Webdunia - Bharat's app for daily news and videos

Install App

ಸಾಕುನಾಯಿ ದೂರ ಮಾಡಿದ್ದಕ್ಕೆ ಆತ್ಮಹತ್ಯೆ ಯತ್ನ

Webdunia
ಶುಕ್ರವಾರ, 8 ಜುಲೈ 2016 (14:22 IST)
ಕೇವಲ ಮೋಜಿಗಾಗಿ ತಮಿಳುನಾಡಿನಲ್ಲಿ ವೈದ್ಯಕೀಯ ವಿದ್ಯಾರ್ಥಿಗಳು ಮಹಡಿ ಮೇಲಿಂದ ನಾಯಿಯನ್ನು ಕೆಳಕ್ಕೆ ಎಸೆದ

ಅಮಾನವೀಯ ಘಟನೆಯ ಬಗ್ಗೆ ಕೇಳಿರುತ್ತೀರಿ. ಅದಕ್ಕೆ ತದ್ವಿರುದ್ಧವಾದ ಘಟನೆ ಅದೇ ರಾಜ್ಯದಲ್ಲಿ ವರದಿಯಾಗಿದೆ. ಸಾಕು ನಾಯಿ ಮತ್ತು ಅದರ ನವಜಾತ ಮರಿಗಳನ್ನು ತನ್ನಿಂದ ದೂರ ಮಾಡಿದರೆಂದು ಮಹಿಳೆಯೋರ್ವಳು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಪರಮಥಿವೆಲ್ಲೂರಿನಲ್ಲಿ ನಡೆದಿದೆ. 
 
ಆತ್ಮಹತ್ಯೆಗೆ ಯತ್ನಿಸಿರುವ ಶಾಂತಿ ಎರಡು ಮಕ್ಕಳ ತಾಯಿಯಾಗಿದ್ದು, 85 ಪ್ರತಿಶತ ಸುಟ್ಟ ಗಾಯಗಳಿಂದ ಬಳಲುತ್ತಿರುವ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆಕೆಯ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 
 
ಶಾಂತಿ ಒಂದು ಹೆಣ್ಣು ನಾಯಿಯನ್ನು ಸಾಕಿಕೊಂಡಿದ್ದರು. ಅದನ್ನು ಅಪಾರವಾಗಿ ಪ್ರೀತಿಸುತ್ತಿದ್ದ ಅವರಿಗೆ ಇತ್ತೀಚಿಗೆ ಅದು ಮರಿ ಹಾಕಿದಾಗ ಮತ್ತಷ್ಟು ಖುಷಿ ಹೆಚ್ಚಿತ್ತು. ನಾಯಿ ಮತ್ತು ಅದರ ಮರಿಗಳು ರಗಳೆ ಎಂದು ಭಾವಿಸಿದ ಆಕೆಯ ಪತಿ ಅವನ್ನು ನಿರ್ಜನ ಪ್ರದೇಶದಲ್ಲಿ ಬಿಟ್ಟು ಬಂದಿದ್ದ. ಶಾಂತಿ ನಾಯಿಯನ್ನು ಎಷ್ಟು ಪ್ರೀತಿಸುತ್ತಿದ್ದಳೆಂದರೆ ಅಗಲಿಕೆ ಆಕೆಯಿಂದ ಸಹಿಸಲಾಗಲಿಲ್ಲ. ಇದೇ ನೋವಿನಲ್ಲಿ ಆಕೆ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾಳೆ.
 
ಇಲ್ಲಿಯವರೆಗೆ ಪ್ರಕರಣವನ್ನು ದಾಖಲಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments