Webdunia - Bharat's app for daily news and videos

Install App

ಇಂದು ಸುಪ್ರೀಂಕೋರ್ಟ್ ಸ್ವಯಂಪ್ರೇರಿತ ವಿಚಾರಣೆ

Webdunia
ಗುರುವಾರ, 7 ಅಕ್ಟೋಬರ್ 2021 (12:17 IST)
ಹೊಸದಿಲ್ಲಿ : ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಪ್ರತಿಭಟನಾಕಾರ ರೈತರ ಮೇಲೆ ಎಸ್ಯುವಿ ಹರಿದ ಸಂಬಂಧ ಭುಗಿಲೆದ್ದ ಹಿಂಸಾಚಾರದಲ್ಲಿ 8 ಮಂದಿ ಮೃತಪಟ್ಟ ಘಟನೆಯನ್ನು ಸುಪ್ರೀಂಕೋರ್ಟ್ ಸ್ವಯಂಪ್ರೇರಿತವಾಗಿ ವಿಚಾರಣೆಗೆ ಕೈಗೆತ್ತಿಕೊಂಡಿದ್ದು, ಗುರುವಾರ ವಿಚಾರಣೆ ನಡೆಯಲಿದೆ.

ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಮತ್ತು ನ್ಯಾಯಮೂರ್ತಿಗಳಾದ ಸೂರ್ಯಕಾಂತ ಹಾಗೂ ಹಿಮಾ ಕೊಹ್ಲಿ ಅವರನ್ನು ಒಳಗೊಂಡ ನ್ಯಾಯಪೀಠ ಸ್ವಯಂಪ್ರೇರಿತವಾಗಿ ಗಣನೆಗೆ ತೆಗೆದುಕೊಂಡ ಈ ಪ್ರಕರಣದ ವಿಚಾರಣೆ ನಡೆಸಯಲಿದೆ. ಜೀವಹಾನಿಗೆ ಕಾರಣವಾದ ಘಟನೆಯಲ್ಲಿ ಸಂಬಂಧಪಟ್ಟವರನ್ನು ಇದುವರೆಗೆ ಬಂಧಿಸದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಸರ್ಕಾರದಿಂದ ಉತ್ತರ ಕೇಳಿ ನೋಟಿಸ್ ನೀಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಅಕ್ಟೋಬರ್ 3ರಂದು ನಡೆದ ಘಟನೆಯಲ್ಲಿ ಗೃಹಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಥೇಣಿಯವರಿಗೆ ಸೇರಿದ್ದು ಎನ್ನಲಾದ ಮತ್ತು ಅವರ ಪುತ್ರ ಆಶೀಶ್ ಚಲಾಯಿಸುತ್ತಿದ್ದ ಎನ್ನಲಾದ ವಾಹನ ಪ್ರತಿಭಟನಾಕಾರ ರೈತರ ಮೇಲೆ ಹರಿದು ನಾಲ್ವರು ರೈತರು ಮೃತಪಟ್ಟಿದ್ದರು. ಆಗ ಉದ್ರಿಕ್ತಗೊಂಡ ರೈತರ ಗುಂಪು ವಾಹನದಲ್ಲಿ ಇದ್ದ ಮೂವರನ್ನು ಕೊಂದು ಹಾಕಿತ್ತು. ಈ ಘಟನೆಯನ್ನು ವರದಿ ಮಾಡಲು ಆಗಮಿಸಿದ್ದ ಒಬ್ಬ ಪತ್ರಕರ್ತ ಕೂಡಾ ಘಟನೆಯಲ್ಲಿ ಮೃತಪಟ್ಟಿದ್ದರು. ವಾಹನದಲ್ಲಿ ತಮ್ಮ ಮಗ ಇದ್ದ ಎನ್ನುವುದನ್ನು ನಿರಾಕರಿಸಿದ ಸಚಿವರು, ವಾಹನದ ಮೇಲೆ ಪ್ರತಿಭಟನಾಕಾರರು ದಾಳಿ ನಡೆಸಿದಾಗ ಚಾಲಕ ನಿಯಂತ್ರಣ ಕಳೆದುಕೊಂಡ ಎಂದು ಹೇಳಿದ್ದರು.
ಇಬ್ಬರು ಸುಪ್ರೀಂಕೋರ್ಟ್ ವಕೀಲರು ಸಿಜೆಐಯವರಿಗೆ ಪತ್ರ ಬರೆದು, ಉತ್ತರ ಪ್ರದೇಶ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ ಈ ಘಟನೆ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತೆಲಂಗಾಣದ ಎಲ್ಲ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಅತೃಪ್ತ ಶಾಸಕರ ಭೇಟಿ ಬಳಿಕ ಸುರ್ಜೇವಾಲಾ ಹೀಗಂದ್ರು

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಸುರ್ಜೇವಾಲನೂ ಬರ್ತಾರೆ, ಮುಂದೆ ರಾಹುಲ್ ಗಾಂಧಿನೂ ಬರಬೇಕಾಗುತ್ತದೆ

ಮುಂದಿನ ಸುದ್ದಿ
Show comments