Webdunia - Bharat's app for daily news and videos

Install App

ಪ್ರಯಾಗ್ ರಾಜ್ ಗೆ ಈಗಲೂ ನಿತ್ಯವೂ ಸಾವಿರಾರು ಜನರ ಭೇಟಿ: ಈ ದಿನದವರೆಗೂ ವಿಶೇಷವೇ

Krishnaveni K
ಮಂಗಳವಾರ, 25 ಮಾರ್ಚ್ 2025 (11:12 IST)
ಪ್ರಯಾಗ್ ರಾಜ್: ಇತ್ತೀಚೆಗೆ ಪ್ರಯಾಗ್ ರಾಜ್ ನಲ್ಲಿ ಕುಂಭಮೇಳ ಮುಕ್ತಾಯಗೊಂಡಿರಬಹುದು. ಆದರೆ ಈಗಲೂ ಪ್ರಯಾಗ್ ರಾಜ್ ತ್ರಿವೇಣಿ ಸಂಗಮಕ್ಕೆ ನಿತ್ಯವೂ ಸಾವಿರಾರು ಮಂದಿ ಭೇಟಿ ನೀಡುತ್ತಲೇ ಇರುತ್ತಾರೆ.

ಪ್ರಯಾಗ್ ರಾಜ್ ನಲ್ಲಿ ನಡೆದಿದ್ದ ಕುಂಭಮೇಳದಲ್ಲಿ 40 ಕೋಟಿಗೂ ಅಧಿಕ ಮಂದಿ ಪಾಲ್ಗೊಂಡು ದಾಖಲೆಯಾಗಿತ್ತು. ಸರ್ಕಾರಕ್ಕೆ ಸ್ಥಳೀಯ ಉದ್ದಿಮೆದಾರರಿಗೆ, ಟ್ರಾವೆಲ್ ಏಜೆನ್ಸಿಗಳಿಗೆ ಕೋಟ್ಯಾಂತರ ರೂಪಾಯಿ ಆದಾಯ ತಂದುಕೊಟ್ಟಿತ್ತು. ಶಿವರಾತ್ರಿ ದಿನ ಕುಂಭಮೇಳ ಮುಕ್ತಾಯಗೊಂಡಿತ್ತು.

ಹಾಗಿದ್ದರೂ ಈಗಲೂ ಪ್ರತಿನಿತ್ಯ ಕುಂಭಮೇಳ ನಡೆದ ಪ್ರಯಾಗ್ ರಾಜ್ ಗೆ ಪ್ರತಿನಿತ್ಯ ಹೆಚ್ಚು ಕಡಿಮೆ 20 ರಿಂದ 30 ಸಾವಿರ ಮಂದಿ ಭಕ್ತರು ಭೇಟಿ ಕೊಡುತ್ತಲೇ ಇರುತ್ತಾರೆ. ಸಾವಿರಾರು ಮಂದಿ ಇಂದೂ ತ್ರಿವೇಣಿ ಸಂಗಮದಲ್ಲಿ ಬಂದು ಪುಣ್ಯಸ್ನಾನ ಮಾಡಿ ಹೋಗುತ್ತಾರೆ.

ಕುಂಭಮೇಳ ಮುಕ್ತಾಯವಾಗಿದ್ದರೂ ಈಗಲೂ ಅಲ್ಲಿ ಪುಣ್ಯಸ್ನಾನ ವಿಶೇಷವಾಗಿದೆ. ಈ ಮಾರ್ಚ್ 30 ರವರೆಗೂ ಇಲ್ಲಿ ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡುವುದರಿಂದ ಪುಣ್ಯ ಪ್ರಾಪ್ತಿಯಾಗುವ ವಿಶೇಷ ಶಕ್ತಿಯಿದೆ ಎಂದು ನಂಬಲಾಗಿದೆ. ಹೀಗಾಗಿ ಭಕ್ತರು ಈಗಲೂ ಇಲ್ಲಿಗೆ ಸಾಕಷ್ಟು ಸಂಖ್ಯೆಯಲ್ಲಿ ಇಲ್ಲಿಗೆ ಬಂದು ಪುಣ್ಯಸ್ನಾನ ಮಾಡುತ್ತಿದ್ದಾರೆ.

ಕುಂಭಮೇಳಕ್ಕೆ ಮಾಡಲಾಗಿದ್ದ ಎಲ್ಲಾ ವ್ಯವಸ್ಥೆಗಳನ್ನೂ ಈಗಲೂ ಮುಂದುವರಿಸಲಾಗಿದೆ. ಸ್ನಾನ ಘಟ್ಟದಲ್ಲಿ ಸ್ನಾನ ಮಾಡಲು, ಗಂಗಾ ನದಿಯಲ್ಲಿ ಬೋಟಿಂಗ್ ವ್ಯವಸ್ಥೆಗಳು ಎಲ್ಲವೂ ಮೊದಲಿನಂತೇ ಇದೆ. ಮೊದಲಿನಂತೆ ಈಗ ಕಿ.ಮೀಗಟ್ಟಲೆ ನಡೆಯಬೇಕಾಗಿಲ್ಲ. ಪ್ರಯಾಗ್ ರಾಜ್ ತ್ರಿವೇಣಿ ಸಂಗಮದವರೆಗೂ ವಾಹನ ವ್ಯವಸ್ಥೆಯಿದೆ. ಹೀಗಾಗಿ ಈಗ ಸುಲಭವಾಗಿ ಕುಂಭಮೇಳ ನಡೆದ ಜಾಗ ತಲುಪಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ಹುಟ್ಟು ಕಾಂಗ್ರೆಸ್ಸಿಗ, ನಾನು ಕಾಂಗ್ರೆಸ್ಸಿಗನಾಗಿಯೇ ಸಾಯುತ್ತೇನೆ: ಡಿಕೆ ಶಿವಕುಮಾರ್ ಹೀಗಂದಿದ್ಯಾಕೆ

RSS ಗೀತೆ ಪಠಿಸಿದ ಡಿಕೆ ಶಿವಕುಮಾರ್, ಇದೆಲ್ಲ ಅವರೇ ನೋಡಿಕೊಳ್ಳುತ್ತಾರೆಂದ ಪರಮೇಶ್ವರ್‌

ಉಪಜಾತಿಗಳ ಪಟ್ಟಿಗೆ ಸಂಬಂಧಿಸಿ ಆಕ್ಷೇಪಣೆಗೆ ಇನ್ನಷ್ಟು ಕಾಲಾವಕಾಶ ಕೊಡಿ: ವಿ.ಸುನೀಲ್‍ಕುಮಾರ್

ಭಾರತಾಂಬೆಗೆ ನಮಿಸಿದ್ದಕ್ಕೆ ಡಿಕೆ ಶಿವಕುಮಾರ್ ಕ್ಷಮೆ ಕೇಳಬೇಕೇ: ಆರ್ ಅಶೋಕ್

ಮೇಘಸ್ಫೋಟದಿಂದ ಸುಧಾರಿಸುತ್ತಿಕೊಳ್ಳುತ್ತಿರುವ ಜಮ್ಮು ಕಾಶ್ಮೀರಕ್ಕೆ ಮತ್ತೇ ಶಾಕ್‌

ಮುಂದಿನ ಸುದ್ದಿ
Show comments