Webdunia - Bharat's app for daily news and videos

Install App

ಅಮರನಾಥ ಯಾತ್ರಿಗಳ ಮೇಲಿನ ದಾಳಿ ರೂವಾರಿ ಉಗ್ರನನ್ನ ಕೊಂದ ಭದ್ರತಾ ಪಡೆ

Webdunia
ಗುರುವಾರ, 14 ಸೆಪ್ಟಂಬರ್ 2017 (18:25 IST)
ಅಮರನಾಥ ಯಾತ್ರಿಗಳ ಮೇಲಿನ ದಾಳಿಯ ಮಾಸ್ಟರ್ ಮೈಂಡ್, ಕಾಶ್ಮೀರದಲ್ಲಿ ಸಕ್ರಿಯನಾಗಿದ್ದ ಲಷ್ಕರ್ ಇ ತಯಿಬಾ ಉಗ್ರ ಅಬು ಇಸ್ಮಾಯಿಲ್`ನನ್ನ ಭದ್ರತಾ ಪಡೆ ಯೋಧರು  ಗುರುವಾರ ಹೊಡೆದುರುಳಿಸಿದ್ದಾರೆ.

ಶ್ರೀನಗರದ ಹೊರವಲಯದ ನೌಗಮ್`ನ ಅರಿಬಾಗ್ ಪ್ರದೇಶದಲ್ಲಿ ನಡೆದ ಎನ್`ಕೌಂಟರ್`ನಲ್ಲಿ ಉಗ್ರ ಅಬು ಇಸ್ಮಾಯಿಲ್ ಹತ್ಯೆ ಮಾಡಲಾಗಿದ್ದು, ಪೊಲೀಸ್ ಮತ್ತು ಭದ್ರತಾ ಪಡೆ ಯೋಧರ ಬಹುದೊಡ್ಡ .ಬೇಟೆ ಇದಾಗಿದೆ. ಈತ ಇತ್ತೀಚೆಗೆ ಅಮರನಾಥ ಯಾತ್ರಿಕರ ಮೇಲೆ ನಡೆದ ಭಯೋತ್ಪಾದಕ ದಾಳಿಯ ಪ್ರಮುಖ ರೂವಾರಿಯಾಗಿದ್ದಾನೆ. ಅಮರನಾಥ ಯಾತ್ರಿಕರ ಮೇಲೆ ನಡೆದ ದಾಳಿಯಲ್ಲಿ 6 ಮಹಿಳಾ ಯಾತ್ರಿಕರು ಸೇರಿ 7 ಮಂದಿ ಹತರಾಗಿದ್ದರು. 19 ಮಂದಿ ಗಾಯಗೊಂಡಿದ್ದರು.

ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ಪ್ರದೇಶವನ್ನ ಸುತ್ತುವರೆದ ಪೊಲೀಸ್ ಮತ್ತು ಭದ್ರತಾ ಪಡೆ ಯೋಧರು ಇಂಟರ್ನೆಟ್ ಸೌಲಭ್ಯ ಬಂದ್ ಮಾಡಿ ಕಾರ್ಯಾಚರಣೆ ನಡೆಸಿದ್ದಾರೆ. ಅಬು ಇಸ್ಮಾಯಿಲ್ ಜೊತೆ ಹತನಾದ ಮತ್ತೊಬ್ಬ ಉಗ್ರನನ್ನ ಪಾಕಿಸ್ತಾನ ನಿವಾಸಿ ಚೋಟಾ ಖಸೀಮ್ ಎಂದು ಗುರ್ತಿಸಲಾಗಿದೆ. ಅಬು ಇಸ್ಮಾಯಿಲ್ ಬೇಟೆಗೆ ಜುಲೈ 12ರಿಂದಲೆ ಯೋಧರು ಕಾರ್ಯಾಚರಣೆಗೆ ಇಳಿದಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಸಾಲು ಪ್ರತಿಭಟನೆ ಬೆನ್ನಲ್ಲೇ ದೊಡ್ಡ ಮಟ್ಟದ ಸಭೆ ನಡೆಸಿದ ಮಲ್ಲಿಕಾರ್ಜುನ ಖರ್ಗೆ

ಆರ್ಯಭಟ್ಟರು ಸೊನ್ನೆಯಿಂದ ಇತಿಹಾಸ ನಿರ್ಮಿಸಿದರು: ಪ್ರಧಾನಿ ಮೋದಿ

ಲಕ್ಷ್ಮೀ ಹೆಬ್ಬಾಳಕರ, ರಾಜ್ಯಪಾಲರ ಸಹಿ ನಕಲು ಮಾಡಿ ಲಕ್ಷಾಂತರ ವಂಚನೆ: ಬಿಗ್ ಅಪ್ಡೇಟ್ ನೀಡಿದ ಎಸ್‌ಪಿ

ಲಾಲ್‌ ಬಾಗ್‌, ಕಬ್ಬನ್ ಪಾರ್ಕ್‌ನಂತಹ ಇನ್ನಷ್ಟು ಉದ್ಯಾನವನಗಳ ಅಗತ್ಯವಿದೆ: ಈಶ್ವರ್ ಖಂಡ್ರೆ

ವಿಧಾನಸಭೆಯಲ್ಲೂ ಪ್ರತಿಧ್ವನಿಸಿದ ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ: ವರದಿ ಬಿಡುಗಡೆಗೆ ಬಿಜೆಪಿ ಆಗ್ರಹ

ಮುಂದಿನ ಸುದ್ದಿ
Show comments