Webdunia - Bharat's app for daily news and videos

Install App

ದೇಶಕ್ಕಾಗಿ ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸಿದ್ದೇನೆ: ಮನಮೋಹನ್ ಸಿಂಗ್

Webdunia
ಶನಿವಾರ, 17 ಮೇ 2014 (17:11 IST)
ದೇಶದ ಜನತೆಯನ್ನು ಉದ್ದೇಶಿಸಿ ತಮ್ಮ ಕೊನೆಯ ಭಾಷಣ ಮಾಡಿದ ಪ್ರಧಾನಮಂತ್ರಿ ಮನಮೋಹನ್ ಸಿಂಗ್, "ದೇಶಕ್ಕೆ ಸೇವೆ ಸಲ್ಲಿಸಲು ನನ್ನಿಂದಾದಷ್ಟು ಪ್ರಯತ್ನಿಸಿದ್ದೇನೆ, ನನ್ನ ಜೀವನ ಮತ್ತು ಅಧಿಕಾರಾವಧಿ ತೆರೆದ ಪುಸ್ತಕ ಎಂದು" ಹೇಳಿದ್ದಾರೆ. 
 
ಹಿಂದಿ  ಭಾಷೆಯಲ್ಲಿ ಮಾತನಾಡಿದ ತರುವಾಯ ಇಂಗ್ಲೀಷ್‌ನಲ್ಲಿ ಮಾತನಾಡಿದ ಸಿಂಗ್ ಜನರು ಕೊಟ್ಟ ತೀರ್ಪಿಗೆ ಎಲ್ಲರೂ ಗೌರವ ಕೊಡಬೇಕು ಎಂದು ಹೇಳಿದರು. 
 
"ನಾನು ಯಾವಾಗಲೂ ಈ ಮಹಾನ್ ದೇಶಕ್ಕಾಗಿ ಸೇವೆ ಸಲ್ಲಿಸಲು ನನ್ನಿಂದಾದಷ್ಟು ಪ್ರಯತ್ನಿಸಿದ್ದೇನೆ. ಕಳೆದ 10 ವರ್ಷಗಳಲ್ಲಿ ಭಾರತ ಅನೇಕ ಯಶಸ್ಸನ್ನು ಮತ್ತು ಸಾಧನೆಯನ್ನು ಕಂಡಿದೆ. ಅದಕ್ಕಾಗಿ ನಾವು ಹೆಮ್ಮೆ ಪಟ್ಟುಕೊಳ್ಳ ಬೇಕು "ಎಂದು ಸಿಂಗ್ ಅಭಿಪ್ರಾಯಪಟ್ಟಿದ್ದಾರೆ. 
 
ರಾಷ್ಟ್ರಪತಿಯನ್ನು ಭೇಟಿಯಾಗಿ ರಾಜೀನಾಮೆಯನ್ನು ನೀಡುವ ಮೊದಲು ಅವರು ತಮ್ಮ ಕೊನೆಯ ಕ್ಯಾಬಿನೆಟ್ ಸಭೆಯನ್ನು ನಡೆಸಿ, 15ನೇ ಲೋಕಸಭೆಯನ್ನು ವಿಸರ್ಜಿಸುವ ನಿರ್ಣಯ ಮಂಡಿಸಿದರು 
 
ಸ್ಥಾನ ತ್ಯಜಿಸಿ ಹೊರಹೋಗುತ್ತಿರುವ ಪ್ರಧಾನಿ ಮತ್ತು ಮಂತ್ರಿ ಮಂಡಲಕ್ಕೆ ಇಂದು ಸಂಜೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ರಾತ್ರಿ ಭೋಜನ ಕೂಟವನ್ನು ಏರ್ಪಡಿಸಿದ್ದಾರೆ. 
 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments