Webdunia - Bharat's app for daily news and videos

Install App

ಮಾನ, ಮರ್ಯಾದೆ ಇದ್ರೆ ಬುಲಂದ್‌ಶಹರ್ ಗ್ಯಾಂಗ್‌ರೇಪ್ ಪ್ರಕರಣ ಸಿಬಿಐಗೆ ಒಪ್ಪಿಸಿ: ಬಿಜೆಪಿ

Webdunia
ಮಂಗಳವಾರ, 2 ಆಗಸ್ಟ್ 2016 (20:11 IST)
ಮುಂದಿನ ವರ್ಷದ ಆರಂಭದಲ್ಲಿ ವಿಧಾನಸಭೆ ಚುನಾವಣೆಗಳಿರುವಂತೆಯೇ ಸಮಾಜವಾದಿ ಪಕ್ಷದ ಸರಕಾರ ಕ್ರಿಮಿನಲ್‌ಗಳಿಗೆ ರಕ್ಷಣೆ ನೀಡಿ ಪ್ರೋತ್ಸಾಹಿಸುತ್ತಿದೆ. ಒಂದು ವೇಳೆ, ಅಖಿಲೇಶ್ ಯಾದವ್ ಸರಕಾರಕ್ಕೆ ಮಾನ, ಮರ್ಯಾದೆ ಇದ್ರೆ ಬುಲಂದ್‌ಶಹರ್ ಗ್ಯಾಂಗ್‌ರೇಪ್ ಪ್ರಕರಣ ಸಿಬಿಐಗೆ ಒಪ್ಪಿಸಲಿ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ. 
 
ಸಮಾಜವಾದಿ ಪಕ್ಷ ಆರಂಭದಲ್ಲಿ ಮುಸ್ಲಿಮರನ್ನು ಓಲೈಸುತ್ತಿತ್ತು. ಇದೀಗ ವಿವಿಧ ಧರ್ಮಗಳಲ್ಲಿರುವ ಕ್ರಿಮಿನಲ್‌ಗಳನ್ನು ಓಲೈಸುತ್ತಿದೆ ಎಂದು ಕಿಡಿಕಾರಿದೆ.
 
ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಶ್ರೀಕಾಂತ್ ಶರ್ಮಾ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಮಾಜವಾದಿ ಪಕ್ಷದ ನಗರಾಭಿವೃದ್ಧಿ ಸಚಿವ ಆಜಂ ಖಾನ್ ಇದೊಂದು ರಾಜಕೀಯ ಸಂಚು ಎಂದು ಹೇಳಿರುವುದು ನೋಡಿದಲ್ಲಿ ಸರಕಾರ ಮತಗಳಿಗಾಗಿ ಎಷ್ಟು ಕೀಳು ಮಟ್ಟಕ್ಕೆ ಇಳಿದಿದೆ ಎನ್ನುವುದು ಸಾಬೀತಾಗುತ್ತದೆ ಎಂದು ಲೇವಡಿ ಮಾಡಿದ್ದಾರೆ.
 
ಕಳೆದ 2012ರಿಂದ 2016ರವರೆಗೆ ಸಮಾಜವಾದಿ ಪಕ್ಷದ ಸರಕಾರದಲ್ಲಿ ಅಪರಾಧಗಳ ಸಂಖ್ಯೆಯಲ್ಲಿ ಗಣನೀಯವಾಗಿ ಏರಿಕೆಯಾಗಿದೆ. ರಾಜ್ಯದಲ್ಲಿ ಜನತೆ ವಿಶೇಷವಾಗಿ ಮಹಿಳೆಯರು ಆತಂಕದಲ್ಲಿ ಜೀವಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. 
 
ಮಹಿಳೆಯರ ವಿರುದ್ಧದ ದೌರ್ಜನ್ಯದಲ್ಲಿ ಉತ್ತರಪ್ರದೇಶ ಮೊದಲ ಸ್ಥಾನದಲ್ಲಿದೆ. ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ 2920 ರೇಪ್ ಪ್ರಕರಣಗಳು, 12,198 ಹತ್ಯೆ ಮತ್ತು 6015 ದರೋಡೆ ಪ್ರಕರಣಗಳು ನಡೆದಿವೆ ಎಂದು ಮಾಹಿತಿ ನೀಡಿದ್ದಾರೆ.
 
ಇಂತಹ ಭೀಕರ ಘಟನೆಯನ್ನು ಸಚಿವ ಆಜಂಖಾನ್ ರಾಜಕೀಯಗೊಳಿಸುತ್ತಿದ್ದಾರೆ. ಇದನ್ನು ನೋಡಿದಲ್ಲಿ ಸರಕಾರ ವೋಟ್ ಬ್ಯಾಂಕ್‌ಗಾಗಿ ಯಾವ ಮಟ್ಟಕ್ಕೂ ಇಳಿಯಲು ಸಿದ್ದವಾಗಿದೆ ಎನ್ನುವುದು ಗೊತ್ತಾಗುತ್ತದೆ. ಒಂದು ವೇಳೆ ಸಿಎಂ ಅಖಿಲೇಶ್ ಯಾದವ್‌ಗೆ ಕಿಂಚಿತ್ತಾದರೂ ಮಾನ ಮರ್ಯಾದೆ ಇದ್ದಲ್ಲಿ ಕೂಡಲೇ ಪ್ರಕರಣವನ್ನು ಸಿಬಿಐಗೆ ವಹಿಸಿ ಬಲಪಶುಗಳಿಗೆ ನ್ಯಾಯ ಕೊಡಿಸಲಿ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಶ್ರೀಕಾಂತ್ ಶರ್ಮಾ ಸಲಹೆ ನೀಡಿದ್ದಾರೆ.

 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ಪಾಕ್‌ಗೆ ಸಹಾಯ ಮಾಡಿದ್ದಕ್ಕೆ ಟರ್ಕಿಗೆ ತಕ್ಕ ಉತ್ತರ ಕೊಟ್ಟ ಭಾರತ

ಭಯೋತ್ಪಾದಕರಿಗೆ ಪಾಠ ಕಲಿಸಲು ಅವರ ಸಹೋದರಿಯನ್ನು ಕಳುಹಿಸಿದೆವು: ಸೋಫಿಯಾ ಖುರೇಷಿ ವಿರುದ್ಧದ ವಿಜಯ್ ಶಾ ಹೇಳಿಕೆಗೆ ಆಕ್ರೋಶ

ಮೂಕ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಅರೋಪ, ನ್ಯಾಯಕ್ಕಾಗಿ ಶವವಿಟ್ಟು ಪ್ರತಿಭಟನೆ

ಅರುಣಾಚಲ ಪ್ರದೇಶದ ಮೇಲೆ ಹಕ್ಕು ಚಲಾಯಿಸಲು ಬಂದ ಚೀನಾಗೆ ಖಡಕ್‌ ಉತ್ತರ ಕೊಟ್ಟ ಭಾರತ

ಭಾರತದ ಮೇಲಿನ ದಾಳಿಗೆ ಪಾಕ್‌ಗೆ ಸಹಾಯ ಮಾಡಿದ ಟರ್ಕಿ, ಕಳುಹಿಸಿದ ಡ್ರೋನ್‌ಗಳ ಲೆಕ್ಕಾ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments