Webdunia - Bharat's app for daily news and videos

Install App

ಇಂದು ನಿತೀಶ್ ಹೊಸ ಸರ್ಕಾರ ಸ್ಥಾಪನೆ

Webdunia
ಬುಧವಾರ, 10 ಆಗಸ್ಟ್ 2022 (07:19 IST)
ಪಾಟ್ನಾ : ದೇಶದ ರಾಜಕೀಯದಲ್ಲಿ ಮಹತ್ವದ ಸ್ಥಾನ ಪಡೆದಿರುವ ಬಿಹಾರದಲ್ಲಿ ರಾಜಕೀಯ ಕ್ಷಿಪ್ರ ಬೆಳವಣಿಗೆಗಳು ನಡೆದಿವೆ.
 
ಮೂರು ವರ್ಷಗಳಿಂದ ಬಿಜೆಪಿ ಜೊತೆಗೆ ಮೈತ್ರಿ ಸರ್ಕಾರ ನಡೆಸುತ್ತಿದ್ದ ಸಿಎಂ ನಿತೀಶ್ ಕುಮಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಬಿಜೆಪಿ ಜೊತೆಗಿನ ಮೈತ್ರಿಯನ್ನು ಕಡಿದುಕೊಂಡಿದ್ದಾರೆ.

ಆರ್ಜೆಡಿ-ಜೆಡಿಯು-ಕಾಂಗ್ರೆಸ್ ಮೈತ್ರಿ ಮಾಡಿಕೊಳ್ಳಲಿದ್ದು, ಬಿಹಾರದಲ್ಲಿ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ.

ಸಿಎಂ ನಿತೀಶ್ ಜೊತೆಗೆ ಆರ್ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಳೆದ ಕೆಲ ದಿನಗಳಿಂದ ಬಿಜೆಪಿ ಜೊತೆ ಅಂತರ ಕಾಯ್ದುಕೊಂಡು, ಆರ್ಜೆಡಿ-ಕಾಂಗ್ರೆಸ್ ಸಂಪರ್ಕದಲ್ಲಿದ್ದ ನಿತೀಶ್ ಕುಮಾರ್ ಇಂದು ಬೆಳಗ್ಗೆ ಶಾಸಕರ ಸಭೆ ನಡೆಸಿ ಬಿಜೆಪಿ ಮೈತ್ರಿಗೆ ಟಾಟಾ ಹೇಳುತ್ತಿರುವ ಬಗ್ಗೆ, ಆರ್ಜೆಡಿ-ಕಾಂಗ್ರೆಸ್ ಜೊತೆಗೂಡಿ ಸರ್ಕಾರ ರಚನೆ ಮಾಡುತ್ತಿರುವ ಬಗ್ಗೆ ಮಾಹಿತಿ ಹಂಚಿಕೊಂಡರು.

ನಿತೀಶ್ ಕುಮಾರ್ ನಿರ್ಧಾರಕ್ಕೆ ಇಡೀ ಸಭೆ ಸರ್ವಾನುಮತದಿಂದ ಬೆಂಬಲ ಸೂಚಿಸಿತು. ಸಂಜೆ ರಾಜ್ಯಪಾಲ ಫಾಗು ಚೌಹಾಣ್ ಭೇಟಿಯಾಗಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ರು. ಸ್ವಲ್ಪ ಹೊತ್ತಿನ ನಂತ್ರ ಆರ್ಜೆಡಿ-ಕಾಂಗ್ರೆಸ್ ಸೇರಿ ಇತರೆ ಪಕ್ಷಗಳೊಂದಿಗೆ ಜೊತೆಗೂಡಿ ಮಹಾಘಟಬಂಧನ್ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ರು. 164 ಶಾಸಕರ ಬೆಂಬಲ ಪತ್ರ ಕೊಟ್ಟ ನಿತೀಶ್ ಕುಮಾರ್, ಎನ್ಡಿಎ ಮೈತ್ರಿಕೂಟದಿಂದ ಹೊರಬಂದಿದ್ದನ್ನು ಸಮರ್ಥಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಿಳೆಯರು ಯಾಕೆ ಚಿಕ್ಕ ವಯಸ್ಸಿನ ಹುಡುಗನ ಕಡೆಗೆ ಆಕರ್ಷಿತರಾಗುತ್ತಾರೆ

Raja Raguvamshi murder: ಗಂಡನನ್ನು ಕೊಲೆ ಬಗ್ಗೆ ಶಾಕಿಂಗ್ ವಿಚಾರ ಬಾಯ್ಬಿಟ್ಟ ಸೋನಮ್: ತಂದೆ ಫುಲ್ ಸಪೋರ್ಟ್

Siddaramaiah: ಚಿನ್ನಸ್ವಾಮಿ ದುರಂತದ ಬಗ್ಗೆ ಜೊತೆಯಲ್ಲಿದ್ದವರೂ ಹೇಳಲೇ ಇಲ್ವಲ್ಲಪ್ಪಾ.. ಸಿದ್ದರಾಮಯ್ಯ ಅಳಲು

Kerala cargo Ship fire: ಬೇಪೂರ್ ಹಡಗು ಅಗ್ನಿ ದುರಂತ 18 ಮಂದಿ ರಕ್ಷಣೆ video

Karnataka Weather: ಇಂದು ಈ ಜಿಲ್ಲೆಗಳಿಗೆ ಭಾರೀ ಮಳೆ, ಹವಾಮಾನ ಇಲಾಖೆಯ ಎಚ್ಚರಿಕೆ ಗಮನಿಸಿ

ಮುಂದಿನ ಸುದ್ದಿ
Show comments