Webdunia - Bharat's app for daily news and videos

Install App

ಮೋದಿ ವಿರುದ್ಧ ಕಣಕ್ಕಿಳಿಯಲಿರುವ ತೃತೀಯ ಲಿಂಗಿ ಹಿಮಾಂಗಿ ಸಖಿ ಹಿನ್ನಲೆ

Krishnaveni K
ಸೋಮವಾರ, 8 ಏಪ್ರಿಲ್ 2024 (11:57 IST)
Photo Courtesy: Twitter
ವಾರಣಾಸಿ: ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ವಾರಣಾಸಿ ಕ್ಷೇತ್ರದಿಂದ ಪ್ರಧಾನಿ ಮೋದಿ ವಿರುದ್ಧ ತೃತೀಯ ಲಿಂಗಿ ಹಿಮಾಂಗಿ ಸಖಿ ಎನ್ನುವವರು ಕಣಕ್ಕಿಳಿಯುತ್ತಿದ್ದಾರೆ. ಅವರ ಹಿನ್ನಲೆಯೇನು ಎಂದು ನೋಡೋಣ.

ಹಿಮಾಂಗಿ ಸಖಿಗೆ ಹಿಂದೂ ಮಹಾಸಭಾ ಟಿಕೆಟ್ ನೀಡಿದೆ. ದೇಶದ ಮೊದಲ ತೃತೀಯ ಲಿಂಗಿ ಎಂಬ ಖ್ಯಾತಿಯ ಹಿಮಾಂಗಿ ಸಖಿ ಈಗ ಮೋದಿ ವಿರುದ್ಧ ಸ್ಪರ್ಧಿಸುತ್ತಿದ್ದಾರೆ. ಇವರ ವಿಶೇಷತೆ ಏನೆಂದರೆ 5 ಭಾಷೆಗಳಲ್ಲಿ ಭಾಗವತ ಕತೆಯನ್ನು ಹೇಳುವ ಸಾಮರ್ಥ್ಯ ಅವರದ್ದಾಗಿದೆ.

ಈ ಚುನಾವಣೆಯಲ್ಲಿ ಯಾರನ್ನೂ ಸೋಲಿಸುವುದು ನನ್ನ ಉದ್ದೇಶವಲ್ಲ. ಆದರೆ ಗೆದ್ದು ಅನೇಕ ಕೆಲಸಗಳನ್ನು ಮಾಡಬೇಕಿದೆ. ತೃತೀಯ ಲಿಂಗಿಗಳಿಗೂ ಸಮಾನ ಅವಕಾಶ ಸಿಗುವಂತಾಗಬೇಕು. ಜನರ ಪರವಾಗಿ ಕೆಲಸ ಮಾಡುವುದೇ ನನ್ನ ಉದ್ದೇಶ ಎಂದು ಹೇಳಿದ್ದಾರೆ.

ಹಿಮಾಂಗಿ ಸಖಿ ತಂದೆ ಗುಜರಾತಿ,ತಾಯಿ ಪಂಜಾಬಿ. ಈಕೆ ಕೃಷ್ಣನ ಭಕ್ತೆ. ಇದೇ ಕಾರಣಕ್ಕೆ ಮುಂಬೈನಲ್ಲಿ ತಮ್ಮ ಮನೆ ಪಕ್ಕವೇ ಇಸ್ಕಾನ್ ದೇವಾಲಯ ತೆರೆದರು. ಆರಂಭದಲ್ಲಿ ಅವರು ಕಾನ್ವೆಂಟ್ ಶಾಲೆಯಲ್ಲಿ ಓದಿದರು. ಬಳಿಕ ಪೋಷಕರು ತೀರಿಕೊಂಡ ಮೇಲೆ ಶಾಲೆ ಬಿಟ್ಟರು. ತಂದೆ ಸಿನಿಮಾ ವಿತರಕರಾಗಿದ್ದರು. ಹೀಗಾಗಿ ಹಿಮಾಂಗಿ ಕೂಡಾ ಕೆಲವೊಂದು ಸಿನಿಮಾ, ಟಿವಿ ಶೋನಲ್ಲಿ ಕಾಣಿಸಿಕೊಂಡಿದ್ದರು. ವಿಶೇಷ ಪೋಷಾಕು ಧರಿಸುವ ಹಿಮಾಂಗಿ ಈಗ ಪ್ರಧಾನಿ ಮೋದಿ ವಿರುದ್ಧ ಕಣಕ್ಕಿಳಿಯುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸತ್ಯ ಹರಿಶ್ಚಂದ್ರರ ತುಂಡುಗಳ ಬಣ್ಣವೆಲ್ಲಾ ಬಯಲಾಗ್ತಿದೆ: ಬಿ ಶ್ರೀರಾಮುಲು

ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಕೈ ಹೈಕಮಾಂಡ್‌ ಶಾಕ್‌: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟವರಿಗೂ ನಿರಾಸೆ

ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಬಿಗ್‌ ರಿಲೀಫ್‌: ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್‌ ಹೇಳಿದ್ದೇನು ಗೊತ್ತಾ

Mallikarjun Kharge: ಕಾಲ್ತುಳಿತ ಆಕಸ್ಮಿಕವಾಗಿ ನಡೆದಿದ್ದು ನಮ್ಮವ್ರು ಕ್ಷಮೇನೂ ಕೇಳವ್ರೆ: ಮಲ

Karnataka caste census: 165 ಕೋಟಿ ರೂ. ಖರ್ಚು ಮಾಡಿದ್ದಕ್ಕೆ ಯಾರು ಹೊಣೆ: ವಿ.ಸುನೀಲ್ ಕುಮಾರ್

ಮುಂದಿನ ಸುದ್ದಿ
Show comments