Webdunia - Bharat's app for daily news and videos

Install App

ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ತೊಗಾಡಿಯಾ

Webdunia
ಸೋಮವಾರ, 25 ಜೂನ್ 2018 (14:59 IST)
ನವದೆಹಲಿ : ಹಿಂದು ಪರಿಷತ್‌ನ ಮಾಜಿ ಮುಖಂಡ ಪ್ರವೀಣ್ ತೊಗಾಡಿಯಾ ಅವರು ಅಂತಾರಾಷ್ಟ್ರೀಯ ಹಿಂದು ಪರಿಷತ್ ಎಂಬ ನೂತನ ಹಿಂದು ಸಂಘಟನೆ ಚಾಲನೆ ನೀಡಿ ವಿಶ್ವ ಹಿಂದೂ ಪರಿಷತ್, ಆರ್.ಎಸ್.ಎಸ್ ಮತ್ತು ಬಿಜೆಪಿ ಕಾರ್ಯಕರ್ತರನ್ನು ತಮ್ಮ ಸಂಘಟನೆಗೆ ಸೇರುವಂತೆ ಮನವಿ ಮಾಡಿದ್ದಾರೆ.

ನಂತರ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ತೊಗಾಡಿಯಾ ಅವರು,’ ರಾಮಮಂದಿರ ನಿರ್ಮಾಣ, ಕಾಶ್ಮೀರದಲ್ಲಿ 370 ಮತ್ತು 35ಎ ವಿಧಿಗಳನ್ನು ರದ್ದುಗೊಳಿಸುವ ಭರವಸೆ ಈಡೇರಿಸಿಲ್ಲ. ಕಾಶ್ಮೀರ ಪಂಡಿತರು ಇನ್ನೂ ಅಲ್ಲಿ ಪುನರ್ವಸತಿಗಾಗಿ ಕಾಯುತ್ತಿದ್ದಾರೆ’ ಎಂದು ಹೇಳಿದ್ದಾರೆ.

 

‘ಅಷ್ಟೇ ಅಲ್ಲದೆ ರೈತರು ಮತ್ತು ನಿರುದ್ಯೋಗಿ ಯುವ ಜನತೆಗೆ ನೀಡಿದ ಭರವಸೆಗಳನ್ನೂ ಮೋದಿ ಸರ್ಕಾರ ಉಳಿಸಿಕೊಂಡಿಲ್ಲ. 10 ಕೋಟಿ ಉದ್ಯೋಗ ಸೃಷ್ಟಿ ಭರವಸೆ ನೀಡಿದ್ದ ಮೋದಿ ವಿಫಲರಾಗಿದ್ದು, ರೈತರಿಗೆ 1.5 ಪಟ್ಟು ಕನಿಷ್ಠ ಬೆಂಬಲ ಬೆಲೆಯ ಭರವಸೆಯಂತೆ ಇಲ್ಲಿಯವರೆಗೂ ಒಬ್ಬ ರೈತನೂ ಇದರ ಲಾಭ ಪಡೆದಿಲ್ಲ. ಪ್ರತಿನಿತ್ಯ ರೈತರ ಆತ್ಮಹತ್ಯೆ ಮಾಡಿಕೊಳ್ಳುವುದನ್ನು ನಾವು ನೋಡುತ್ತಿದ್ದೇವೆ’ ಎಂದು ಮೋದಿ ವಿರುದ್ಧಅವರು  ವಾಗ್ದಾಳಿ ನಡೆಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ದಲಿತ ವಿರೋಧಿಯಲ್ಲ, ತಪ್ಪಾಗಿದ್ದರೆ ಕ್ಷಮಿಸಿ ಎಂದ ಜಿಟಿ ದೇವೇಗೌಡ

ಬಿಜೆಪಿ ಮತಕಳ್ಳತನದಿಂದ ಅಧಿಕಾರ ಉಳಿಸಿಕೊಂಡಿದೆ: ಪ್ರಿಯಾಂಕಾ ಗಾಂಧಿ ಕಿಡಿ

ಮಹಾತ್ಮ ಗಾಂಧೀಜಿ ಮೇಲೂ ಆರ್‌ಎಸ್‌ಎಸ್ ಅದೇ ತಂತ್ರವನ್ನು ಹೆಣೆದಿತ್ತು: ರಾಹುಲ್ ಗಾಂಧೀಜಿ

ಬೀದಿ ನಾಯಿ ಪ್ರಕರಣದಲ್ಲಿ ಸುಪ್ರೀಂ ತೀರ್ಪುನ ಬಳಿಕ ಕ್ರಮಕ್ಕೆ ಮುಂದಾದ ಸರ್ಕಾರ

ಕಲಾಸಿಪಾಳ್ಯ: ಕೇಸರಿ ಶಾಲು ಧರಿಸಿದ್ದಕ್ಕೆ ಹಿಗ್ಗಾಮುಗ್ಗಾ ಥಳಿತ, ತನಿಖೆಯಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments