Webdunia - Bharat's app for daily news and videos

Install App

ಪ್ರಧಾನಿ ಮೋದಿ ಇಮೇಜ್‌ ಉಳಿಸಲು ಪಂಚ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಗೆಲುವು ಅನಿವಾರ್ಯ

Webdunia
ಗುರುವಾರ, 5 ಜನವರಿ 2017 (14:01 IST)
ದೇಶಾದ್ಯಂತ ಆಘಾತ ಮೂಡಿಸಿದ ನೋಟು ನಿಷೇಧದ ನಂತರ ನಡೆಯಲಿರುವ ಪಂಚರಾಜ್ಯಗಳ ಚುನಾವಣೆ ಫಲಿತಾಂಶ,ಪ್ರಧಾನಿ ಮೋದಿಯ ನೋಟು ನಿಷೇಧಕ್ಕೆ ಜನಾಭಿಪ್ರಾಯವಾಗಲಿದೆ ಎಂದು ಮೂಲಗಳು ತಿಳಿಸಿವೆ.
 
ಕೇಂದ್ರ ಚುನಾವಣೆ ಆಯೋಗ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗಳಿಗೆ ದಿನಾಂಕ ಪ್ರಕಟಿಸಿದ್ದು, ಮೋದಿ ಸರಕಾರ ಅಧಿಕಾರವಧಿಯ ಅರ್ಧದಷ್ಟು ಅಧಿಕಾರ ಪೂರೈಸಿದ ಸಂದರ್ಭದಲ್ಲಿ ಚುನಾವಣೆ ಎದುರಾಗಿರುವುದು ಬಿಜೆಪಿಗೆ ಮಹತ್ವದ್ದಾಗಿದೆ.
 
ನೋಟು ನಿಷೇಧದಿಂದ ದೇಶದ ಸಾಮಾನ್ಯ ಜನತೆ ಎದುರಿಸುತ್ತಿರುವ ಸಂಕಷ್ಟಗಳ ಬಗ್ಗೆ ವಿಪಕ್ಷಗಳು ಒಂದಾಗಿ ಕೇಂದ್ರ ಸರಕಾರವನ್ನು ಹಣಿಯುವ ಸುವರ್ಣವಕಾಶ ಒದಗಿ ಬಂದಿದೆ.
 
ಉತ್ತರಪ್ರದೇಶದಂತಹ ದೊಡ್ಡ ರಾಜ್ಯದಲ್ಲಿ ಬಿಜೆಪಿ ಚುನಾವಣೆಯ ಜಯ ಮೋದಿ ಸರಕಾರಕ್ಕೆ ವರದಾನವಾಗಲಿದ್ದು ಮುಂಬರುವ 2019 ರ ಚುನಾವಣೆಗೆ ಸಿದ್ದತೆಗೊಳ್ಳಲು ನೈತಿಕ ಬಲ ದೊರೆತಂತಾಗುತ್ತದೆ.
 
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನೋಟು ನಿಷೇಧ ಮಾನವ ನಿರ್ಮಿತ ದುರಂತ ಎಂದು ವಾಗ್ದಾಳಿ ನಡೆಸಿದ್ದರೆ, ಕಾಂಗ್ರೆಸ್ ಪಕ್ಷಧ ಉಪಾಧ್ಯಕ್ಷ ರಾಹುಲ್ ಗಾಂಧಿ ನೋಟು ನಿಷೇಧ ಕಪ್ಪು ಹಣದ ಮತ್ತು ಭ್ರಷ್ಟಾಚಾರದ ವಿರುದ್ಧವಲ್ಲ ಬಡವರ ಲೂಟಿಗಾಗಿ ಜಾರಿಗೊಳಿಸಲಾಗಿದೆ ಎನ್ನುವ ಟೀಕೆಯ ಮಧ್ಯೆಯೂ ಬಿಜೆಪಿ ಜಯಗಳಿಸಲಿದೆ ಎನ್ನುವುದು ಬಿಜೆಪಿ ನಾಯಕರ ಅಭಿಪ್ರಾಯವಾಗಿದೆ.
 
2014ರಲ್ಲಿ ನಡೆದ ಲೋಕಸಭೆ ಚುನಾವಣೆಯ ಭರ್ಜರಿ ಗೆಲುವಿನ ನಂತರ 2015ರಲ್ಲಿ ಮೋದಿ ನೇತೃತ್ವದ ಬಿಜೆಪಿ, ಬಿಹಾರ್ ಚುನಾವಣೆಯಲ್ಲಿ ಸೋಲನುಭವಿಸಿತ್ತು. ಅದೇ ವರ್ಷ ನಡೆದ ದೆಹಲಿ ವಿಧಾನಸಭೆ ಚುನಾವಣೆಯಲ್ಲೂ ಹೀನಾಯ ಸೋಲನುಭವಿಸಿ ಮುಖಭಂಗವಾಗಿತ್ತು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತದ ಬಳಿಕ 80 ವಿಮಾನ ಹಾರಾಟಗಳ ರದ್ದು

ಕರುಣೆಯಿಲ್ಲದೆ ಯುದ್ಧ ಮುಂದುವರೆಯುತ್ತದೆ: ಟ್ರಂಪ್‌ ವಾರ್ನಿಂಗ್‌ಗೆ ಇರಾನ್‌ ಡೊಂಟ್ ಕ್ಯಾರೇ

ಲ್ಯಾಂಡ್ ಆದ ಬಳಿಕ ತಾಂತ್ರಿಕ ದೋಷದಿಂದ 40ನಿಮಿಷ ವಿಮಾನದೊಳಗೆ ಸಿಲುಕಿಕೊಂಡ ಇಂಡಿಗೋ ಪ್ರಯಾಣಿಕರು

Ahmedabad Plane Crash: 190 ಶವಗಳ ಗುರುತು ಪತ್ತೆ, 159 ಮಂದಿ ಮೃತದೇಹ ಕುಟುಂಬಕ್ಕೆ ಹಸ್ತಾಂತರ

ಮುಖ್ಯಮಂತ್ರಿ ಕುರ್ಚಿ ಆಸೆಯನ್ನು ಮತ್ತೆ ಪರೋಕ್ಷವಾಗಿ ಬಿಚ್ಚಿಟ್ಟ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

ಮುಂದಿನ ಸುದ್ದಿ
Show comments