Select Your Language

Notifications

webdunia
webdunia
webdunia
webdunia

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಪುಣೆಯ ಇಂದ್ರಯಾಣಿ ನದಿ ಸೇತುವೆ ಕುಸಿತ

Sampriya

ಪುಣೆ , ಭಾನುವಾರ, 15 ಜೂನ್ 2025 (17:03 IST)
Photo Courtesy X
ಪುಣೆ: ಭಾನುವಾರ ಮಧ್ಯಾಹ್ನ ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದ್ರಯಾಣಿ ನದಿಯ ಮೇಲಿನ ಕಬ್ಬಿಣದ ಸೇತುವೆ ಕುಸಿದು ಬಿದ್ದ ಘಟನೆ ನಡೆದಿದೆ. ಇದೀಗ ಹಲವು ಮಂದಿ ಕೊಚ್ಚಿಹೋಗಿರುವ ಶಂಕೆ ವ್ಯಕ್ತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಾವಲ್ ತಹಸಿಲ್‌ನ ಕುಂದಮಾಲಾ ಪ್ರದೇಶದ ಬಳಿ ಸಂಭವಿಸಿದ ಘಟನೆಯ ನಂತರ ಇಲ್ಲಿಯವರೆಗೆ ಮೂವರನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಎನ್‌ಡಿಆರ್‌ಎಫ್ ತಂಡಗಳು ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

"ಪ್ರಾಥಮಿಕ ಮಾಹಿತಿಯ ಪ್ರಕಾರ ಇಂದ್ರಯಾಣಿ ನದಿಯ ಮೇಲಿನ ಕಬ್ಬಿಣದ ಸೇತುವೆ ಕುಸಿದ ನಂತರ ಇಲ್ಲಿಯವರೆಗೆ ಒಬ್ಬ ವ್ಯಕ್ತಿ ನೀರಿನಲ್ಲಿ ಮುಳುಗಿದ್ದಾನೆ ಎಂದು ನಂಬಲಾಗಿದೆ ಮತ್ತು ಇತರ ಮೂವರನ್ನು ರಕ್ಷಿಸಲಾಗಿದೆ" ಎಂದು ತಲೆಗಾಂವ್ ದಭಾಡೆ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ. 20ಕ್ಕೂ ಅಧಿಕ ಮಂದಿ ಬಿದ್ದಿದ್ದಾರಂದು ಶಂಕಿಸಲಾಗಿದೆ. 

Share this Story:

Follow Webdunia kannada

ಮುಂದಿನ ಸುದ್ದಿ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ