Webdunia - Bharat's app for daily news and videos

Install App

ಸತ್ತ ಹೆಂಡತಿಯನ್ನು ಮತ್ತೆ ಬದುಕಿಸಲು ನಾಯಿಮರಿಗಳು, ಹಾವುಗಳನ್ನು ಕೊಂದು ತಿಂದ ಪತಿ

ಅತಿಥಾ
ಮಂಗಳವಾರ, 6 ಫೆಬ್ರವರಿ 2018 (14:26 IST)
ತಮ್ಮ ಪ್ರೀತಿಪಾತ್ರರ ಅಗಲಿಕೆಯಿಂದ ಬೇಸತ್ತ ಜನರು ಹುಚ್ಚಾಟ ಮಾಡುವುದನ್ನು ನೀವು ಕೇಳಿರಬಹುದು. ಜನರು ತಮ್ಮ ಪ್ರೀತಿಪಾತ್ರರಿಗಾಗಿ ಜೀವವನ್ನು ಕೊಡುವುದು ಅಥವಾ ಜೀವ ತೆಗೆಯುವ ಬಗ್ಗೆ ಹಲವಾರು ಘಟನೆಗಳನ್ನು ಸಹ ಕೇಳಿರಬಹುದು ಆದರೆ ನಾಯಿ ಮತ್ತು ಹಾವುಗಳನ್ನು ತಿನ್ನುವ ವ್ಯಕ್ತಿಯ ಬಗ್ಗೆ ಕೇಳಿರಲಿಕ್ಕಿಲ್ಲ. ಒಬ್ಬ ಮುದುಕ ನಾಯಿಮರಿಗಳು ಮತ್ತು ಹಾವುಗಳನ್ನು ತಿನ್ನುತ್ತಿದ್ದನ್ನು ಕಂಡು ಅವರನ್ನು ಪೋಲಿಸ್‌ಗೆ ಹಸ್ತಾಂತರಿಸಲಾಯಿತು.
ಈ ಘಟನೆಯು ಜಗದೀಶ್ಪುರ ಪೊಲೀಸ್ ಠಾಣೆ ಪ್ರದೇಶದ ವಿಕಾಸ್ ಕಾಲೊನಿಯಲ್ಲಿ ನಡೆದಿದೆ. ನೌರಂಗಿ ಲಾಲ್ ಎಂಬ ಹೆಸರಿನ 'ಬಾಬಾ' ಕೆಲ ಸಮಯದಿಂದ ಇಲ್ಲಿನ ಬೀದಿಗಳಲ್ಲಿ ವಾಸಿಸುತ್ತಿದ್ದ.
 
ನಾಯಿಮರಿಗಳು ಮತ್ತು ಹಾವುಗಳನ್ನು ಬಲಿ ನೀಡುವುದರಿಂದ ಅವರಿಗೆ ಶಕ್ತಿ ದೊರೆಯುತ್ತದೆ, ಈ ವಿಶೇಷ ಶಕ್ತಿಯಿಂದ ಅವರು ತನ್ನ ಸತ್ತ ಹೆಂಡತಿಯನ್ನು ಮತ್ತೆ ಬದುಕಿಸಲಿದ್ದಾರಂತೆ ಅದಕ್ಕಾಗಿಯೇ ಅವರು ಬಲಿ ನೀಡಿದ ಮಾಂಸವನ್ನು ತಿನ್ನುತ್ತಾರೆ. 'ನಾನು ಹಾವುಗಳನ್ನು ತಿನ್ನುತ್ತೇನೆ' ಎಂದು ಸಹ ಅವರು ಹೇಳುತ್ತಾರೆ. ಈವರೆಗೆ ಅವರು ನಾಲ್ಕು ನಾಯಿಮರಿಗಳನ್ನು ತಿಂದಿದ್ದಾರಂತೆ. ಈ ರೀತಿಯ ವಿಷಯಗಳನ್ನು ಅವರು ಹೇಳುತ್ತಿದ್ದಂತೆಯೇ ಸ್ಥಳದಲ್ಲಿದ್ದ ಜನರು ಅವರನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸರು ಅವರನ್ನು ವೈದ್ಯಕೀಯವಾಗಿ ಪರೀಕ್ಷಿಸಿ; ನಂತರ ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
 
ಈ ಬಗ್ಗೆ ಮನೋವೈದ್ಯರೊಬ್ಬರು ಪತ್ರಿಕೆಯೊಂದಕ್ಕೆ ಪ್ರತಿಕ್ರಿಯೆ ನೀಡಿದ್ದು, ಕೆಲವೊಮ್ಮೆ ಒಂಟಿಯಾಗಿರುವವರು ತಮ್ಮ ಕಲ್ಪನಾ ಲೋಕದಲ್ಲಿ ಜೀವಿಸುತ್ತಿರುತ್ತಾರೆ. ನೈಜ ಜಗತ್ತಿಗೂ ತಮ್ಮ ಮನಸ್ಸಿನಲ್ಲಿ ನಿರ್ಮಿಸಿಕೊಂಡಿರುವ ಕಲ್ಪನಾ ಜಗತ್ತಿಗೂ ವ್ಯತ್ಯಾಸ ಗುರುತಿಸುವಲ್ಲಿ ವಿಫಲರಾಗುತ್ತಾರೆ. ಇಂತಹವರಿಗೆ ಚಿಕಿತ್ಸೆ ನೀಡಬಹುದು ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments