Webdunia - Bharat's app for daily news and videos

Install App

ಮಧ್ಯಪ್ರದೇಶ ಸಿಎಂ ಆಗಿದ್ದಾಗ ರೇಪಿಸ್ಟ್‌ಗಳಿಗೆ ಚಿತ್ರಹಿಂಸೆ ನೀಡಿದ್ದೆ: ಉಮಾ ಭಾರತಿ

Webdunia
ಶುಕ್ರವಾರ, 10 ಫೆಬ್ರವರಿ 2017 (16:46 IST)
ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿದ್ದಾಗ ರೇಪಿಸ್ಟ್‌ಗಳಿಗೆ ಪೊಲೀಸ್ ಠಾಣೆಗಳಲ್ಲಿ ಚಿತ್ರಹಿಂಸೆ ನೀಡುವಂತೆ ಆದೇಶ ನೀಡಿದ್ದೆ ಎಂದು ಬಿಜೆಪಿ ನಾಯಕಿ, ಫೈರ್‌ಬ್ರಾಂಡ್ ಖ್ಯಾತಿಯ ಉಮಾ ಭಾರತಿ ಹೇಳಿದ್ದಾರೆ. 
 
ಉತ್ತರಪ್ರದೇಶದ ಆಗ್ರಾದಲ್ಲಿ ಚುನಾವಣೆ ಪ್ರಚಾರದಲ್ಲಿ ಪಾಲ್ಗೊಂಡು ಭಾಷಣ ಮಾಡಿದ ಅವರು, ಬುಲಂದ್‌ಶಹರ್ ಗ್ಯಾಂಗ್‌ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಠಿಣ ಕ್ರಮ ತೆಗೆದುಕೊಳ್ಳುವಲ್ಲಿ ಸಿಎಂ ಅಖಿಲೇಶ್ ವಿಫಲವಾಗಿದ್ದಾರೆ. ಮಧ್ಯಪ್ರದೇಶದಲ್ಲಿ ನಮ್ಮ ಸರಕಾರ ಅಧಿಕಾರದಲ್ಲಿದ್ದಾಗ ರೇಪ್‌ಗೊಳಗಾದವರ ಮುಂದೆ ಆರೋಪಿಗಳಿಗೆ ಚಿತ್ರಹಿಂಸೆ ನೀಡಲಾಗುತ್ತಿತ್ತು ಎಂದು ತಿಳಿಸಿದ್ದಾರೆ. 
 
ಆಗ್ರಾದ ಗ್ರಾಮೀಣ ಭಾಗದಿಂದ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಹೇಮಲತಾ ದಿವಾಕರ್ ಪರ ಚುನಾವಣೆ ಪ್ರಚಾರ ನಡೆಸಿದ ಉಮಾಭಾರತಿ, ರೇಪಿಸ್ಟ್‌ಗಳನ್ನು ಚರ್ಮ ಸುಲಿಯುವಂತೆ ಭಾರಿಸಬೇಕು. ನಂತರ ಅವರ ಚರ್ಮದ ಮೇಲೆ ಉಪ್ಪು ಮತ್ತು ಖಾರ ಹಾಕಿ ತಿಕ್ಕಬೇಕು ಎಂದು ಸಲಹೆ ನೀಡಿದ್ದಾರೆ.
 
ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿದ್ದಾಗ ರೇಪಿಸ್ಟ್‌ಗಳಿಗೆ ಪೊಲೀಸ್ ಠಾಣೆಗಳಲ್ಲಿ ಚಿತ್ರಹಿಂಸೆ ನೀಡುವಂತೆ ಆದೇಶ ನೀಡಿದ್ದೆ. ಆದರೆ, ಪೊಲೀಸರು ಇದು ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತದೆ ಎಂದು ಹೇಳುತ್ತಿದ್ದುದಾಗಿ ತಿಳಿಸಿದ್ದಾರೆ. 
 
ಆದರೆ, ಮಾನವ ಹಕ್ಕುಗಳು ಮನುಷ್ಯರಿಗೆ ಮಾತ್ರ ಸೀಮಿತವಾಗಿರುತ್ತವೆಯೇ ಹೊರತು ರೇಪಿಸ್ಟ್‌ರಂತಹ ರಾಕ್ಷಸರಿಗ ಅಲ್ಲ. ರಾಮಾಯಣದಲ್ಲಿ ರಾವಣನ ರುಂಡ ಕತ್ತರಿಸಿದಂತೆ ರೇಪಿಸ್ಟ್‌ಗಳ ರುಂಡ ಕತ್ತರಿಸಬೇಕು ಎಂದು ಕೇಂದ್ರ ಸಚಿವೆ ಉಮಾ ಭಾರತಿ ಗುಡುಗಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್, ಸೋನಿಯಾ ಜತೆಗಿನ ಭೇಟಿ ಕುಟುಂಬದ ಜತೆ ಸಮಯ ಕಳೆದ ಹಾಗೇ: ಎಂಕೆ ಸ್ಟಾಲಿನ್‌

ಬಿಟ್ರೇ ಮೈಸೂರು ಸ್ಯಾಂಡಲ್ ಸೋಪ್‌ಗೆ ನಾನೇ ಫ್ರೀಯಾಗಿ ರಾಯಭಾರಿಯಾಗ್ತೀನಿ: ವಾಟಾಳ್ ನಾಗರಾಜ್‌

ಕರಾಳ ನೆನಪು ಮಾಸುವ ಮುನ್ನವೇ ಮತ್ತೆ ಕೋವಿಡ್ ಭೀತಿ: ಸಿಲಿಕಾನ್ ಸಿಟಿಯಲ್ಲಿ ಮಗುವಿಗೆ ಸೋಂಕು ದೃಢ

Gang Rape: ಸಾಂಗ್ಲಿಯಲ್ಲಿ MBBS ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್‌

ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ಅಧಿಕಾರ ಸರ್ಕಾರಕ್ಕಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments