Pehalgam ದಾಳಿಯಾದ್ರೂ ಪ್ರವಾಸಿಗರಿಗೆ ಚಿಂತೆಯಿಲ್ಲ: ದಾಳಿ ನಡೆದ ಕಾಶ್ಮೀರಕ್ಕೆ ಪ್ರವಾಸಿಗರ ದಂಡು

Krishnaveni K
ಸೋಮವಾರ, 28 ಏಪ್ರಿಲ್ 2025 (12:01 IST)
ಜಮ್ಮು ಕಾಶ್ಮೀರ: ಪಹಲ್ಗಾಮ್ ನಲ್ಲಿ ಉಗ್ರ ದಾಳಿಯಾದ ಬಳಿಕ ಇನ್ನು ಯಾರೂ ಕಾಶ್ಮೀರ ಪ್ರವಾಸ ಮಾಡಲಾರರು ಎಂದೇ ಎಲ್ಲರೂ ಅಂದುಕೊಂಡಿದ್ದರು. ಆದರೆ ದಾಳಿ ನಡೆದ ವಾರದೊಳಗೆ ಮತ್ತೆ ಕಣಿವೆ ರಾಜ್ಯದಲ್ಲಿ ಪ್ರವಾಸಿಗರ ದಂಡು ಕಂಡುಬರುತ್ತಿದೆ.

ಕಳೆದ ವಾರವಷ್ಟೇ ಇಡೀ ವಿಶ್ವವೇ ಬೆಚ್ಚಿಬೀಳುವಂತ ಉಗ್ರ ದಾಳಿ ಪಹಲ್ಗಾಮ್ ನಲ್ಲಿ ನಡೆದಿತ್ತು. 26 ಪ್ರವಾಸೀ ಹಿಂದೂಗಳನ್ನು ಉಗ್ರರನ್ನು ಗುಂಡಿಕ್ಕಿ ಸಾಯಿಸಿದ್ದರು. ಘಟನೆ ಬಳಿಕ ಭಾರತ ಮತ್ತು ಪಾಕಿಸ್ತಾನ ನಡುವೆ ಕಾವೇರಿದ ವಾತಾವರಣವಿದೆ.

ಹಾಗಿದ್ದರೂ ಈಗಲೂ ಪ್ರವಾಸಿಗರು ಧೈರ್ಯ ಮಾಡಿ ಬರುತ್ತಿರುವುದು ವಿಶೇಷ. ಕೋಲ್ಕತ್ತಾ, ಗುಜರಾತ್, ಪಶ್ಚಿಮ ಬಂಗಾಲ ಸೇರಿದಂತೆ ದೇಶದ ನಾನಾ ಭಾಗಗಳಿಂದ ಪ್ರವಾಸಿಗರು ಪಹಲ್ಗಾಮ್ ಗೂ ಭೇಟಿ ನೀಡುತ್ತಿದ್ದಾರೆ.

ಪ್ರವಾಸಿಗರನ್ನು ಆಕರ್ಷಿಸಲು ಈಗ ಹೋಟೆಲ್ ಗಳೂ ರಿಯಾಯಿತಿ ನೀಡುತ್ತಿವೆ. ಉಗ್ರ ದಾಳಿಯಾದ ಬಯಲು ಪ್ರದೇಶಕ್ಕೆ ಈಗ ಪ್ರವಾಸಿಗರಿಗೆ ಅವಕಾಶವಿಲ್ಲ. ಆದರೆ ಅದರ ಹೊರತುಪಡಿಸಿ ಉಳಿದ ಜಾಗಗಳಿಗೆ ಪ್ರವಾಸಿಗರು ಹೋಗುತ್ತಿದ್ದಾರೆ. ಸದ್ಯಕ್ಕೆ ಇಲ್ಲಿ ಭದ್ರತೆ ಹೆಚ್ಚಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

50 ಕುಟುಂಬಗಳು ವಾಸವಿದ್ದ ಅಪಾರ್ಟ್‌ಮೆಂಟ್‌ಗೆ ತಗುಲಿದ ಬೆಂಕಿ, ಇಬ್ಬರು ಸಾವು, ರಕ್ಷಣಾ ಕಾರ್ಯಚರಣೆಯ ವಿಡಿಯೋ

ದೇಶದ ಈ ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಕೆಲ ದಿನಗಳವರೆಗೆ ವಿಸ್ತರಣೆ, ಕರ್ನಾಟಕವೂ ಸೇರಿದೆಯಾ ಇಲ್ಲಿದೆ ಮಾಹಿತಿ

ಅಯೋದ್ಯೆ ರಾಮಮಂದಿರ ದೇಣಿಗೆ ವಿವಾದ: ಮುಂದಿನ 48ಗಂಟೆಗಳಲ್ಲಿ ಅಂತಿಮ ವರದಿ

ಮಾನ್ಸೂನ್‌ ವೈಪರೀತ್ಯ: 112 ವರ್ಷಗಳಲ್ಲಿ ಬೆಂಗಳೂರಿನಲ್ಲಿ ಇತಿಹಾಸ ಬರೆದ ಹವಾಮಾನ

ಸಚಿವ ಸಂಪುಟ ವಿಸ್ತರಣೆ ನಡುವೆ ಸಿದ್ದರಾಮಯ್ಯ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್, ಭಾರೀ ಕುತೂಹಲ

ಮುಂದಿನ ಸುದ್ದಿ
Show comments