Webdunia - Bharat's app for daily news and videos

Install App

OMG...ಟೊಮೆಟೋಗೂ ಕಳ್ಳರ ಭಯ: ಭದ್ರತಾ ಸಿಬ್ಬಂದಿಗಳ ನೇಮಕ...

Webdunia
ಭಾನುವಾರ, 23 ಜುಲೈ 2017 (11:32 IST)
ನವದೆಹಲಿ: ಟೊಮೆಟೋಗೆ ಚಿನ್ನದ ಬೆಲೆ ಬಂದಿದ್ದು, ಮಾರುಕಟ್ಟೆಗಳಲ್ಲಿ ಕೆಜಿ ಟೊಮೆಟೋ 100 ರೂ ಗಡಿ ದಾಟಿದೆ. ಟೊಮೆಟೊಗೆ ಉತ್ತಮ ದರ ಬಂದ ಹಿನ್ನಲೆಯಲ್ಲಿ ಕಳ್ಳರ ಕಣ್ಣು ಟೊಮೆಟೋ ಮೇಲೆ ಬಿದ್ದಿದ್ದು, ಲಕ್ಷಾಂತರ ರೂ ಮೌಲವ್ಯದ ಟೊಮೆಟೋ ದರೋಡೆ ಘಟನೆ ನಡೆಯುತ್ತಿದೆ.
 
ಮುಂಬೈನ ಮಾರುಕಟ್ಟೆಯೊಂದರಲ್ಲಿ 300 ಕೆಜಿ ತೂಕದ ರೂ. 30 ಸಾವಿರ ಮೌಲ್ಯದ ಟೊಮೆಟೋಗಳನ್ನು ದರೋಡೆ ಮಾಡಲಾಗಿದೆ. ಮುಂಬೈನ್ ಶಾಂತಿನಗರ ನಿವಾಸಿಯಾಗಿರುವ ಶಾಂತಿಲಾಲ್ ಶ್ರೀವಾಸ್ತವ್ ಎಂಬುವವರು ಮಾರಾಟಕ್ಕಾಗಿ ನವಿ ಮುಂಬೈ ಎಪಿಎಂಸಿಯಲ್ಲಿ ಟೊಮೆಟೋ ಖರೀದಿಸಿದ್ದರು. ಅಂಗಡಿ ಮುಂದೆ ಇಡಲಾಗಿದ್ದ ಟೊಮೆಟೋಗಳನ್ನು ಖದೀಮರು ರಾತ್ರೋರಾತ್ರಿ ಕಳ್ಳತನ ಮಾಡಿ ಪರಾರಿಯಾಗಿದ್ದಾರೆ. ಇದರಿಂದ ಎಚ್ಚೆತ್ತ ಮಾರಾಟಗಾರರು ಈಗ ಟೊಮೆಟೊ ಕಾಯಲು ಭದ್ರತಾ ಸಿಬ್ಬಂದಿಗಳನ್ನು ನೇಮಕ ಮಾಡಿದ್ದಾರೆ.
 
ಇನ್ನು ಮಧ್ಯಪ್ರದೇಶದಲ್ಲಿಯೋ ಟೊಮೆಟೊ ಕಳ್ಳತನದ ಆತಂಕ ಎದುರಾಗಿರುವುದರಿಂದ ಭದ್ರತಾಪಡೆಗಳನ್ನು ನಿಯೋಜಿಸಿದ್ದಾರೆ. ಇಂದೋರ್‌‌ನಲ್ಲಿ ಆತಂಕಕ್ಕೊಳಗಾಗಿರುವ ವ್ಯಾಪಾರಿಗಳು ಟೊಮೆಟೊಗೆ ಬಂದೂಕುಧಾರಿಯ ಭದ್ರತೆ ನೀಡಿದ್ದಾರೆ. ಮಾರ್ಕೆಟ್‌‌ಗೆ ಟೊಮೆಟೊ ಟ್ರಕ್‌ಗಳು ಬರುತ್ತಿದಂತೆ ಭದ್ರತಾ ಸಿಬ್ಬಂದಿ, ಟೊಮೆಟೊವನ್ನು ಗನ್‌‌ಗಳನ್ನು ಹಿಡಿದುಕೊಂಡು ಭದ್ರತೆ ನೀಡುತ್ತಿದ್ದಾರೆ. 
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ಈ ಜಿಲ್ಲೆಗಳಿಗೆ ಭಾರೀ ಮಳೆ, ಹವಾಮಾನ ಇಲಾಖೆಯ ಎಚ್ಚರಿಕೆ ಗಮನಿಸಿ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments