Webdunia - Bharat's app for daily news and videos

Install App

ಉದ್ಯೋಗದಿಂದ ವಜಾಗೊಳಿಸಿದ್ದಕ್ಕೆ ಮಾಲೀಕನ ಪುತ್ರನ ಹತ್ಯೆಗೈದ ಮಹಿಳೆ

Webdunia
ಮಂಗಳವಾರ, 2 ಆಗಸ್ಟ್ 2016 (15:51 IST)
ಉದ್ಯೋಗದಿಂದ ತೆಗೆದುಹಾಕಿದ ಕೋಪದ ಭರದಲ್ಲಿ 24 ವರ್ಷ ವಯಸ್ಸಿನ ಮಹಿಳೆಯೊಬ್ಬಳು ಸೇಡು ತೀರಿಸಿಕೊಳ್ಳಲು ತನ್ನ ಮಾಲೀಕನ ಪುತ್ರನನ್ನು ಹತ್ಯೆ ಮಾಡಿದ ಹೇಯ ಘಟನೆ ವರದಿಯಾಗಿದೆ.
 
ಶಿವಕುಮಾರ್ ಮತ್ತು ಲಕ್ಷ್ಮಿ ಪ್ರಭಾ ಎನ್ನುವ ದಂಪತಿಗಳಿಗೆ ಶಿರಿಶ್ ಎನ್ನುವ ಮೂರು ವರ್ಷದ ಪುತ್ರನಿದ್ದ. ದಂಪತಿಗಳು ಮೊಬೈಲ್ ಅಂಗಡಿಯ ಮಾಲೀಕರಾಗಿದ್ದರು. ತಮ್ಮ ನೆರೆಮನೆಯಲ್ಲಿ ವಾಸವಾಗಿದ್ದ ರೋಸ್ಲಿನ್ ಮೇರಿ ಎನ್ನುವ ಮಹಿಳೆಯನ್ನು ಅಂಗಡಿಯಲ್ಲಿ ಕೆಲಸಕ್ಕಿಟ್ಟುಕೊಂಡಿದ್ದರು. ದಂಪತಿಗಳೊಂದಿಗೆ ಮತ್ತು ಮಗುವಿನೊಂದಿಗೆ ರೋಸ್ಲಿನ್ ಉತ್ತಮ ಸಂಬಂಧ ಹೊಂದಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.  
 
ಆದರೆ, ಯಾವುದೇ ತಪ್ಪು ಕಲ್ಪನೆಯಿಂದಾಗಿ ಶಿವಕುಮಾರ್, ತಮ್ಮ ಮೊಬೈಲ್ ಅಂಗಡಿಯಲ್ಲಿ ಉದ್ಯೋಗದಲ್ಲಿದ್ದ ರೋಸ್ಲಿನ್ ಮೇರಿಯನ್ನು ಕೆಲಸದಿಂದ ವಜಾಗೊಳಿಸಿದ್ದಾರೆ.
 
ಏತನ್ಮಧ್ಯೆ, ರೋಸ್ಲಿನ್, ಸೇಡು ತೀರಿಸಿಕೊಳ್ಳುವ ಸಂಚು ರೂಪಿಸಿ, ತನ್ನ ಮಾಲೀಕರ ಮನೆಗೆ ಬಂದು ಮಗು ಶಿರಿಶ್‌ನನ್ನು ಕೆಲ ಸಮಯದವರೆಗೆ ಹೊರಗೆ ತೆಗೆದುಕೊಂಡು ಹೋಗುವುದಾಗಿ ಲಕ್ಷ್ಮಿ ಪ್ರಭಾಗೆ ತಿಳಿಸಿದ್ದಾಳೆ.
 
ಕೆಲ ಗಂಟೆಗಳ ನಂತರ ಮನೆಗೆ ಮಗುವನ್ನು ಕರೆದುಕೊಂಡು ಬಂದ ರೋಸ್ಲಿನ್, ಮಗು ಮಲಗಿದೆ ತೊಂದರೆ ಕೊಡಬೇಡಿ ಎಂದು ಮಗುವಿನ ತಾಯಿಗೆ ಹೇಳಿದ್ದಾಳೆ.
 
ಆದರೆ, ದಂಪತಿಗಳಾದ ಶಿವಕುಮಾರ್ ಮತ್ತು ಲಕ್ಷ್ಮಿಪ್ರಭಾಗೆ ಅನುಮಾನ ಬಂದು ನೋಡಿದಾಗ, ಮಗುವಿನಲ್ಲಿ ಯಾವುದೇ ಚಲನೆಯಿರದಿರುವುದು ಕಂಡು ಬಂದಿದೆ. ಆಘಾತಗೊಂಡ ದಂಪತಿಗಳು ಕೂಡಲೇ ಮಗವನ್ನು ಕರೆದುಕೊಂಡು ಹೋಗಿ ಆಸ್ಪತ್ರೆಗೆ ದಾಖಲಿಸಿದಾಗ, ಮಗು ಸಾವನ್ನಪ್ಪಿ ಕೆಲ ಗಂಟೆಗಳಾಗಿವೆ ಎಂದು ವೈದ್ಯರು ತಿಳಿಸಿದ್ದಾರೆ.
 
ಇದೇ ಸಂದರ್ಭದಲ್ಲಿ ಆರೋಪಿ ರೋಸ್ಲಿನ್ ಮೇರಿ, ಪಲಕ್ಕರೈ ಪೊಲೀಸ್ ಠಾಣೆಗೆ ತೆರಳಿ ಶರಣಾಗಿ, ತನ್ನನ್ನು ಉದ್ಯೋಗದಿಂದ ತೆಗೆದುಹಾಕಿದ್ದರಿಂದ ಸೇಡು ತೀರಿಸಿಕೊಳ್ಳಲು ಮಾಲೀಕರ ಮಗುವನ್ನು ಕೊಂದಿರುವುದಾಗಿ ಒಪ್ಪಿಕೊಂಡಿದ್ದಾಳೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ಕುಟುಂಬದ ಹತ್ತು ಮಂದಿಗೆ ಅಲ್ಲಾನ ಆಶೀರ್ವಾದ ಸಿಕ್ಕಿದೆ ಎಂದು ಕಣ್ಣೀರಿಟ್ಟ ಉಗ್ರ ಮಸೂದ್

Operation Sindoor: ಸಿಂಧೂರ ಕಸಿದವನು ತನ್ನ ಕುಟುಂಬ ಕಳೆದುಕೊಂಡಿದ್ದಾನೆ ಎಂದ ಯೋಗಿ ಆದಿತ್ಯನಾಥ್‌

Operation Sindoor: ಪಾಕ್‌ ಸೇನೆ ಅಪ್ರಚೋದಿತ ಗುಂಡಿನ ದಾಳಿ: 15 ಮಂದಿ ನಾಗಕರಿಕರು ಸಾವು

Mock Drill: ಬೆಂಗಳೂರು ಪೂರ್ತಿ ಲೈಟ್ಸ್ ಆಫ್

Operation Sindoor: ಸೇನೆಗೆ ಭಗವಂತ ಶಕ್ತಿ ತುಂಬಲು ಮುಜರಾಯಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ

ಮುಂದಿನ ಸುದ್ದಿ
Show comments