Webdunia - Bharat's app for daily news and videos

Install App

ಜಯದತ್ತ ಮುನ್ನುಗ್ಗುತ್ತಿರುವ ಜಯಾ!

Webdunia
ಮಂಗಳವಾರ, 30 ಜೂನ್ 2015 (08:41 IST)
ತಮಿಳುನಾಡಿನ ಮುಖ್ಯಮಂತ್ರಿ ಜಯಲಲಿತಾ ಸ್ಪರ್ಧಿಸಿರುವ ಆರ್.ಕೆ. ನಗರ್ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ ಇಂದು ಪ್ರಕಟಗೊಳ್ಳಲಿದೆ. ಶನಿವಾರ ಉಪಚುನಾವಣೆ ನಡೆದಿತ್ತು.

ಈಗಾಗಲೇ ಮತ ಎಣಿಕೆ ಪ್ರಾರಂಭವಾಗಿದ್ದು ಜಯಾ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ. 2 ನೇ ಸುತ್ತಿನ ಮತ ಎಣಿಕೆಯಲ್ಲಿ ಅವರು 18,000 ಮತಗಳ ಮುನ್ನಡೆಯಲ್ಲಿದ್ದಾರೆ. ಮರೀನಾ ಬೀಚ್ ಸಮೀಪದ ರಾಣಿಮೇರಿ ಕಾಲೇಜಿನಲ್ಲಿ ಮತಎಣಿಕೆ ನಡೆಯುತ್ತಿದೆ. 
 
ಬಂದಿರುವ 16 ಅಂಚೆ ಮತಗಳು ಸಹ ಜಯಾ ಪರ ಇವೆ.

ಈಗಾಗಲೇ ಎರಡು ಸುತ್ತಿನ ಮತಎಣಿಕೆ ಸಂಪೂರ್ಣಗೊಂಡಿದ್ದು, ಜಯಾ 18,000 ಮತಗಳ ಮುನ್ನಡೆ ಸಾಧಿಸಿದ್ದಾರೆ. ರಾಮಸ್ವಾಮಿ ಕೇವಲ 400 ಮತಗಳನ್ನು ಪಡೆದಿದ್ದಾರೆ. ಒಟ್ಟು 17 ಸುತ್ತಿನ ಮತಎಣಿಕೆ ನಡೆಯಲಿದೆ.
 
ಮತ ಎಣಿಕೆ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್‌ನ್ನು ಕೈಗೊಳ್ಳಲಾಗಿದ್ದು 1,000 ಪೊಲೀಸರನ್ನು ರಾಣಿಮೇರಿ ಕಾಲೇಜಿನ ಸುತ್ತಮುತ್ತ ನಿಯೋಜನೆಗೊಳಿಸಲಾಗಿದೆ. 
 
ಕ್ಷೇತ್ರದಲ್ಲಿ ಒಟ್ಟು 230 ಮತಗಟ್ಟೆಗಳನ್ನು ಸ್ಥಾಪಿಸಲಾಗಿತ್ತು.
 
28 ಅಭ್ಯರ್ಥಿಗಳು ಕಣಕ್ಕಿಳಿದಿದ್ದು  ಬಿಜೆಪಿ, ಕಾಂಗ್ರೆಸ್, ಎಂಡಿಎಂಕೆ. ಡಿಎಂಡಿಕೆ ಸೇರಿದಂತೆ ಪ್ರಮುಖ ಪಕ್ಷಗಳು ಮತದಾನವನ್ನು ಬಹಿಷ್ಕರಿಸಿವೆ. ಸಿಪಿಐ ಅಭ್ಯರ್ಥಿಯಾಗಿ ಸಿ. ಮಹೇಂದ್ರನ್ ಕಣಕ್ಕಿಳಿದಿದ್ದರೆ, ಸಾಮಾಜಿಕ ಹೋರಾಟಗಾರ ಟ್ರಾಫಿಕ್ ರಾಮಸ್ವಾಮಿ ಸಹ ಜಯಾಗೆ ಸವಾಲೆಸೆದಿದ್ದಾರೆ.
 
ಕರ್ನಾಟಕ ಹೈಕೋರ್ಟ್‌ನಿಂದ ನಿರಪರಾಧಿಯಾಗಿ ಸಾಬೀತಾದ ಬಳಿಕ ತಮಿಳುನಾಡು ಮುಖ್ಯಮಂತ್ರಿಯಾಗಿ ಪಟ್ಟವೇರಿದ್ದ ಜಯಾ ಶಾಸಕಿ ಸ್ಥಾನ ಪಡೆಯಲು ಈ ಚುನಾವಣೆಗೆ ಸ್ಪರ್ಧಿಸಿದ್ದರು.  

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments