Select Your Language

Notifications

webdunia
webdunia
webdunia
webdunia

ಉತ್ತರಾಖಂಡ ಬಿಜೆಪಿ ಶಾಸಕಾಂಗ ನಾಯಕರಾಗಿ ತ್ರಿವೇಂದ್ರ ಸಿಂಗ್ ಆಯ್ಕೆ: ನಾಳೆ ಪ್ರಮಾಣ ವಚನ

ಉತ್ತರಾಖಂಡ ಬಿಜೆಪಿ ಶಾಸಕಾಂಗ ನಾಯಕರಾಗಿ ತ್ರಿವೇಂದ್ರ ಸಿಂಗ್ ಆಯ್ಕೆ: ನಾಳೆ ಪ್ರಮಾಣ ವಚನ
ಡೆಹರಾಡೂನ್ , ಶುಕ್ರವಾರ, 17 ಮಾರ್ಚ್ 2017 (16:59 IST)
ಉತ್ತರಾಖಂಡ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ತ್ರಿವೇಂದ್ರ ಸಿಂಗ್ ರಾವತ್ ಆಯ್ಕೆಯಾಗಿದ್ದು ನಾಳೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಕಟ್ಟಾ ಬೆಂಬಲಿಗರಾಗಿರುವ ತ್ರಿವೇಂದ್ರ ಸಿಂಗ್, ನಾಳೆ ಉತ್ತರಾಖಂಡ ಸಿಎಂ ಆಗಿ ಪದಗ್ರಹಣ ಮಾಡಲಿದ್ದಾರೆ.
 
ನೂತನ ಮುಖ್ಯಮಂತ್ರಿ ಪದಗ್ರಹಣ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸೇರಿದಂತೆ ಗಣ್ಯಾತಿಗಣ್ಯರು ಉಪಸ್ಥಿತರಿರಲಿದ್ದಾರೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ.
 
ಇತ್ತೀಚೆಗೆ ನಡೆದ ಉತ್ತರಾಖಂಡ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 57 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಅಧಿಕಾರದ ಗದ್ದುಗೆ ಏರಲು ಸಿದ್ದವಾಗಿದ್ದರೆ, ಕಾಂಗ್ರೆಸ್ ಪಕ್ಷ ಕೇವಲ 11 ಕ್ಷೇತ್ರಗಳಲ್ಲಿ ಜಯಗಳಿಸಿ ಹೀನಾಯ ಸೋಲನುಭವಿಸಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಕನ್ನಡ ವಿರೋಧಿ ಅಧಿಕಾರಿಗಳನ್ನು ಸಹಿಸೋಲ್ಲ: ಸಿಎಂ ಸಿದ್ದರಾಮಯ್ಯ ಗುಡುಗು