Webdunia - Bharat's app for daily news and videos

Install App

ಕಾಲ್ತುಳಿತ ಪ್ರಕರಣ: ಬೆಳಗಾವಿಯಲ್ಲಿ ಮುಗಿಲುಮುಟ್ಟಿದ ಆಕ್ರಂದನದ ಮಧ್ಯೆ ತಾಯಿ-ಮಗಳ ಅಂತ್ಯಕ್ರಿಯೆ

Sampriya
ಶುಕ್ರವಾರ, 31 ಜನವರಿ 2025 (14:44 IST)
Photo Courtesy X
ಬೆಳಗಾವಿ: ಪ್ರಯಾಗ್‌ರಾಜನಲ್ಲಿ ಬುಧವಾರ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ಮೃತಪಟ್ಟ ಬೆಳಗಾವಿಯ ವಡಗಾವಿಯ ನಿವಾಸಿ ಜ್ಯೋತಿ ಹತ್ತರವಾಟ, ಅವರ ಪುತ್ರಿ ಮೇಘಾ ಅವರ ಅಂತ್ಯಸಂಸ್ಕಾರ ಇಲ್ಲಿ‌ನ ಶಹಾಪುರ ಸ್ಮಶಾನದಲ್ಲಿ ಶುಕ್ರವಾರ ಬೆಳಿಗ್ಗೆ ನೆರವೇರಿತು.

ಕುಟುಂಬದ ಸದಸ್ಯರ ಆಕ್ರಂದನ ಮುಗಿಲುಮುಟ್ಟಿತು. ಬ್ರಾಹ್ಮಣ ಸಂಪ್ರದಾಯದಂತೆ ವಿಧಿ- ವಿಧಾನಗಳನ್ನು ಪೂರೈಸಲಾಯಿತು. ಜ್ಯೋತಿ ಅವರ ಪತಿ ದೀಪಕ್ ಇಬ್ಬರ ಚಿತೆಗೆ ಅಗ್ನಿಸ್ಪರ್ಶ ಮಾಡಿದರು‌. ಪುಣ್ಯಸ್ನಾನಕ್ಕೆ ಹೋದ ತಾಯಿ,‌ ಮಗಳು ಶವವಾಗಿ ಬಂದಿದ್ದು ಕಂಡು ಕುಟುಂಬದವರು ದುಃಖದಲ್ಲಿ ಮುಳುಗಿದರು. ನಸುಕಿನಲ್ಲೂ ಅಪಾರ ಜ‌ನ ಅವರ ಮನೆಗೆ ಧಾವಿಸಿ ಅಂತಿಮ ನಮನ ಸಲ್ಲಿಸಿದರು.

ಜ.28ರಂದು ರಾತ್ರಿ ಸಂಭವಿಸಿದ ಕಾಲ್ತುಳಿತದಲ್ಲಿ ತಾಯಿ,‌ ಮಗಳು ಸೇರಿ ನಾಲ್ವರು ಸಾವಿಗೀಡಾದರು‌. ಅರುಣ‌ ಕೋಪರ್ಡೆ ‌ಹಾಗೂ ಮಹಾದೇವಿ ಬಾವನೂರ ಅವರ ಶವಗಳನ್ನು ಗುರುವಾರ ಸಂಜೆಗೆ ಏರ್ ಲಿಫ್ಟ್ ಮಾಡಿ ಬೆಳಗಾವಿ ತರಲಾಯಿತು. ರಾತ್ರಿಯೇ ಅವರ ಅಂತ್ಯಕ್ರಿಯೆ ನೆರವೇರಿತು.

ಜ್ಯೋತಿ ಹಾಗೂ ಮೇಘಾ ಅವರ ಶವಗಳನ್ನು ದೆಹಲಿಯಿಂದ ಗೋವಾಗೆ ಏರ್ ಲಿಫ್ಟ್ ಮಾಡಿ, ಅಲ್ಲಿಂದ ಆಂಬುಲೆನ್ಸ್ ಮೂಲಕ ಬೆಳಗಾವಿಗೆ ತರಲಾಯಿತು. ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬದವರಿಗೆ ಹಸ್ತಾಂತರಿಸಲಾಯಿತು.‌ ಅಷ್ಟೊತ್ತಿಗೆ ಶುಕ್ರವಾರ ನಸುಕಿನ 4 ಗಂಟೆಯಾಗಿತ್ತು.


 <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ತಣ್ಣಗಾಯಿತೇ ಮಳೆಯ ಅಬ್ಬರ, ಹವಾಮಾನ ಬದಲಾವಣೆ ತಪ್ಪದೇ ಗಮನಿಸಿ

ಧರ್ಮಸ್ಥಳ: 15 ಶವ ಹೂತಿಟ್ಟ ಸ್ಥಳವನ್ನು ಗುರುತಿಸಿದ ದೂರುದಾರ, ಪ್ರದೇಶಕ್ಕೆ ಗನ್‌ಮ್ಯಾನ್ ಭದ್ರತೆ

ನಾಳೆ ನಾಗರಪಂಚಮಿ: ನಾಗದೋಷಗಳಿಗೆ ಈ ದಿನ ವಿಶೇಷ ಪೂಜೆ ನೆರವೇರಿಸಿದ್ರೆ ದೂರವಾಗುತ್ತೆ ಸಂಕಷ್ಟ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಮುಂದಿನ ಸುದ್ದಿ
Show comments