೆಲ್ಲೂರಿನಲ್ಲಿ ನಡೆದಿದೆ. 
 
ಆತ್ಮಹತ್ಯೆಗೆ ಯತ್ನಿಸಿರುವ ಶಾಂತಿ ಎರಡು ಮಕ್ಕಳ ತಾಯಿಯಾಗಿದ್ದು, 85 ಪ್ರತಿಶತ ಸುಟ್ಟ ಗಾಯಗಳಿಂದ ಬಳಲುತ್ತಿರುವ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆಕೆಯ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 
 
ಶಾಂತಿ ಒಂದು ಹೆಣ್ಣು ನಾಯಿಯನ್ನು ಸಾಕಿಕೊಂಡಿದ್ದರು. ಅದನ್ನು ಅಪಾರವಾಗಿ ಪ್ರೀತಿಸುತ್ತಿದ್ದ ಅವರಿಗೆ ಇತ್ತೀಚಿಗೆ ಅದು ಮರಿ ಹಾಕಿದಾಗ ಮತ್ತಷ್ಟು ಖುಷಿ ಹೆಚ್ಚಿತ್ತು. ನಾಯಿ ಮತ್ತು ಅದರ ಮರಿಗಳು ರಗಳೆ ಎಂದು ಭಾವಿಸಿದ ಆಕೆಯ ಪತಿ ಅವನ್ನು ನಿರ್ಜನ ಪ್ರದೇಶದಲ್ಲಿ ಬಿಟ್ಟು ಬಂದಿದ್ದ. ಶಾಂತಿ ನಾಯಿಯನ್ನು ಎಷ್ಟು ಪ್ರೀತಿಸುತ್ತಿದ್ದಳೆಂದರೆ ಅಗಲಿಕೆ ಆಕೆಯಿಂದ ಸಹಿಸಲಾಗಲಿಲ್ಲ. ಇದೇ ನೋವಿನಲ್ಲಿ ಆಕೆ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾಳೆ.
 
ಇಲ್ಲಿಯವರೆಗೆ ಪ್ರಕರಣವನ್ನು ದಾಖಲಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಹಕ್ಕಿ, ತಪ್ಪಿದ ಅವಘಡ‌

ಜಗನ್ನಾಥನ ದರ್ಶನಕ್ಕಾಗಿ ಡೊನಾಲ್ಡ್‌ ಟ್ರಂಪ್ ಆಹ್ವಾನವನ್ನೇ ತಿರಸ್ಕರಿಸಿದೆ: ನರೇಂದ್ರ ಮೋದಿ

ಹೀಗಾದ್ರೆ ಯುವಕರ ಕತೆ ಏನು, ಮಗನಿಗೆ ನಿಶ್ಚಿಯವಾಗಿದ್ದ ಯುವತಿಯನ್ನೇ ಕೈಹಿಡಿದ ತಂದೆ

ಕ್ರೈಸ್ತ ಧರ್ಮಕ್ಕೆ ಮತಾಂತರವಾದರೆ ಆರೋಗ್ಯದಲ್ಲಿ ಚೇತರಿಕೆ: ಮಹಿಳೆಗೆ ಒತ್ತಡ, ದೂರು

ಏರ್‌ ಇಂಡಿಯಾ ದುರಂತದ ಬಳಿಕ ವಿಮಾನದಲ್ಲಿ ಈ ಸೀಟಿಗಾಗಿ ಹೆಚ್ಚಿದ ಬೇಡಿಕೆ

ಮುಂದಿನ ಸುದ್ದಿ
Show comments