Webdunia - Bharat's app for daily news and videos

Install App

ಉತ್ತರಾಖಂಡ್`ನ ಸಿಎಂ ಆಗಿ ತ್ರಿವೇಂದ್ರ ಸಿಂಗ್ ರಾವತ್ ಪದಗ್ರಹಣ

Webdunia
ಶನಿವಾರ, 18 ಮಾರ್ಚ್ 2017 (17:22 IST)
ಉತ್ತರಾಖಂಡ್`ನ ಮುಖ್ಯಮಂತ್ರಿಯಾಗಿ ಬಿಜೆಪಿಯ ತ್ರಿವೇಂದ್ರ ಸಿಂಗ್ ರಾವತ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಗವರ್ನರ್ ಕೆ.ಕೆ. ಪೌಲ್ ಪ್ರತಿಜ್ಞಾವಿಧಿ ಬೋಧಿಸಿದರು. ವಿಧಾನಸಭಾ ಚುನಾವಣೆಯಲ್ಲಿ ಪ್ರಚಂಡ ಗೆಲುವು ಸಾಧಿಸಿದ್ದ ಬಿಜೆಪಿ 70 ಕ್ಷೇತ್ರಗಳ ಪೈಕಿ 57 ಸ್ಥಾನಗಳನ್ನ ಗೆದ್ದು ಸ್ಪಷ್ಟ ಬಹುಮತ ಪಡೆದಿತ್ತು.

ಪ್ರಧಾನಮಂತ್ರಿ ನರೇಂದ್ರಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸೇರಿದಂತೆ ಹಲವು ಬಿಜೆಪಿ ಗಣ್ಯರು ಪ್ರಮಾಣವಚನ ಸಮಾರಂಭಕ್ಕೆ ಸಾಕ್ಷಿಯಾದರು. ರಾವತ್ ಜೊತೆ 9 ಮಂದಿ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಸತ್ಪಾಲ್ ಮಹಾರಾಜ್, ಹರಕ್ ಸಿಂಗ್ ರಾವತ್, ಮದನ್ ಕೌಶಿಕ್, ಅರವಿಂದ್ ಪಾಂಡೇ, ಸುಭೋದ್ ಉನಿಯಾಲ್, ಯಶ್ ಪಾಲ್ ಆರ್ಯ, ಪ್ರಕಾಶ್ ಪಂತ್ ಪ್ರಮಾಣವಚನ ಸ್ವೀಕರಿಸಿದ ಪ್ರಮುಖರು.

ತ್ರಿವೇಂದ್ರ ಸಿಂಗ್ ರಾವತ್ ಕಾಂಗ್ರೆಸ್ ಅಭ್ಯರ್ಥಿ ಹೀರಾ ಸಿಂಗ್ ಅವರನ್ನ 24000 ಮತಗಳ ಅಂತರದಿಂದ ಸೋಲಿಸಿದ್ದರು. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments